Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...