Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...