Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...