Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...