Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...