Homeಮುಖಪುಟಸತಿ ಸಹಗಮನ ಆಚರಣೆಯನ್ನು ವೈಭವೀಕರಿಸಿದ ಬಿಜೆಪಿ ಸಂಸದ ಜೋಶಿ: ವಿಪಕ್ಷ ನಾಯಕರ ಆರೋಪ

ಸತಿ ಸಹಗಮನ ಆಚರಣೆಯನ್ನು ವೈಭವೀಕರಿಸಿದ ಬಿಜೆಪಿ ಸಂಸದ ಜೋಶಿ: ವಿಪಕ್ಷ ನಾಯಕರ ಆರೋಪ

- Advertisement -
- Advertisement -

ಬಿಜೆಪಿ ನಾಯಕ ಸಿಪಿ ಜೋಶಿ ಅವರು, ‘ಸತಿ ಸಹಗಮನ’ದಂತಹ ಕೆಟ್ಟ ಆಚರಣೆಯನ್ನು ವೈಭವೀಕರಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಮಂಗಳವಾರ ಸಂಸತ್ತಿನ ಬಾವಿಗಿಳಿದು ಪ್ರತಿಭಟಿಸಿದರು. ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯಿಂದ ಭಾರಿ ಗದ್ದಲ ಏರ್ಪಟ್ಟಿತು. ಆನಂತರ ಸ್ಪೀಕರ್ ಸದನವನ್ನು ಮುಂದೂಡಿದರು.

ರಾಜಸ್ಥಾನದ ಚಿತ್ತೋರ್‌ಗಢದ ಸಂಸದ ಜೋಶಿ ಅವರ ಹೇಳಿಕೆಗೆ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಆಕ್ಷೇಪಣೆ ಹೊರಹಾಕಿದರು. ಈ ವೇಳೆ ಅವರು ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ಒತ್ತಾಯ ಕೇಳಿಬಂದಿತು.

ಬಿಜೆಪಿ ಸಂಸದರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ ನಂತರ ಸಂಸತ್ತಿನ ಕೆಳಮನೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಗದ್ದಲ ಪ್ರಾರಂಭವಾಯಿತು. ಹಾಗಾಗಿ ಸದನವನ್ನು ಮಧ್ಯಾಹ್ನ 1:30ಕ್ಕೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಮಾತನಾಡುವ ವೇಳೆ ಜೋಶಿ ಅವರು, ಮೇವಾರ್‌ನ ರಾಣಿ ಪದ್ಮಾವತಿಯನ್ನು ಉಲ್ಲೇಖಿಸಿದ್ದಾರೆ. ರಾಣಿ ಪದ್ಮಾವತಿ ಆಕ್ರಮಣಕಾರ ಅಲ್ಲಾವುದೀನ್ ಖಿಲ್ಜಿಯಿಂದ ತನ್ನ ಗೌರವವನ್ನು ರಕ್ಷಿಸಲು ‘ಜೌಹರ್’ ಮಾಡುವ ಮೂಲಕ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ವಕೀಲೆ ವಿಕ್ಟೋರಿಯಾ ಗೌರಿ ಮದ್ರಾಸ್‌ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ; ಸುಪ್ರೀಂನಲ್ಲಿ ತಕರಾರು

ಜೌಹರ್ ಎಂಬುದು ವಿದೇಶಿ ಆಕ್ರಮಣಕಾರರಿಂದ ಸೆರೆಹಿಡಿಯುವಿಕೆ ಅಥವಾ ಅತ್ಯಾಚಾರವನ್ನು ತಪ್ಪಿಸಲು ಭಾರತದ ಭಾಗಗಳಲ್ಲಿ ಮಹಿಳೆಯರಿಂದ ಸಾಮೂಹಿಕ ಸ್ವಯಂ-ದಹನದ ಹಳೆಯ ಅಭ್ಯಾಸವಾಗಿತ್ತು.

ಜೋಶಿ ಅವರು ‘ಸತಿ ಸಹಗಮನ’ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಪ್ರತಿಪಕ್ಷದ ಸದಸ್ಯರಾದ ಎನ್‌ಸಿಪಿಯ ಸುಪ್ರಿಯಾ ಸುಳೆ, ಡಿಎಂಕೆಯ ಕನಿಮೋಳಿ, ದಯಾನಿಧಿ ಮಾರನ್, ಮತ್ತು ಕಾಂಗ್ರೆಸ್‌ನಿಂದ ಎ ರಾಜಾ, ಕೆ ಮುರಳೀಧರನ್ ಮತ್ತು ಇಮ್ತಿಯಾಜ್ ಜಲೀಲ್ (ಎಐಎಂಐಎಂ) ಅವರು ಪ್ರತಿಪಾದಿಸಿದರು.

ಆ ವೇಳೆ ಸಿಪಿ ಜೋಶಿ ಅವರು, ”ಸತಿ ಪದ್ಧತಿಯ ಬಗ್ಗೆ ಯಾವುದೇ ಉಲ್ಲೇಖವನ್ನು ನಾನು ಮಾಡಿಲ್ಲ. ಆದರೆ ಪದ್ಮಾವತಿ ತನ್ನ ಗೌರವವನ್ನು ರಕ್ಷಿಸಲು ‘ಜೌಹರ್’ (ಸತಿ ಸಹಗಮನ) ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದೇನೆ” ಎಂದು ಹೇಳಿದರು.

ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದಂತೆ, ”ನಾನು ನನ್ನ ಮಾತಿಗೆ ಬದ್ಧನಾಗಿದ್ದೇನೆ” ಎಂದು ಜೋಶಿ ಹೇಳಿದರು.

ಇದಕ್ಕೂ ಮೊದಲು ಲೋಕಸಭೆಯ ಸದನದಲ್ಲಿ, ಸಾರ್ವಜನಿಕ ವಲಯದ ಸಂಸ್ಥೆಗಳಾದ ಎಲ್‌ಐಸಿ ಮತ್ತು ಎಸ್‌ಬಿಐ ಹೂಡಿಕೆಯಲ್ಲಿನ ವಂಚನೆಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಮಾತನಾಡಿ, ಪ್ರತಿಪಕ್ಷಗಳು ಕೃತಜ್ಞತಾ ನಿರ್ಣಯಕ್ಕೆ ಅನುಮತಿ ನೀಡಲು ಸಿದ್ಧವಿದ್ದರೂ, ಸಧ್ಯ ನಡೆಯುತ್ತಿರುವ ಹಿಂಡನ್‌ಬರ್ಗ್-ಅದಾನಿ ವಿವಾದಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುವುದು “ಮೊದಲ ಆದ್ಯತೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...