Homeಮುಖಪುಟಸತಿ ಸಹಗಮನ ಆಚರಣೆಯನ್ನು ವೈಭವೀಕರಿಸಿದ ಬಿಜೆಪಿ ಸಂಸದ ಜೋಶಿ: ವಿಪಕ್ಷ ನಾಯಕರ ಆರೋಪ

ಸತಿ ಸಹಗಮನ ಆಚರಣೆಯನ್ನು ವೈಭವೀಕರಿಸಿದ ಬಿಜೆಪಿ ಸಂಸದ ಜೋಶಿ: ವಿಪಕ್ಷ ನಾಯಕರ ಆರೋಪ

- Advertisement -
- Advertisement -

ಬಿಜೆಪಿ ನಾಯಕ ಸಿಪಿ ಜೋಶಿ ಅವರು, ‘ಸತಿ ಸಹಗಮನ’ದಂತಹ ಕೆಟ್ಟ ಆಚರಣೆಯನ್ನು ವೈಭವೀಕರಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಮಂಗಳವಾರ ಸಂಸತ್ತಿನ ಬಾವಿಗಿಳಿದು ಪ್ರತಿಭಟಿಸಿದರು. ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯಿಂದ ಭಾರಿ ಗದ್ದಲ ಏರ್ಪಟ್ಟಿತು. ಆನಂತರ ಸ್ಪೀಕರ್ ಸದನವನ್ನು ಮುಂದೂಡಿದರು.

ರಾಜಸ್ಥಾನದ ಚಿತ್ತೋರ್‌ಗಢದ ಸಂಸದ ಜೋಶಿ ಅವರ ಹೇಳಿಕೆಗೆ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಆಕ್ಷೇಪಣೆ ಹೊರಹಾಕಿದರು. ಈ ವೇಳೆ ಅವರು ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ಒತ್ತಾಯ ಕೇಳಿಬಂದಿತು.

ಬಿಜೆಪಿ ಸಂಸದರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ ನಂತರ ಸಂಸತ್ತಿನ ಕೆಳಮನೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಗದ್ದಲ ಪ್ರಾರಂಭವಾಯಿತು. ಹಾಗಾಗಿ ಸದನವನ್ನು ಮಧ್ಯಾಹ್ನ 1:30ಕ್ಕೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಮಾತನಾಡುವ ವೇಳೆ ಜೋಶಿ ಅವರು, ಮೇವಾರ್‌ನ ರಾಣಿ ಪದ್ಮಾವತಿಯನ್ನು ಉಲ್ಲೇಖಿಸಿದ್ದಾರೆ. ರಾಣಿ ಪದ್ಮಾವತಿ ಆಕ್ರಮಣಕಾರ ಅಲ್ಲಾವುದೀನ್ ಖಿಲ್ಜಿಯಿಂದ ತನ್ನ ಗೌರವವನ್ನು ರಕ್ಷಿಸಲು ‘ಜೌಹರ್’ ಮಾಡುವ ಮೂಲಕ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ವಕೀಲೆ ವಿಕ್ಟೋರಿಯಾ ಗೌರಿ ಮದ್ರಾಸ್‌ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ; ಸುಪ್ರೀಂನಲ್ಲಿ ತಕರಾರು

ಜೌಹರ್ ಎಂಬುದು ವಿದೇಶಿ ಆಕ್ರಮಣಕಾರರಿಂದ ಸೆರೆಹಿಡಿಯುವಿಕೆ ಅಥವಾ ಅತ್ಯಾಚಾರವನ್ನು ತಪ್ಪಿಸಲು ಭಾರತದ ಭಾಗಗಳಲ್ಲಿ ಮಹಿಳೆಯರಿಂದ ಸಾಮೂಹಿಕ ಸ್ವಯಂ-ದಹನದ ಹಳೆಯ ಅಭ್ಯಾಸವಾಗಿತ್ತು.

ಜೋಶಿ ಅವರು ‘ಸತಿ ಸಹಗಮನ’ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಪ್ರತಿಪಕ್ಷದ ಸದಸ್ಯರಾದ ಎನ್‌ಸಿಪಿಯ ಸುಪ್ರಿಯಾ ಸುಳೆ, ಡಿಎಂಕೆಯ ಕನಿಮೋಳಿ, ದಯಾನಿಧಿ ಮಾರನ್, ಮತ್ತು ಕಾಂಗ್ರೆಸ್‌ನಿಂದ ಎ ರಾಜಾ, ಕೆ ಮುರಳೀಧರನ್ ಮತ್ತು ಇಮ್ತಿಯಾಜ್ ಜಲೀಲ್ (ಎಐಎಂಐಎಂ) ಅವರು ಪ್ರತಿಪಾದಿಸಿದರು.

ಆ ವೇಳೆ ಸಿಪಿ ಜೋಶಿ ಅವರು, ”ಸತಿ ಪದ್ಧತಿಯ ಬಗ್ಗೆ ಯಾವುದೇ ಉಲ್ಲೇಖವನ್ನು ನಾನು ಮಾಡಿಲ್ಲ. ಆದರೆ ಪದ್ಮಾವತಿ ತನ್ನ ಗೌರವವನ್ನು ರಕ್ಷಿಸಲು ‘ಜೌಹರ್’ (ಸತಿ ಸಹಗಮನ) ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದೇನೆ” ಎಂದು ಹೇಳಿದರು.

ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದಂತೆ, ”ನಾನು ನನ್ನ ಮಾತಿಗೆ ಬದ್ಧನಾಗಿದ್ದೇನೆ” ಎಂದು ಜೋಶಿ ಹೇಳಿದರು.

ಇದಕ್ಕೂ ಮೊದಲು ಲೋಕಸಭೆಯ ಸದನದಲ್ಲಿ, ಸಾರ್ವಜನಿಕ ವಲಯದ ಸಂಸ್ಥೆಗಳಾದ ಎಲ್‌ಐಸಿ ಮತ್ತು ಎಸ್‌ಬಿಐ ಹೂಡಿಕೆಯಲ್ಲಿನ ವಂಚನೆಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಮಾತನಾಡಿ, ಪ್ರತಿಪಕ್ಷಗಳು ಕೃತಜ್ಞತಾ ನಿರ್ಣಯಕ್ಕೆ ಅನುಮತಿ ನೀಡಲು ಸಿದ್ಧವಿದ್ದರೂ, ಸಧ್ಯ ನಡೆಯುತ್ತಿರುವ ಹಿಂಡನ್‌ಬರ್ಗ್-ಅದಾನಿ ವಿವಾದಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುವುದು “ಮೊದಲ ಆದ್ಯತೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...