Homeಕರ್ನಾಟಕಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

- Advertisement -
- Advertisement -

ಬಿಜೆಪಿ ನಾಯಕ ಹಾಗೂ ವಿಆರ್‌ಎಲ್‌ ಮಾಲಿಕರಾದ ವಿಜಯ ಸಂಕೇಶ್ವರ ಅವರು, ಕೊರೊನಾ ಸೋಂಕಿನಿಂದಾಗಿ ಉಂಟಾಗುವ ಆಮ್ಲಜನಕದ ಸಮಸ್ಯೆಯನ್ನು ಬಗೆಹರಿಸಲು, ಮೂಗಿಗೆ ನಿಂಬೆ ರಸ ಹಾಕುವಂತೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವೈಜ್ಞಾನಿಕ ಸಲಹೆ ನೀಡಿ ತಜ್ಞ ವೈದ್ಯರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಬಿಜೆಪಿ ಸಂಸದ ಎಸ್‌. ಮುನಿಸ್ವಾಮಿ ಕೂಡಾ ಸಂಕೇಶ್ವರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದ್ದಾರೆ.

ಕೊಲಾರದ ಬಿಜೆಪಿ ಸಂಸದರಾಗಿರುವ ಎಸ್‌. ಮುನಿಸ್ವಾಮಿ ಸೋಮವಾರ ತನ್ನ ಫೇಸ್‌ಬುಕ್‌ನಲ್ಲಿ ಸಂಕೇಶ್ವರರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಕೊರೊನಾ ಸೋಂಕಿನಿಂದ ಕೆಮ್ಮು, ನೆಗಡಿ ಮತ್ತು ಉಸಿರಾಟಕ್ಕೆ ತೊಂದರೆಯಾದರೆ ನಿಂಬೆಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಆಕ್ಸಿಜನ್ ಸಮಸ್ಯೆ ಕಡಿಮೆಯಾಗುತ್ತದೆ. ಇದನ್ನು 200 ಕ್ಕೂ ಹೆಚ್ಚು ಜನ ಪ್ರಯೋಗ ಮಾಡಿದ್ದಾರೆ ಎಂದು ಡಾ॥ವಿಜಯ್ ಸಂಕೇಶ್ವರ ರವರು ಹೇಳಿದ್ದಾರೆ. ಎಲ್ಲರೂ ಆಕ್ಸಿಜನ್ ಸಮಸ್ಯೆ ಉಂಟಾದಲ್ಲಿ ಮನೆಯ ಮದ್ದನ್ನು ಬಳಸಿ” ಎಂದು ಹೇಳಿದ್ದಾರೆ.(ಫೇಸ್‌ಬುಕ್ ಆರ್ಕೈವ್‌ ಇಲ್ಲಿದೆ)

ಸಂಸದನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾಲದಲ್ಲಿ ಅವೈಜ್ಞಾನಿಕತೆಯನ್ನು ಹರಡುತ್ತಿರುವುದು ಎಷ್ಟು ಸರಿ ಎಂದು ಹಲವಾರು ಜನರು ಸಂಸದ ಮುನಿಸ್ವಾಮಿ ನೀಡಿರುವ ಸಲಹೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಈ ಬಗ್ಗೆ ನಾನುಗೌರಿ.ಕಾಮ್‌‌ನೊಂದಿಗೆ ಮಾತನಾಡಿದ ವೈದ್ಯರೊಬ್ಬರು, “ಮುಖ್ಯವಾಗಿ ಮೂಗಿನಲ್ಲಿ ಗಾಳಿಯನ್ನು ಬಿಟ್ಟು ಬೇರೆ ಯಾವುದೆ ವಸ್ತುಗಳನ್ನು ಸೇವಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಶ್ವಾಸನಾಳಕ್ಕೆ ಗಂಭೀರ ಹಾನಿಯುಂಟು ಮಾಡುತ್ತದೆ. ಅಷ್ಟೇ ಅಲ್ಲದೆ ನಿಂಬೆ ರಸದಿಂದ ಕೊರೊನಾ ವೈರಸ್ ಸಾಯುತ್ತದೆ ಎಂಬುದಕ್ಕೆ ಯಾವ ವೈಜ್ಞಾನಿಕ ಆಧಾರವು ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು, ಅದರಲ್ಲೂ ಕೊರೊನಾದಂತಹ ಸಮಯದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹರಡಬಾರದು” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಅಮೀನ್ ಮಟ್ಟು ಅವರು, “ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು” ಎಂದು ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದರ ಫೇಸ್‌ಬುಕ್ ಸ್ಟೇಟಸ್‌ನಲ್ಲಿ ಕೂಡಾ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮ ಎಂಬ ಫೇಸ್‌ಬುಕ್ ಖಾತೆಯು, “ಬರೀ ಇದೆ ಆಯ್ತು. ಗೋಮೂತ್ರ ಕುಡಿಯಿರಿ, ಚಪ್ಪಾಳೆತಟ್ಟಿ, ಜಾಗಟೆ ಹೊಡಿರಿ, ಲಿಂಬೆರಸ ಕುಡಿರಿ. ಸಾಮಾನ್ಯನ್ನು ವೈಜ್ಞಾನಿಕವಾಗಿ ಮೇಲೆತ್ತುವುದ ಬಿಟ್ಟು ಬರೀ ಇಂಥ ಮೂಢ ನಂಬಿಕೆಗಳಿಂದ ದೇಶವನ್ನು ಅಧಃ ಪತನದತ್ತ ತೆಗೆದುಕೊಂಡು ಹೋಗುತ್ತಿದ್ದೀರಿ. ಸಂಶಯವೇ ಇಲ್ಲ ಅದಕ್ಕೋಸ್ಕರವೆ ಬಿಜೆಪಿಯನ್ನು ಜನರು ಅಷ್ಟು ವಿರೋಧ ಮಾಡುವುದು. ವೈಜ್ಞಾನಿಕ ತಿಳುವಳಿಕೆ ಇಲ್ಲ, ವೈಚಾರಿಕತೆ ಅಂತೂ ಇಲ್ಲವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋಹನ್ ಬಲ್ಲಿದವ್‌ ಅವರು, “ವಿಜಯ ಸಂಕೇಶ್ವರ ಅವರು ವೈದ್ಯಕೀಯ ಶಿಕ್ಷಣ ಎಲ್ಲಿ ಪಡೆದರು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...