Homeಕರ್ನಾಟಕಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

- Advertisement -
- Advertisement -

ಬಿಜೆಪಿ ನಾಯಕ ಹಾಗೂ ವಿಆರ್‌ಎಲ್‌ ಮಾಲಿಕರಾದ ವಿಜಯ ಸಂಕೇಶ್ವರ ಅವರು, ಕೊರೊನಾ ಸೋಂಕಿನಿಂದಾಗಿ ಉಂಟಾಗುವ ಆಮ್ಲಜನಕದ ಸಮಸ್ಯೆಯನ್ನು ಬಗೆಹರಿಸಲು, ಮೂಗಿಗೆ ನಿಂಬೆ ರಸ ಹಾಕುವಂತೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವೈಜ್ಞಾನಿಕ ಸಲಹೆ ನೀಡಿ ತಜ್ಞ ವೈದ್ಯರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಬಿಜೆಪಿ ಸಂಸದ ಎಸ್‌. ಮುನಿಸ್ವಾಮಿ ಕೂಡಾ ಸಂಕೇಶ್ವರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದ್ದಾರೆ.

ಕೊಲಾರದ ಬಿಜೆಪಿ ಸಂಸದರಾಗಿರುವ ಎಸ್‌. ಮುನಿಸ್ವಾಮಿ ಸೋಮವಾರ ತನ್ನ ಫೇಸ್‌ಬುಕ್‌ನಲ್ಲಿ ಸಂಕೇಶ್ವರರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಕೊರೊನಾ ಸೋಂಕಿನಿಂದ ಕೆಮ್ಮು, ನೆಗಡಿ ಮತ್ತು ಉಸಿರಾಟಕ್ಕೆ ತೊಂದರೆಯಾದರೆ ನಿಂಬೆಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಆಕ್ಸಿಜನ್ ಸಮಸ್ಯೆ ಕಡಿಮೆಯಾಗುತ್ತದೆ. ಇದನ್ನು 200 ಕ್ಕೂ ಹೆಚ್ಚು ಜನ ಪ್ರಯೋಗ ಮಾಡಿದ್ದಾರೆ ಎಂದು ಡಾ॥ವಿಜಯ್ ಸಂಕೇಶ್ವರ ರವರು ಹೇಳಿದ್ದಾರೆ. ಎಲ್ಲರೂ ಆಕ್ಸಿಜನ್ ಸಮಸ್ಯೆ ಉಂಟಾದಲ್ಲಿ ಮನೆಯ ಮದ್ದನ್ನು ಬಳಸಿ” ಎಂದು ಹೇಳಿದ್ದಾರೆ.(ಫೇಸ್‌ಬುಕ್ ಆರ್ಕೈವ್‌ ಇಲ್ಲಿದೆ)

ಸಂಸದನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾಲದಲ್ಲಿ ಅವೈಜ್ಞಾನಿಕತೆಯನ್ನು ಹರಡುತ್ತಿರುವುದು ಎಷ್ಟು ಸರಿ ಎಂದು ಹಲವಾರು ಜನರು ಸಂಸದ ಮುನಿಸ್ವಾಮಿ ನೀಡಿರುವ ಸಲಹೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಈ ಬಗ್ಗೆ ನಾನುಗೌರಿ.ಕಾಮ್‌‌ನೊಂದಿಗೆ ಮಾತನಾಡಿದ ವೈದ್ಯರೊಬ್ಬರು, “ಮುಖ್ಯವಾಗಿ ಮೂಗಿನಲ್ಲಿ ಗಾಳಿಯನ್ನು ಬಿಟ್ಟು ಬೇರೆ ಯಾವುದೆ ವಸ್ತುಗಳನ್ನು ಸೇವಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಶ್ವಾಸನಾಳಕ್ಕೆ ಗಂಭೀರ ಹಾನಿಯುಂಟು ಮಾಡುತ್ತದೆ. ಅಷ್ಟೇ ಅಲ್ಲದೆ ನಿಂಬೆ ರಸದಿಂದ ಕೊರೊನಾ ವೈರಸ್ ಸಾಯುತ್ತದೆ ಎಂಬುದಕ್ಕೆ ಯಾವ ವೈಜ್ಞಾನಿಕ ಆಧಾರವು ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು, ಅದರಲ್ಲೂ ಕೊರೊನಾದಂತಹ ಸಮಯದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹರಡಬಾರದು” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಅಮೀನ್ ಮಟ್ಟು ಅವರು, “ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು” ಎಂದು ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದರ ಫೇಸ್‌ಬುಕ್ ಸ್ಟೇಟಸ್‌ನಲ್ಲಿ ಕೂಡಾ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮ ಎಂಬ ಫೇಸ್‌ಬುಕ್ ಖಾತೆಯು, “ಬರೀ ಇದೆ ಆಯ್ತು. ಗೋಮೂತ್ರ ಕುಡಿಯಿರಿ, ಚಪ್ಪಾಳೆತಟ್ಟಿ, ಜಾಗಟೆ ಹೊಡಿರಿ, ಲಿಂಬೆರಸ ಕುಡಿರಿ. ಸಾಮಾನ್ಯನ್ನು ವೈಜ್ಞಾನಿಕವಾಗಿ ಮೇಲೆತ್ತುವುದ ಬಿಟ್ಟು ಬರೀ ಇಂಥ ಮೂಢ ನಂಬಿಕೆಗಳಿಂದ ದೇಶವನ್ನು ಅಧಃ ಪತನದತ್ತ ತೆಗೆದುಕೊಂಡು ಹೋಗುತ್ತಿದ್ದೀರಿ. ಸಂಶಯವೇ ಇಲ್ಲ ಅದಕ್ಕೋಸ್ಕರವೆ ಬಿಜೆಪಿಯನ್ನು ಜನರು ಅಷ್ಟು ವಿರೋಧ ಮಾಡುವುದು. ವೈಜ್ಞಾನಿಕ ತಿಳುವಳಿಕೆ ಇಲ್ಲ, ವೈಚಾರಿಕತೆ ಅಂತೂ ಇಲ್ಲವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋಹನ್ ಬಲ್ಲಿದವ್‌ ಅವರು, “ವಿಜಯ ಸಂಕೇಶ್ವರ ಅವರು ವೈದ್ಯಕೀಯ ಶಿಕ್ಷಣ ಎಲ್ಲಿ ಪಡೆದರು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...