Homeಕರ್ನಾಟಕಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

- Advertisement -
- Advertisement -

ಬಿಜೆಪಿ ನಾಯಕ ಹಾಗೂ ವಿಆರ್‌ಎಲ್‌ ಮಾಲಿಕರಾದ ವಿಜಯ ಸಂಕೇಶ್ವರ ಅವರು, ಕೊರೊನಾ ಸೋಂಕಿನಿಂದಾಗಿ ಉಂಟಾಗುವ ಆಮ್ಲಜನಕದ ಸಮಸ್ಯೆಯನ್ನು ಬಗೆಹರಿಸಲು, ಮೂಗಿಗೆ ನಿಂಬೆ ರಸ ಹಾಕುವಂತೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವೈಜ್ಞಾನಿಕ ಸಲಹೆ ನೀಡಿ ತಜ್ಞ ವೈದ್ಯರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಬಿಜೆಪಿ ಸಂಸದ ಎಸ್‌. ಮುನಿಸ್ವಾಮಿ ಕೂಡಾ ಸಂಕೇಶ್ವರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದ್ದಾರೆ.

ಕೊಲಾರದ ಬಿಜೆಪಿ ಸಂಸದರಾಗಿರುವ ಎಸ್‌. ಮುನಿಸ್ವಾಮಿ ಸೋಮವಾರ ತನ್ನ ಫೇಸ್‌ಬುಕ್‌ನಲ್ಲಿ ಸಂಕೇಶ್ವರರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಕೊರೊನಾ ಸೋಂಕಿನಿಂದ ಕೆಮ್ಮು, ನೆಗಡಿ ಮತ್ತು ಉಸಿರಾಟಕ್ಕೆ ತೊಂದರೆಯಾದರೆ ನಿಂಬೆಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಆಕ್ಸಿಜನ್ ಸಮಸ್ಯೆ ಕಡಿಮೆಯಾಗುತ್ತದೆ. ಇದನ್ನು 200 ಕ್ಕೂ ಹೆಚ್ಚು ಜನ ಪ್ರಯೋಗ ಮಾಡಿದ್ದಾರೆ ಎಂದು ಡಾ॥ವಿಜಯ್ ಸಂಕೇಶ್ವರ ರವರು ಹೇಳಿದ್ದಾರೆ. ಎಲ್ಲರೂ ಆಕ್ಸಿಜನ್ ಸಮಸ್ಯೆ ಉಂಟಾದಲ್ಲಿ ಮನೆಯ ಮದ್ದನ್ನು ಬಳಸಿ” ಎಂದು ಹೇಳಿದ್ದಾರೆ.(ಫೇಸ್‌ಬುಕ್ ಆರ್ಕೈವ್‌ ಇಲ್ಲಿದೆ)

ಸಂಸದನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾಲದಲ್ಲಿ ಅವೈಜ್ಞಾನಿಕತೆಯನ್ನು ಹರಡುತ್ತಿರುವುದು ಎಷ್ಟು ಸರಿ ಎಂದು ಹಲವಾರು ಜನರು ಸಂಸದ ಮುನಿಸ್ವಾಮಿ ನೀಡಿರುವ ಸಲಹೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಈ ಬಗ್ಗೆ ನಾನುಗೌರಿ.ಕಾಮ್‌‌ನೊಂದಿಗೆ ಮಾತನಾಡಿದ ವೈದ್ಯರೊಬ್ಬರು, “ಮುಖ್ಯವಾಗಿ ಮೂಗಿನಲ್ಲಿ ಗಾಳಿಯನ್ನು ಬಿಟ್ಟು ಬೇರೆ ಯಾವುದೆ ವಸ್ತುಗಳನ್ನು ಸೇವಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಶ್ವಾಸನಾಳಕ್ಕೆ ಗಂಭೀರ ಹಾನಿಯುಂಟು ಮಾಡುತ್ತದೆ. ಅಷ್ಟೇ ಅಲ್ಲದೆ ನಿಂಬೆ ರಸದಿಂದ ಕೊರೊನಾ ವೈರಸ್ ಸಾಯುತ್ತದೆ ಎಂಬುದಕ್ಕೆ ಯಾವ ವೈಜ್ಞಾನಿಕ ಆಧಾರವು ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು, ಅದರಲ್ಲೂ ಕೊರೊನಾದಂತಹ ಸಮಯದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹರಡಬಾರದು” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಅಮೀನ್ ಮಟ್ಟು ಅವರು, “ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು” ಎಂದು ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದರ ಫೇಸ್‌ಬುಕ್ ಸ್ಟೇಟಸ್‌ನಲ್ಲಿ ಕೂಡಾ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮ ಎಂಬ ಫೇಸ್‌ಬುಕ್ ಖಾತೆಯು, “ಬರೀ ಇದೆ ಆಯ್ತು. ಗೋಮೂತ್ರ ಕುಡಿಯಿರಿ, ಚಪ್ಪಾಳೆತಟ್ಟಿ, ಜಾಗಟೆ ಹೊಡಿರಿ, ಲಿಂಬೆರಸ ಕುಡಿರಿ. ಸಾಮಾನ್ಯನ್ನು ವೈಜ್ಞಾನಿಕವಾಗಿ ಮೇಲೆತ್ತುವುದ ಬಿಟ್ಟು ಬರೀ ಇಂಥ ಮೂಢ ನಂಬಿಕೆಗಳಿಂದ ದೇಶವನ್ನು ಅಧಃ ಪತನದತ್ತ ತೆಗೆದುಕೊಂಡು ಹೋಗುತ್ತಿದ್ದೀರಿ. ಸಂಶಯವೇ ಇಲ್ಲ ಅದಕ್ಕೋಸ್ಕರವೆ ಬಿಜೆಪಿಯನ್ನು ಜನರು ಅಷ್ಟು ವಿರೋಧ ಮಾಡುವುದು. ವೈಜ್ಞಾನಿಕ ತಿಳುವಳಿಕೆ ಇಲ್ಲ, ವೈಚಾರಿಕತೆ ಅಂತೂ ಇಲ್ಲವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋಹನ್ ಬಲ್ಲಿದವ್‌ ಅವರು, “ವಿಜಯ ಸಂಕೇಶ್ವರ ಅವರು ವೈದ್ಯಕೀಯ ಶಿಕ್ಷಣ ಎಲ್ಲಿ ಪಡೆದರು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...