Homeಕರ್ನಾಟಕಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

ಸಂಕೇಶ್ವರರ ‘ನಿಂಬೆ’ ಸಲಹೆ ಪಾಲಿಸಿ ಎಂದ ಬಿಜೆಪಿ ಸಂಸದ; ಅವೈಜ್ಞಾನಿಕತೆ ಹರಡುತ್ತಿದ್ದಾರೆಂದು ಆಕ್ರೋಶ

- Advertisement -
- Advertisement -

ಬಿಜೆಪಿ ನಾಯಕ ಹಾಗೂ ವಿಆರ್‌ಎಲ್‌ ಮಾಲಿಕರಾದ ವಿಜಯ ಸಂಕೇಶ್ವರ ಅವರು, ಕೊರೊನಾ ಸೋಂಕಿನಿಂದಾಗಿ ಉಂಟಾಗುವ ಆಮ್ಲಜನಕದ ಸಮಸ್ಯೆಯನ್ನು ಬಗೆಹರಿಸಲು, ಮೂಗಿಗೆ ನಿಂಬೆ ರಸ ಹಾಕುವಂತೆ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವೈಜ್ಞಾನಿಕ ಸಲಹೆ ನೀಡಿ ತಜ್ಞ ವೈದ್ಯರ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಬಿಜೆಪಿ ಸಂಸದ ಎಸ್‌. ಮುನಿಸ್ವಾಮಿ ಕೂಡಾ ಸಂಕೇಶ್ವರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದ್ದಾರೆ.

ಕೊಲಾರದ ಬಿಜೆಪಿ ಸಂಸದರಾಗಿರುವ ಎಸ್‌. ಮುನಿಸ್ವಾಮಿ ಸೋಮವಾರ ತನ್ನ ಫೇಸ್‌ಬುಕ್‌ನಲ್ಲಿ ಸಂಕೇಶ್ವರರ ಅವೈಜ್ಞಾನಿಕ ಸಲಹೆಯನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್‌ ಸ್ಥಾಪನೆ ವಿಳಂಬಕ್ಕೆ ಮೋದಿ ಸರ್ಕಾರವೇ ಕಾರಣ ಹೊರತು ರಾಜ್ಯಗಳಲ್ಲ

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಕೊರೊನಾ ಸೋಂಕಿನಿಂದ ಕೆಮ್ಮು, ನೆಗಡಿ ಮತ್ತು ಉಸಿರಾಟಕ್ಕೆ ತೊಂದರೆಯಾದರೆ ನಿಂಬೆಹಣ್ಣಿನ ರಸವನ್ನು ಮೂಗಿನಲ್ಲಿ ಹಾಕಿಕೊಳ್ಳುವುದರಿಂದ ಆಕ್ಸಿಜನ್ ಸಮಸ್ಯೆ ಕಡಿಮೆಯಾಗುತ್ತದೆ. ಇದನ್ನು 200 ಕ್ಕೂ ಹೆಚ್ಚು ಜನ ಪ್ರಯೋಗ ಮಾಡಿದ್ದಾರೆ ಎಂದು ಡಾ॥ವಿಜಯ್ ಸಂಕೇಶ್ವರ ರವರು ಹೇಳಿದ್ದಾರೆ. ಎಲ್ಲರೂ ಆಕ್ಸಿಜನ್ ಸಮಸ್ಯೆ ಉಂಟಾದಲ್ಲಿ ಮನೆಯ ಮದ್ದನ್ನು ಬಳಸಿ” ಎಂದು ಹೇಳಿದ್ದಾರೆ.(ಫೇಸ್‌ಬುಕ್ ಆರ್ಕೈವ್‌ ಇಲ್ಲಿದೆ)

ಸಂಸದನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಕೊರೊನಾ ತೀವ್ರವಾಗಿ ಹರಡುತ್ತಿರುವ ಕಾಲದಲ್ಲಿ ಅವೈಜ್ಞಾನಿಕತೆಯನ್ನು ಹರಡುತ್ತಿರುವುದು ಎಷ್ಟು ಸರಿ ಎಂದು ಹಲವಾರು ಜನರು ಸಂಸದ ಮುನಿಸ್ವಾಮಿ ನೀಡಿರುವ ಸಲಹೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಿಂಗಾಯತ ಧರ್ಮ ಕುರಿತು ಎಂ.ಬಿ. ಪಾಟೀಲ್ ಬಗ್ಗೆ ವಿಜಯ್ ಸಂಕೇಶ್ವರ್ ಪತ್ರಿಕೆಯಲ್ಲಿ ಫೇಕ್ ನ್ಯೂಸ್

ಈ ಬಗ್ಗೆ ನಾನುಗೌರಿ.ಕಾಮ್‌‌ನೊಂದಿಗೆ ಮಾತನಾಡಿದ ವೈದ್ಯರೊಬ್ಬರು, “ಮುಖ್ಯವಾಗಿ ಮೂಗಿನಲ್ಲಿ ಗಾಳಿಯನ್ನು ಬಿಟ್ಟು ಬೇರೆ ಯಾವುದೆ ವಸ್ತುಗಳನ್ನು ಸೇವಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಶ್ವಾಸನಾಳಕ್ಕೆ ಗಂಭೀರ ಹಾನಿಯುಂಟು ಮಾಡುತ್ತದೆ. ಅಷ್ಟೇ ಅಲ್ಲದೆ ನಿಂಬೆ ರಸದಿಂದ ಕೊರೊನಾ ವೈರಸ್ ಸಾಯುತ್ತದೆ ಎಂಬುದಕ್ಕೆ ಯಾವ ವೈಜ್ಞಾನಿಕ ಆಧಾರವು ಇಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು, ಅದರಲ್ಲೂ ಕೊರೊನಾದಂತಹ ಸಮಯದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹರಡಬಾರದು” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಅಮೀನ್ ಮಟ್ಟು ಅವರು, “ಲಿಂಬೆ ಹಣ್ಣು ಚಿಕಿತ್ಸೆಯ ಸಲಹೆ ನೀಡಿದ ಮಾಧ್ಯಮೋದ್ಯಮಿ ವಿಜಯ್ ಸಂಕೇಶ್ವರ್, ಕನ್ನಡ ಪತ್ರಿಕೋದ್ಯಮದ ಹಾಲಿನ ಬಟ್ಟಲಿಗೆ ಲಿಂಬೆಹುಳಿ ಹಿಂಡಿದವರು” ಎಂದು ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದರ ಫೇಸ್‌ಬುಕ್ ಸ್ಟೇಟಸ್‌ನಲ್ಲಿ ಕೂಡಾ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮ ಎಂಬ ಫೇಸ್‌ಬುಕ್ ಖಾತೆಯು, “ಬರೀ ಇದೆ ಆಯ್ತು. ಗೋಮೂತ್ರ ಕುಡಿಯಿರಿ, ಚಪ್ಪಾಳೆತಟ್ಟಿ, ಜಾಗಟೆ ಹೊಡಿರಿ, ಲಿಂಬೆರಸ ಕುಡಿರಿ. ಸಾಮಾನ್ಯನ್ನು ವೈಜ್ಞಾನಿಕವಾಗಿ ಮೇಲೆತ್ತುವುದ ಬಿಟ್ಟು ಬರೀ ಇಂಥ ಮೂಢ ನಂಬಿಕೆಗಳಿಂದ ದೇಶವನ್ನು ಅಧಃ ಪತನದತ್ತ ತೆಗೆದುಕೊಂಡು ಹೋಗುತ್ತಿದ್ದೀರಿ. ಸಂಶಯವೇ ಇಲ್ಲ ಅದಕ್ಕೋಸ್ಕರವೆ ಬಿಜೆಪಿಯನ್ನು ಜನರು ಅಷ್ಟು ವಿರೋಧ ಮಾಡುವುದು. ವೈಜ್ಞಾನಿಕ ತಿಳುವಳಿಕೆ ಇಲ್ಲ, ವೈಚಾರಿಕತೆ ಅಂತೂ ಇಲ್ಲವೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋಹನ್ ಬಲ್ಲಿದವ್‌ ಅವರು, “ವಿಜಯ ಸಂಕೇಶ್ವರ ಅವರು ವೈದ್ಯಕೀಯ ಶಿಕ್ಷಣ ಎಲ್ಲಿ ಪಡೆದರು” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...