Homeಮುಖಪುಟಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

- Advertisement -
- Advertisement -

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ.

“ಬಿಜು ಬಾಬು ಅವರು ನಮಗೆ ಯಾವಾಗಲೂ ಒಬ್ಬ ಉನ್ನತ ಮಟ್ಟದ ರಾಜನೀತಿಜ್ಞರಾಗಿದ್ದರು ಮತ್ತು ಮುಂದೆಯೂ ಹಾಗೆಯೇ ಇರುತ್ತಾರೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ನಾನು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ” ಎಂದು ದುಬೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ, ಅದರಲ್ಲೂ ವಿಶೇಷವಾಗಿ ಬಿಜು ಪಟ್ನಾಯಕ್ ಅವರ ವಿಷಯದಲ್ಲಿ ಹೀಗಾಗಿದೆ” ಎಂದು ದುಬೆ ತಿಳಿಸಿದ್ದಾರೆ. “ಮೊದಲನೆಯದಾಗಿ, ಈ ಹೇಳಿಕೆಯು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ನೆಹರೂ ಅವರ ಬಗ್ಗೆ ನಾನು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಬಿಜು ಬಾಬು ಅವರಿಗೆ ಸಂಬಂಧಿಸಿದ್ದು ಎಂದು ತಪ್ಪಾಗಿ ಗ್ರಹಿಸಲಾಗಿದೆ” ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ಕಲ್ ದಿವಸದ ಅಂಗವಾಗಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ನೀಡಿದ ಸಂದೇಶದಲ್ಲಿ, ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರನ್ನು ರಾಷ್ಟ್ರ ನಿರ್ಮಾಣದ ಬದ್ಧತೆಗಾಗಿ ಶ್ಲಾಘಿಸಿದ ನಂತರ ದುಬೆ ಈ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿಯವರು ಬಿಜು ಪಟ್ನಾಯಕ್ ಅವರನ್ನು ಧೈರ್ಯ ಮತ್ತು ಶಕ್ತಿಯ ಸಂಕೇತವೆಂದು ಬಣ್ಣಿಸಿದ್ದು, ಅವರ ಬಹುಮುಖ ವ್ಯಕ್ತಿತ್ವವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ಎಂದಿದ್ದಾರೆ.

ಮಾರ್ಚ್ 27ರಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಜಾರ್ಖಂಡ್‌ನ ಗೊಡ್ಡಾ ಕ್ಷೇತ್ರದ ಬಿಜೆಪಿ ಸಂಸದ ದುಬೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಅಮೆರಿಕದ ಬೆಂಬಲದೊಂದಿಗೆ ಮತ್ತು ಸಿಐಎ ಏಜೆಂಟ್‌ಗಳ ಸಹಯೋಗದೊಂದಿಗೆ ಚೀನಾ ವಿರುದ್ಧ 1962ರ ಯುದ್ಧವನ್ನು ಮಾಡಿದ್ದರು ಎಂದು ಆರೋಪಿಸಿದ್ದರು. ಅಲ್ಲದೆ, ಆಗಿನ ಒಡಿಶಾ ಮುಖ್ಯಮಂತ್ರಿಯಾಗಿದ್ದ ಬಿಜು ಪಟ್ನಾಯಕ್ ಅವರು ಅಮೆರಿಕ ಸರ್ಕಾರ, ಸಿಐಎ ಮತ್ತು ನೆಹರೂ ನಡುವೆ ಒಂದು “ಸಂಪರ್ಕ ಕೊಂಡಿ”ಯಾಗಿದ್ದರು ಎಂದಿದ್ದರು.

ಮತ್ತೊಂದು ಗಂಭೀರ ಆರೋಪ ಮಾಡಿದ್ದ ದುಬೆ, ಬಿಜು ಪಟ್ನಾಯಕ್ ಅವರು ಒಡಿಶಾದ ಚಾರ್ಬಾಟಿಯಾ ವಾಯುನೆಲೆಯಿಂದ ಅಮೆರಿಕದ ‘ಯು-2’ ಗೂಢಚಾರಿ ವಿಮಾನಗಳ ಕಾರ್ಯಾಚರಣೆಗೆ ಸಿಐಎಗೆ ನೆರವಾಗಿದ್ದರು ಮತ್ತು 1963ರಿಂದ 1979ರವರೆಗೆ ಆ ನೆಲೆಯಲ್ಲಿ ಭಾರತದಲ್ಲಿ ಅಮೆರಿಕದ ಮಿಲಿಟರಿ ಉಪಸ್ಥಿತಿಗೆ ಅವಕಾಶ ನೀಡಲಾಗಿತ್ತು ಎಂದು ದೂರಿದ್ದರು. ದುಬೆ ಅವರ ಈ ಹೇಳಿಕೆಗಳು ವ್ಯಾಪಕ ಖಂಡನೆಗೆ ಗುರಿಯಾಗಿತ್ತು. ಸ್ವತಃ ಬಿಜೆಪಿ ಪಕ್ಷದ ಒಳಗೂ ಅವರ ಸಹೋದ್ಯೋಗಿಗಳು ಈ ಮಾತುಗಳನ್ನು ‘ಅಸಂಬದ್ಧ’ ಎಂದು ಕರೆದಿದ್ದರು.

ಬಿಜು ಪಟ್ನಾಯಕ್ ಅವರ ಕಿರಿಯ ಪುತ್ರ ಮತ್ತು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದುಬೆ ಹೇಳಿಕೆಗಳನ್ನು ಖಂಡಿಸುತ್ತಾ, ಅವರಿಗೆ ‘ಮಾನಸಿಕ ವೈದ್ಯರ ಅಗತ್ಯವಿದೆ’ ಎಂದು ಲೇವಡಿ ಮಾಡಿದ್ದರು. ಅಷ್ಟೇ ಅಲ್ಲದೆ, ದುಬೆ ಅವರ ಹೇಳಿಕೆ ವಿರೋಧಿಸಿ, ಬಿಜೆಡಿ ಸಂಸದ ಸಾಸ್ಮಿತ್ ಪಾತ್ರ ಅವರು ದುಬೆ ನೇತೃತ್ವದ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಗೆ ರಾಜೀನಾಮೆ ನೀಡಿದ್ದರು.

ಬಿಜು ಪಟ್ನಾಯಕ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದ ಕುಟುಂಬದವರಾದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಅವರು, ಪಟ್ನಾಯಕ್ ಅವರ ದೇಶಪ್ರೇಮದ ಬಗ್ಗೆ ಅಪಪ್ರಚಾರ ಮಾಡುವುದು ‘ಕಾಲ್ಪನಿಕ ಮತ್ತು ಸಂಪೂರ್ಣವಾಗಿ ಹಾಸ್ಯಾಸ್ಪದ’ ಎಂದು ಹೇಳಿದ್ದರು.

ಪಕ್ಷಾತೀತವಾಗಿ ರಾಜಕೀಯ ನಾಯಕರು ಕೂಡ ಬಿಜು ಪಟ್ನಾಯಕ್ ವಿರುದ್ಧದ ಹೇಳಿಕೆಗಳನ್ನು ಖಂಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...