Homeಮುಖಪುಟಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

ಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ರಾಜ್ಯಸಭೆಯಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅವರ ಪ್ರಶ್ನೆಯನ್ನು 252 ಶಿಕ್ಷಣ ತಜ್ಞರು ಖಂಡಿಸಿದ್ದಾರೆ.

ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಯಾದವ್ ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದು, ಇದು “ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಮತ್ತು “ಭಾರತೀಯ ನಾಗರಿಕರಿಗೆ ಅವಮಾನಕರವಾಗಿದೆಯೇ? ಎಂದು ಸಂಸತ್ತಿನಲ್ಲಿ ಶಿಕ್ಷಣ ಸಚಿವಾಲಯದಿಂದ ಉತ್ತರವನ್ನು ಕೇಳಿದ್ದರು.

ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಭಯೋತ್ಪಾದನೆ ಬೋಧಿಸಲಾಗುತ್ತಿದೆ ಎನ್ನುವ ರೀತಿಯಲ್ಲಿ ಬಿಜೆಪಿ ಸಂಸದರು ಪ್ರಶ್ನೆಸಿರುವುದನ್ನು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆ 252 ಶಿಕ್ಷಣ ತಜ್ಞರು ಮತ್ತು ವಿದ್ವಾಂಸರ ಗುಂಪು ಖಂಡಿಸಿ, ಹೇಳಿಕೆ ಬಿಡುಗಡೆ ಮಾಡಿದ್ದಾರೆ.

252 ಶಿಕ್ಷಣ ತಜ್ಞರಲ್ಲಿ ಪ್ರಮುಖ ಇತಿಹಾಸಕಾರ ಮತ್ತು ಶೈಕ್ಷಣಿಕ ರೊಮಿಲಾ ಥಾಪರ್, ಜೆಎನ್‌ಯುನ ಪ್ರೊಫೆಸರ್ ಎಮೆರಿಟಾ ಸೇರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಸತೀಶ್ ದೇಶಪಾಂಡೆ, ನಂದಿನಿ ಸುಂದರ್, ಅಭಾ ದೇವ್ ಹಬೀಬ್ ಮತ್ತು ಅಪೂರ್ವಾನಂದ್. ಸುಕಾಂತ ಚೌಧುರಿ, ಜಾದವ್‌ಪುರ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ. ಲಕ್ಷ್ಮಿ ಸುಬ್ರಮಣಿಯನ್ ಮತ್ತು ಪಾರ್ಥ ಚಟರ್ಜಿ, ಕಲ್ಕತ್ತಾದ ಸಮಾಜ ವಿಜ್ಞಾನಗಳ ಅಧ್ಯಯನ ಕೇಂದ್ರದ ಗೌರವ ಪ್ರಾಧ್ಯಾಪಕರು. ಜೆಎನ್‌ಯು ಪ್ರಾಧ್ಯಾಪಕಿ ಆಯೇಷಾ ಕಿದ್ವಾಯಿ. ಕೇರಳ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ ನಿರ್ದೇಶಕಿ ಜಿ. ಅರುಣಿಮಾ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ ಇತಿಹಾಸ ಪ್ರಾಧ್ಯಾಪಕ ಮೃದು ರೈ. ಮತ್ತು ಐಐಟಿ ದೆಹಲಿಯಿಂದ ಸಿಮೋನಾ ಸಾಹ್ನಿ ಹಲವಾರು ಇತರರು ಬಿಜೆಪಿ ಸಂಸದರ ಪ್ರಶ್ನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಒಂದು ವರ್ಷದ ಬಳಿಕ ಪಠ್ಯಕ್ರಮದಿಂದ ಅದನ್ನು ತೆಗೆದುಹಾಕಬೇಕಾಯಿತು. ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಜಾಮಿಯಾ, ಎಎಂಯು ಅಥವಾ ಇನ್ನಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕಲಿಸಲಾಗುತ್ತಿದೆಯೇ? ಎಂದು ಯುಜಿಸಿ (ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು) ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೇಳಿದೆ.

ಮಾರ್ಚ್ 16 ರಂದು ರಾಜ್ಯಸಭೆಯಲ್ಲಿ ಈ ಪ್ರಶ್ನೆಯನ್ನು ಎತ್ತಲಾಯಿತು, ಅಲ್ಲಿ ಮಾರ್ಚ್ 22, 2023 ರೊಳಗೆ ಪ್ರತಿಕ್ರಿಯಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ರಿಜಿಸ್ಟ್ರಾರ್‌ಗಳಿಗೆ ತಿಳಿಸಲಾಯಿತು. ಲೇಖಕರ ಹೆಸರನ್ನು ಉಲ್ಲೇಖಿಸದೆ ಯುಜಿಸಿ ತನ್ನ ಪ್ರಶ್ನೆಯಲ್ಲಿ, ”ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪಾಕಿಸ್ತಾನದ ಲೇಖಕರ ಪುಸ್ತಕವನ್ನು ಬೋಧಿಸಲಾಗುತ್ತಿದೆ ಎಂಬ ಅಂಶವನ್ನು ಸರ್ಕಾರ ಗಮನಿಸಿದೆಯೇ? ಎಂದು ಕೇಳಿದೆ. ಆ ಪುಸ್ತಕದಲ್ಲಿ ಭಾರತೀಯ ನಾಗರಿಕರನ್ನು ಅವಮಾನಿಸಲಾಗಿದೆಯೇ? ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಎಂದು ಯುಜಿಸಿ ಕೇಳಿದೆ.

ಪಾಕಿಸ್ತಾನಿ ಲೇಖಕರು ಬರೆದಿರುವ ಪಠ್ಯಪುಸ್ತಕಗಳ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸರ್ಕಾರವು ಮುಂದಾಗುತ್ತದೆಯೇ? ಎಂದು ಯುಜಿಸಿ ಪ್ರಶ್ನಿಸಿದೆ.

ಈ ಬಗ್ಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊಫೆಸರ್ ನಜೀಮ್ ಹುಸೇನ್ ಜಾಫ್ರಿ ಪ್ರತಿಕ್ರಿಯಿಸಿ, ”ನಮ್ಮ ವಿಶ್ವವಿದ್ಯಾಲಯದ ನಿಗದಿತ ಪಠ್ಯಕ್ರಮದಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಭೋದಿಸಲಾಗುತ್ತದೆ ಆದರೆ ಅದರಲ್ಲಿ ಯಾವದೇ ಅವಹೇಳನಕಾರಿ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುವ ಬೋಧನೆಗಳಿಲ್ಲ ಎಂದು ನಾವು ಈಗಾಗಲೇ ಯುಜಿಸಿ ಪತ್ರಕ್ಕೆ ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೂ, ಕಳೆದ ವರ್ಷ ಪಾಕಿಸ್ತಾನಿ ಲೇಖಕರ ಬೋಧನೆಗಳು ಆಕ್ಷೇಪಾರ್ಹವೆಂದು ಕೆಲವು ದೂರುಗಳು ಬಂದ ನಂತರ ಪಾಕಿಸ್ತಾನಿ ಲೇಖಕರೊಬ್ಬರ ಬೋಧನೆಗಳನ್ನು ಪಠ್ಯದಿಂದ ತೆಗೆದುಹಾಕಲು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ನಿರ್ಧರಿಸಿತು. ಎರಡು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಗುರಿಯಾಗಿಸುವ ಈ ಕಲ್ಪನೆಯನ್ನು ಜಾಫ್ರಿ ವಿರೋಧಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಹಮ್ದರ್ದ್ ವಿಶ್ವವಿದ್ಯಾಲಯದಲ್ಲಿ ಜಿಹಾದಿ ಇಸ್ಲಾಮಿಕ್ ಕೋರ್ಸ್ ಪಠ್ಯಕ್ರಮದ ಬಗ್ಗೆ ಕಳೆದ ವರ್ಷ 25 ಶಿಕ್ಷಣತಜ್ಞರು ಭಾರತದ ಪ್ರಧಾನಿಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಅಬುಲ್ ಅಲಾ ಮೌದೂದಿಯವರ ಬರಹಗಳು ಮೂರು ವಿಶ್ವವಿದ್ಯಾನಿಲಯಗಳ ಪಠ್ಯಕ್ರಮದ ಭಾಗವಾಗಿರುವುದು ತೀವ್ರ ಕಳವಳ ಮತ್ತು ಕಳವಳಕಾರಿ ಸಂಗತಿ ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ವಿಶ್ವವಿದ್ಯಾಲಯವು ಪಠ್ಯಕ್ರಮದಿಂದ ಆ ಭಾಗವನ್ನು ಅಧಿಕೃತವಾಗಿ ತೆಗೆದುಹಾಕಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...