Homeಮುಖಪುಟಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

ಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ರಾಜ್ಯಸಭೆಯಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅವರ ಪ್ರಶ್ನೆಯನ್ನು 252 ಶಿಕ್ಷಣ ತಜ್ಞರು ಖಂಡಿಸಿದ್ದಾರೆ.

ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಯಾದವ್ ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದು, ಇದು “ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಮತ್ತು “ಭಾರತೀಯ ನಾಗರಿಕರಿಗೆ ಅವಮಾನಕರವಾಗಿದೆಯೇ? ಎಂದು ಸಂಸತ್ತಿನಲ್ಲಿ ಶಿಕ್ಷಣ ಸಚಿವಾಲಯದಿಂದ ಉತ್ತರವನ್ನು ಕೇಳಿದ್ದರು.

ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಭಯೋತ್ಪಾದನೆ ಬೋಧಿಸಲಾಗುತ್ತಿದೆ ಎನ್ನುವ ರೀತಿಯಲ್ಲಿ ಬಿಜೆಪಿ ಸಂಸದರು ಪ್ರಶ್ನೆಸಿರುವುದನ್ನು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆ 252 ಶಿಕ್ಷಣ ತಜ್ಞರು ಮತ್ತು ವಿದ್ವಾಂಸರ ಗುಂಪು ಖಂಡಿಸಿ, ಹೇಳಿಕೆ ಬಿಡುಗಡೆ ಮಾಡಿದ್ದಾರೆ.

252 ಶಿಕ್ಷಣ ತಜ್ಞರಲ್ಲಿ ಪ್ರಮುಖ ಇತಿಹಾಸಕಾರ ಮತ್ತು ಶೈಕ್ಷಣಿಕ ರೊಮಿಲಾ ಥಾಪರ್, ಜೆಎನ್‌ಯುನ ಪ್ರೊಫೆಸರ್ ಎಮೆರಿಟಾ ಸೇರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಸತೀಶ್ ದೇಶಪಾಂಡೆ, ನಂದಿನಿ ಸುಂದರ್, ಅಭಾ ದೇವ್ ಹಬೀಬ್ ಮತ್ತು ಅಪೂರ್ವಾನಂದ್. ಸುಕಾಂತ ಚೌಧುರಿ, ಜಾದವ್‌ಪುರ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ. ಲಕ್ಷ್ಮಿ ಸುಬ್ರಮಣಿಯನ್ ಮತ್ತು ಪಾರ್ಥ ಚಟರ್ಜಿ, ಕಲ್ಕತ್ತಾದ ಸಮಾಜ ವಿಜ್ಞಾನಗಳ ಅಧ್ಯಯನ ಕೇಂದ್ರದ ಗೌರವ ಪ್ರಾಧ್ಯಾಪಕರು. ಜೆಎನ್‌ಯು ಪ್ರಾಧ್ಯಾಪಕಿ ಆಯೇಷಾ ಕಿದ್ವಾಯಿ. ಕೇರಳ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ ನಿರ್ದೇಶಕಿ ಜಿ. ಅರುಣಿಮಾ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ ಇತಿಹಾಸ ಪ್ರಾಧ್ಯಾಪಕ ಮೃದು ರೈ. ಮತ್ತು ಐಐಟಿ ದೆಹಲಿಯಿಂದ ಸಿಮೋನಾ ಸಾಹ್ನಿ ಹಲವಾರು ಇತರರು ಬಿಜೆಪಿ ಸಂಸದರ ಪ್ರಶ್ನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಒಂದು ವರ್ಷದ ಬಳಿಕ ಪಠ್ಯಕ್ರಮದಿಂದ ಅದನ್ನು ತೆಗೆದುಹಾಕಬೇಕಾಯಿತು. ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಜಾಮಿಯಾ, ಎಎಂಯು ಅಥವಾ ಇನ್ನಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕಲಿಸಲಾಗುತ್ತಿದೆಯೇ? ಎಂದು ಯುಜಿಸಿ (ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು) ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೇಳಿದೆ.

ಮಾರ್ಚ್ 16 ರಂದು ರಾಜ್ಯಸಭೆಯಲ್ಲಿ ಈ ಪ್ರಶ್ನೆಯನ್ನು ಎತ್ತಲಾಯಿತು, ಅಲ್ಲಿ ಮಾರ್ಚ್ 22, 2023 ರೊಳಗೆ ಪ್ರತಿಕ್ರಿಯಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ರಿಜಿಸ್ಟ್ರಾರ್‌ಗಳಿಗೆ ತಿಳಿಸಲಾಯಿತು. ಲೇಖಕರ ಹೆಸರನ್ನು ಉಲ್ಲೇಖಿಸದೆ ಯುಜಿಸಿ ತನ್ನ ಪ್ರಶ್ನೆಯಲ್ಲಿ, ”ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪಾಕಿಸ್ತಾನದ ಲೇಖಕರ ಪುಸ್ತಕವನ್ನು ಬೋಧಿಸಲಾಗುತ್ತಿದೆ ಎಂಬ ಅಂಶವನ್ನು ಸರ್ಕಾರ ಗಮನಿಸಿದೆಯೇ? ಎಂದು ಕೇಳಿದೆ. ಆ ಪುಸ್ತಕದಲ್ಲಿ ಭಾರತೀಯ ನಾಗರಿಕರನ್ನು ಅವಮಾನಿಸಲಾಗಿದೆಯೇ? ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಎಂದು ಯುಜಿಸಿ ಕೇಳಿದೆ.

ಪಾಕಿಸ್ತಾನಿ ಲೇಖಕರು ಬರೆದಿರುವ ಪಠ್ಯಪುಸ್ತಕಗಳ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸರ್ಕಾರವು ಮುಂದಾಗುತ್ತದೆಯೇ? ಎಂದು ಯುಜಿಸಿ ಪ್ರಶ್ನಿಸಿದೆ.

ಈ ಬಗ್ಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊಫೆಸರ್ ನಜೀಮ್ ಹುಸೇನ್ ಜಾಫ್ರಿ ಪ್ರತಿಕ್ರಿಯಿಸಿ, ”ನಮ್ಮ ವಿಶ್ವವಿದ್ಯಾಲಯದ ನಿಗದಿತ ಪಠ್ಯಕ್ರಮದಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಭೋದಿಸಲಾಗುತ್ತದೆ ಆದರೆ ಅದರಲ್ಲಿ ಯಾವದೇ ಅವಹೇಳನಕಾರಿ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುವ ಬೋಧನೆಗಳಿಲ್ಲ ಎಂದು ನಾವು ಈಗಾಗಲೇ ಯುಜಿಸಿ ಪತ್ರಕ್ಕೆ ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೂ, ಕಳೆದ ವರ್ಷ ಪಾಕಿಸ್ತಾನಿ ಲೇಖಕರ ಬೋಧನೆಗಳು ಆಕ್ಷೇಪಾರ್ಹವೆಂದು ಕೆಲವು ದೂರುಗಳು ಬಂದ ನಂತರ ಪಾಕಿಸ್ತಾನಿ ಲೇಖಕರೊಬ್ಬರ ಬೋಧನೆಗಳನ್ನು ಪಠ್ಯದಿಂದ ತೆಗೆದುಹಾಕಲು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ನಿರ್ಧರಿಸಿತು. ಎರಡು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಗುರಿಯಾಗಿಸುವ ಈ ಕಲ್ಪನೆಯನ್ನು ಜಾಫ್ರಿ ವಿರೋಧಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಹಮ್ದರ್ದ್ ವಿಶ್ವವಿದ್ಯಾಲಯದಲ್ಲಿ ಜಿಹಾದಿ ಇಸ್ಲಾಮಿಕ್ ಕೋರ್ಸ್ ಪಠ್ಯಕ್ರಮದ ಬಗ್ಗೆ ಕಳೆದ ವರ್ಷ 25 ಶಿಕ್ಷಣತಜ್ಞರು ಭಾರತದ ಪ್ರಧಾನಿಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಅಬುಲ್ ಅಲಾ ಮೌದೂದಿಯವರ ಬರಹಗಳು ಮೂರು ವಿಶ್ವವಿದ್ಯಾನಿಲಯಗಳ ಪಠ್ಯಕ್ರಮದ ಭಾಗವಾಗಿರುವುದು ತೀವ್ರ ಕಳವಳ ಮತ್ತು ಕಳವಳಕಾರಿ ಸಂಗತಿ ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ವಿಶ್ವವಿದ್ಯಾಲಯವು ಪಠ್ಯಕ್ರಮದಿಂದ ಆ ಭಾಗವನ್ನು ಅಧಿಕೃತವಾಗಿ ತೆಗೆದುಹಾಕಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...