Homeಮುಖಪುಟಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

ಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ರಾಜ್ಯಸಭೆಯಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅವರ ಪ್ರಶ್ನೆಯನ್ನು 252 ಶಿಕ್ಷಣ ತಜ್ಞರು ಖಂಡಿಸಿದ್ದಾರೆ.

ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಯಾದವ್ ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದು, ಇದು “ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಮತ್ತು “ಭಾರತೀಯ ನಾಗರಿಕರಿಗೆ ಅವಮಾನಕರವಾಗಿದೆಯೇ? ಎಂದು ಸಂಸತ್ತಿನಲ್ಲಿ ಶಿಕ್ಷಣ ಸಚಿವಾಲಯದಿಂದ ಉತ್ತರವನ್ನು ಕೇಳಿದ್ದರು.

ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಭಯೋತ್ಪಾದನೆ ಬೋಧಿಸಲಾಗುತ್ತಿದೆ ಎನ್ನುವ ರೀತಿಯಲ್ಲಿ ಬಿಜೆಪಿ ಸಂಸದರು ಪ್ರಶ್ನೆಸಿರುವುದನ್ನು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆ 252 ಶಿಕ್ಷಣ ತಜ್ಞರು ಮತ್ತು ವಿದ್ವಾಂಸರ ಗುಂಪು ಖಂಡಿಸಿ, ಹೇಳಿಕೆ ಬಿಡುಗಡೆ ಮಾಡಿದ್ದಾರೆ.

252 ಶಿಕ್ಷಣ ತಜ್ಞರಲ್ಲಿ ಪ್ರಮುಖ ಇತಿಹಾಸಕಾರ ಮತ್ತು ಶೈಕ್ಷಣಿಕ ರೊಮಿಲಾ ಥಾಪರ್, ಜೆಎನ್‌ಯುನ ಪ್ರೊಫೆಸರ್ ಎಮೆರಿಟಾ ಸೇರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಸತೀಶ್ ದೇಶಪಾಂಡೆ, ನಂದಿನಿ ಸುಂದರ್, ಅಭಾ ದೇವ್ ಹಬೀಬ್ ಮತ್ತು ಅಪೂರ್ವಾನಂದ್. ಸುಕಾಂತ ಚೌಧುರಿ, ಜಾದವ್‌ಪುರ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ. ಲಕ್ಷ್ಮಿ ಸುಬ್ರಮಣಿಯನ್ ಮತ್ತು ಪಾರ್ಥ ಚಟರ್ಜಿ, ಕಲ್ಕತ್ತಾದ ಸಮಾಜ ವಿಜ್ಞಾನಗಳ ಅಧ್ಯಯನ ಕೇಂದ್ರದ ಗೌರವ ಪ್ರಾಧ್ಯಾಪಕರು. ಜೆಎನ್‌ಯು ಪ್ರಾಧ್ಯಾಪಕಿ ಆಯೇಷಾ ಕಿದ್ವಾಯಿ. ಕೇರಳ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ ನಿರ್ದೇಶಕಿ ಜಿ. ಅರುಣಿಮಾ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ ಇತಿಹಾಸ ಪ್ರಾಧ್ಯಾಪಕ ಮೃದು ರೈ. ಮತ್ತು ಐಐಟಿ ದೆಹಲಿಯಿಂದ ಸಿಮೋನಾ ಸಾಹ್ನಿ ಹಲವಾರು ಇತರರು ಬಿಜೆಪಿ ಸಂಸದರ ಪ್ರಶ್ನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಒಂದು ವರ್ಷದ ಬಳಿಕ ಪಠ್ಯಕ್ರಮದಿಂದ ಅದನ್ನು ತೆಗೆದುಹಾಕಬೇಕಾಯಿತು. ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಜಾಮಿಯಾ, ಎಎಂಯು ಅಥವಾ ಇನ್ನಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕಲಿಸಲಾಗುತ್ತಿದೆಯೇ? ಎಂದು ಯುಜಿಸಿ (ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು) ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೇಳಿದೆ.

ಮಾರ್ಚ್ 16 ರಂದು ರಾಜ್ಯಸಭೆಯಲ್ಲಿ ಈ ಪ್ರಶ್ನೆಯನ್ನು ಎತ್ತಲಾಯಿತು, ಅಲ್ಲಿ ಮಾರ್ಚ್ 22, 2023 ರೊಳಗೆ ಪ್ರತಿಕ್ರಿಯಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ರಿಜಿಸ್ಟ್ರಾರ್‌ಗಳಿಗೆ ತಿಳಿಸಲಾಯಿತು. ಲೇಖಕರ ಹೆಸರನ್ನು ಉಲ್ಲೇಖಿಸದೆ ಯುಜಿಸಿ ತನ್ನ ಪ್ರಶ್ನೆಯಲ್ಲಿ, ”ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪಾಕಿಸ್ತಾನದ ಲೇಖಕರ ಪುಸ್ತಕವನ್ನು ಬೋಧಿಸಲಾಗುತ್ತಿದೆ ಎಂಬ ಅಂಶವನ್ನು ಸರ್ಕಾರ ಗಮನಿಸಿದೆಯೇ? ಎಂದು ಕೇಳಿದೆ. ಆ ಪುಸ್ತಕದಲ್ಲಿ ಭಾರತೀಯ ನಾಗರಿಕರನ್ನು ಅವಮಾನಿಸಲಾಗಿದೆಯೇ? ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಎಂದು ಯುಜಿಸಿ ಕೇಳಿದೆ.

ಪಾಕಿಸ್ತಾನಿ ಲೇಖಕರು ಬರೆದಿರುವ ಪಠ್ಯಪುಸ್ತಕಗಳ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸರ್ಕಾರವು ಮುಂದಾಗುತ್ತದೆಯೇ? ಎಂದು ಯುಜಿಸಿ ಪ್ರಶ್ನಿಸಿದೆ.

ಈ ಬಗ್ಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊಫೆಸರ್ ನಜೀಮ್ ಹುಸೇನ್ ಜಾಫ್ರಿ ಪ್ರತಿಕ್ರಿಯಿಸಿ, ”ನಮ್ಮ ವಿಶ್ವವಿದ್ಯಾಲಯದ ನಿಗದಿತ ಪಠ್ಯಕ್ರಮದಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಭೋದಿಸಲಾಗುತ್ತದೆ ಆದರೆ ಅದರಲ್ಲಿ ಯಾವದೇ ಅವಹೇಳನಕಾರಿ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುವ ಬೋಧನೆಗಳಿಲ್ಲ ಎಂದು ನಾವು ಈಗಾಗಲೇ ಯುಜಿಸಿ ಪತ್ರಕ್ಕೆ ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೂ, ಕಳೆದ ವರ್ಷ ಪಾಕಿಸ್ತಾನಿ ಲೇಖಕರ ಬೋಧನೆಗಳು ಆಕ್ಷೇಪಾರ್ಹವೆಂದು ಕೆಲವು ದೂರುಗಳು ಬಂದ ನಂತರ ಪಾಕಿಸ್ತಾನಿ ಲೇಖಕರೊಬ್ಬರ ಬೋಧನೆಗಳನ್ನು ಪಠ್ಯದಿಂದ ತೆಗೆದುಹಾಕಲು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ನಿರ್ಧರಿಸಿತು. ಎರಡು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಗುರಿಯಾಗಿಸುವ ಈ ಕಲ್ಪನೆಯನ್ನು ಜಾಫ್ರಿ ವಿರೋಧಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಹಮ್ದರ್ದ್ ವಿಶ್ವವಿದ್ಯಾಲಯದಲ್ಲಿ ಜಿಹಾದಿ ಇಸ್ಲಾಮಿಕ್ ಕೋರ್ಸ್ ಪಠ್ಯಕ್ರಮದ ಬಗ್ಗೆ ಕಳೆದ ವರ್ಷ 25 ಶಿಕ್ಷಣತಜ್ಞರು ಭಾರತದ ಪ್ರಧಾನಿಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಅಬುಲ್ ಅಲಾ ಮೌದೂದಿಯವರ ಬರಹಗಳು ಮೂರು ವಿಶ್ವವಿದ್ಯಾನಿಲಯಗಳ ಪಠ್ಯಕ್ರಮದ ಭಾಗವಾಗಿರುವುದು ತೀವ್ರ ಕಳವಳ ಮತ್ತು ಕಳವಳಕಾರಿ ಸಂಗತಿ ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ವಿಶ್ವವಿದ್ಯಾಲಯವು ಪಠ್ಯಕ್ರಮದಿಂದ ಆ ಭಾಗವನ್ನು ಅಧಿಕೃತವಾಗಿ ತೆಗೆದುಹಾಕಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...