Homeಮುಖಪುಟಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

ಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ರಾಜ್ಯಸಭೆಯಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅವರ ಪ್ರಶ್ನೆಯನ್ನು 252 ಶಿಕ್ಷಣ ತಜ್ಞರು ಖಂಡಿಸಿದ್ದಾರೆ.

ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಯಾದವ್ ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದು, ಇದು “ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಮತ್ತು “ಭಾರತೀಯ ನಾಗರಿಕರಿಗೆ ಅವಮಾನಕರವಾಗಿದೆಯೇ? ಎಂದು ಸಂಸತ್ತಿನಲ್ಲಿ ಶಿಕ್ಷಣ ಸಚಿವಾಲಯದಿಂದ ಉತ್ತರವನ್ನು ಕೇಳಿದ್ದರು.

ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಭಯೋತ್ಪಾದನೆ ಬೋಧಿಸಲಾಗುತ್ತಿದೆ ಎನ್ನುವ ರೀತಿಯಲ್ಲಿ ಬಿಜೆಪಿ ಸಂಸದರು ಪ್ರಶ್ನೆಸಿರುವುದನ್ನು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆ 252 ಶಿಕ್ಷಣ ತಜ್ಞರು ಮತ್ತು ವಿದ್ವಾಂಸರ ಗುಂಪು ಖಂಡಿಸಿ, ಹೇಳಿಕೆ ಬಿಡುಗಡೆ ಮಾಡಿದ್ದಾರೆ.

252 ಶಿಕ್ಷಣ ತಜ್ಞರಲ್ಲಿ ಪ್ರಮುಖ ಇತಿಹಾಸಕಾರ ಮತ್ತು ಶೈಕ್ಷಣಿಕ ರೊಮಿಲಾ ಥಾಪರ್, ಜೆಎನ್‌ಯುನ ಪ್ರೊಫೆಸರ್ ಎಮೆರಿಟಾ ಸೇರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಸತೀಶ್ ದೇಶಪಾಂಡೆ, ನಂದಿನಿ ಸುಂದರ್, ಅಭಾ ದೇವ್ ಹಬೀಬ್ ಮತ್ತು ಅಪೂರ್ವಾನಂದ್. ಸುಕಾಂತ ಚೌಧುರಿ, ಜಾದವ್‌ಪುರ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ. ಲಕ್ಷ್ಮಿ ಸುಬ್ರಮಣಿಯನ್ ಮತ್ತು ಪಾರ್ಥ ಚಟರ್ಜಿ, ಕಲ್ಕತ್ತಾದ ಸಮಾಜ ವಿಜ್ಞಾನಗಳ ಅಧ್ಯಯನ ಕೇಂದ್ರದ ಗೌರವ ಪ್ರಾಧ್ಯಾಪಕರು. ಜೆಎನ್‌ಯು ಪ್ರಾಧ್ಯಾಪಕಿ ಆಯೇಷಾ ಕಿದ್ವಾಯಿ. ಕೇರಳ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ ನಿರ್ದೇಶಕಿ ಜಿ. ಅರುಣಿಮಾ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ ಇತಿಹಾಸ ಪ್ರಾಧ್ಯಾಪಕ ಮೃದು ರೈ. ಮತ್ತು ಐಐಟಿ ದೆಹಲಿಯಿಂದ ಸಿಮೋನಾ ಸಾಹ್ನಿ ಹಲವಾರು ಇತರರು ಬಿಜೆಪಿ ಸಂಸದರ ಪ್ರಶ್ನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಒಂದು ವರ್ಷದ ಬಳಿಕ ಪಠ್ಯಕ್ರಮದಿಂದ ಅದನ್ನು ತೆಗೆದುಹಾಕಬೇಕಾಯಿತು. ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಜಾಮಿಯಾ, ಎಎಂಯು ಅಥವಾ ಇನ್ನಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕಲಿಸಲಾಗುತ್ತಿದೆಯೇ? ಎಂದು ಯುಜಿಸಿ (ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು) ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೇಳಿದೆ.

ಮಾರ್ಚ್ 16 ರಂದು ರಾಜ್ಯಸಭೆಯಲ್ಲಿ ಈ ಪ್ರಶ್ನೆಯನ್ನು ಎತ್ತಲಾಯಿತು, ಅಲ್ಲಿ ಮಾರ್ಚ್ 22, 2023 ರೊಳಗೆ ಪ್ರತಿಕ್ರಿಯಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ರಿಜಿಸ್ಟ್ರಾರ್‌ಗಳಿಗೆ ತಿಳಿಸಲಾಯಿತು. ಲೇಖಕರ ಹೆಸರನ್ನು ಉಲ್ಲೇಖಿಸದೆ ಯುಜಿಸಿ ತನ್ನ ಪ್ರಶ್ನೆಯಲ್ಲಿ, ”ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪಾಕಿಸ್ತಾನದ ಲೇಖಕರ ಪುಸ್ತಕವನ್ನು ಬೋಧಿಸಲಾಗುತ್ತಿದೆ ಎಂಬ ಅಂಶವನ್ನು ಸರ್ಕಾರ ಗಮನಿಸಿದೆಯೇ? ಎಂದು ಕೇಳಿದೆ. ಆ ಪುಸ್ತಕದಲ್ಲಿ ಭಾರತೀಯ ನಾಗರಿಕರನ್ನು ಅವಮಾನಿಸಲಾಗಿದೆಯೇ? ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಎಂದು ಯುಜಿಸಿ ಕೇಳಿದೆ.

ಪಾಕಿಸ್ತಾನಿ ಲೇಖಕರು ಬರೆದಿರುವ ಪಠ್ಯಪುಸ್ತಕಗಳ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸರ್ಕಾರವು ಮುಂದಾಗುತ್ತದೆಯೇ? ಎಂದು ಯುಜಿಸಿ ಪ್ರಶ್ನಿಸಿದೆ.

ಈ ಬಗ್ಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊಫೆಸರ್ ನಜೀಮ್ ಹುಸೇನ್ ಜಾಫ್ರಿ ಪ್ರತಿಕ್ರಿಯಿಸಿ, ”ನಮ್ಮ ವಿಶ್ವವಿದ್ಯಾಲಯದ ನಿಗದಿತ ಪಠ್ಯಕ್ರಮದಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಭೋದಿಸಲಾಗುತ್ತದೆ ಆದರೆ ಅದರಲ್ಲಿ ಯಾವದೇ ಅವಹೇಳನಕಾರಿ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುವ ಬೋಧನೆಗಳಿಲ್ಲ ಎಂದು ನಾವು ಈಗಾಗಲೇ ಯುಜಿಸಿ ಪತ್ರಕ್ಕೆ ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೂ, ಕಳೆದ ವರ್ಷ ಪಾಕಿಸ್ತಾನಿ ಲೇಖಕರ ಬೋಧನೆಗಳು ಆಕ್ಷೇಪಾರ್ಹವೆಂದು ಕೆಲವು ದೂರುಗಳು ಬಂದ ನಂತರ ಪಾಕಿಸ್ತಾನಿ ಲೇಖಕರೊಬ್ಬರ ಬೋಧನೆಗಳನ್ನು ಪಠ್ಯದಿಂದ ತೆಗೆದುಹಾಕಲು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ನಿರ್ಧರಿಸಿತು. ಎರಡು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಗುರಿಯಾಗಿಸುವ ಈ ಕಲ್ಪನೆಯನ್ನು ಜಾಫ್ರಿ ವಿರೋಧಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಹಮ್ದರ್ದ್ ವಿಶ್ವವಿದ್ಯಾಲಯದಲ್ಲಿ ಜಿಹಾದಿ ಇಸ್ಲಾಮಿಕ್ ಕೋರ್ಸ್ ಪಠ್ಯಕ್ರಮದ ಬಗ್ಗೆ ಕಳೆದ ವರ್ಷ 25 ಶಿಕ್ಷಣತಜ್ಞರು ಭಾರತದ ಪ್ರಧಾನಿಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಅಬುಲ್ ಅಲಾ ಮೌದೂದಿಯವರ ಬರಹಗಳು ಮೂರು ವಿಶ್ವವಿದ್ಯಾನಿಲಯಗಳ ಪಠ್ಯಕ್ರಮದ ಭಾಗವಾಗಿರುವುದು ತೀವ್ರ ಕಳವಳ ಮತ್ತು ಕಳವಳಕಾರಿ ಸಂಗತಿ ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ವಿಶ್ವವಿದ್ಯಾಲಯವು ಪಠ್ಯಕ್ರಮದಿಂದ ಆ ಭಾಗವನ್ನು ಅಧಿಕೃತವಾಗಿ ತೆಗೆದುಹಾಕಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...