Homeಮುಖಪುಟಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

ಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ರಾಜ್ಯಸಭೆಯಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅವರ ಪ್ರಶ್ನೆಯನ್ನು 252 ಶಿಕ್ಷಣ ತಜ್ಞರು ಖಂಡಿಸಿದ್ದಾರೆ.

ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಯಾದವ್ ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದು, ಇದು “ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಮತ್ತು “ಭಾರತೀಯ ನಾಗರಿಕರಿಗೆ ಅವಮಾನಕರವಾಗಿದೆಯೇ? ಎಂದು ಸಂಸತ್ತಿನಲ್ಲಿ ಶಿಕ್ಷಣ ಸಚಿವಾಲಯದಿಂದ ಉತ್ತರವನ್ನು ಕೇಳಿದ್ದರು.

ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಭಯೋತ್ಪಾದನೆ ಬೋಧಿಸಲಾಗುತ್ತಿದೆ ಎನ್ನುವ ರೀತಿಯಲ್ಲಿ ಬಿಜೆಪಿ ಸಂಸದರು ಪ್ರಶ್ನೆಸಿರುವುದನ್ನು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆ 252 ಶಿಕ್ಷಣ ತಜ್ಞರು ಮತ್ತು ವಿದ್ವಾಂಸರ ಗುಂಪು ಖಂಡಿಸಿ, ಹೇಳಿಕೆ ಬಿಡುಗಡೆ ಮಾಡಿದ್ದಾರೆ.

252 ಶಿಕ್ಷಣ ತಜ್ಞರಲ್ಲಿ ಪ್ರಮುಖ ಇತಿಹಾಸಕಾರ ಮತ್ತು ಶೈಕ್ಷಣಿಕ ರೊಮಿಲಾ ಥಾಪರ್, ಜೆಎನ್‌ಯುನ ಪ್ರೊಫೆಸರ್ ಎಮೆರಿಟಾ ಸೇರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಸತೀಶ್ ದೇಶಪಾಂಡೆ, ನಂದಿನಿ ಸುಂದರ್, ಅಭಾ ದೇವ್ ಹಬೀಬ್ ಮತ್ತು ಅಪೂರ್ವಾನಂದ್. ಸುಕಾಂತ ಚೌಧುರಿ, ಜಾದವ್‌ಪುರ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ. ಲಕ್ಷ್ಮಿ ಸುಬ್ರಮಣಿಯನ್ ಮತ್ತು ಪಾರ್ಥ ಚಟರ್ಜಿ, ಕಲ್ಕತ್ತಾದ ಸಮಾಜ ವಿಜ್ಞಾನಗಳ ಅಧ್ಯಯನ ಕೇಂದ್ರದ ಗೌರವ ಪ್ರಾಧ್ಯಾಪಕರು. ಜೆಎನ್‌ಯು ಪ್ರಾಧ್ಯಾಪಕಿ ಆಯೇಷಾ ಕಿದ್ವಾಯಿ. ಕೇರಳ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ ನಿರ್ದೇಶಕಿ ಜಿ. ಅರುಣಿಮಾ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ ಇತಿಹಾಸ ಪ್ರಾಧ್ಯಾಪಕ ಮೃದು ರೈ. ಮತ್ತು ಐಐಟಿ ದೆಹಲಿಯಿಂದ ಸಿಮೋನಾ ಸಾಹ್ನಿ ಹಲವಾರು ಇತರರು ಬಿಜೆಪಿ ಸಂಸದರ ಪ್ರಶ್ನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಒಂದು ವರ್ಷದ ಬಳಿಕ ಪಠ್ಯಕ್ರಮದಿಂದ ಅದನ್ನು ತೆಗೆದುಹಾಕಬೇಕಾಯಿತು. ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಜಾಮಿಯಾ, ಎಎಂಯು ಅಥವಾ ಇನ್ನಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕಲಿಸಲಾಗುತ್ತಿದೆಯೇ? ಎಂದು ಯುಜಿಸಿ (ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು) ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೇಳಿದೆ.

ಮಾರ್ಚ್ 16 ರಂದು ರಾಜ್ಯಸಭೆಯಲ್ಲಿ ಈ ಪ್ರಶ್ನೆಯನ್ನು ಎತ್ತಲಾಯಿತು, ಅಲ್ಲಿ ಮಾರ್ಚ್ 22, 2023 ರೊಳಗೆ ಪ್ರತಿಕ್ರಿಯಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ರಿಜಿಸ್ಟ್ರಾರ್‌ಗಳಿಗೆ ತಿಳಿಸಲಾಯಿತು. ಲೇಖಕರ ಹೆಸರನ್ನು ಉಲ್ಲೇಖಿಸದೆ ಯುಜಿಸಿ ತನ್ನ ಪ್ರಶ್ನೆಯಲ್ಲಿ, ”ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪಾಕಿಸ್ತಾನದ ಲೇಖಕರ ಪುಸ್ತಕವನ್ನು ಬೋಧಿಸಲಾಗುತ್ತಿದೆ ಎಂಬ ಅಂಶವನ್ನು ಸರ್ಕಾರ ಗಮನಿಸಿದೆಯೇ? ಎಂದು ಕೇಳಿದೆ. ಆ ಪುಸ್ತಕದಲ್ಲಿ ಭಾರತೀಯ ನಾಗರಿಕರನ್ನು ಅವಮಾನಿಸಲಾಗಿದೆಯೇ? ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಎಂದು ಯುಜಿಸಿ ಕೇಳಿದೆ.

ಪಾಕಿಸ್ತಾನಿ ಲೇಖಕರು ಬರೆದಿರುವ ಪಠ್ಯಪುಸ್ತಕಗಳ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸರ್ಕಾರವು ಮುಂದಾಗುತ್ತದೆಯೇ? ಎಂದು ಯುಜಿಸಿ ಪ್ರಶ್ನಿಸಿದೆ.

ಈ ಬಗ್ಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊಫೆಸರ್ ನಜೀಮ್ ಹುಸೇನ್ ಜಾಫ್ರಿ ಪ್ರತಿಕ್ರಿಯಿಸಿ, ”ನಮ್ಮ ವಿಶ್ವವಿದ್ಯಾಲಯದ ನಿಗದಿತ ಪಠ್ಯಕ್ರಮದಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಭೋದಿಸಲಾಗುತ್ತದೆ ಆದರೆ ಅದರಲ್ಲಿ ಯಾವದೇ ಅವಹೇಳನಕಾರಿ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುವ ಬೋಧನೆಗಳಿಲ್ಲ ಎಂದು ನಾವು ಈಗಾಗಲೇ ಯುಜಿಸಿ ಪತ್ರಕ್ಕೆ ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೂ, ಕಳೆದ ವರ್ಷ ಪಾಕಿಸ್ತಾನಿ ಲೇಖಕರ ಬೋಧನೆಗಳು ಆಕ್ಷೇಪಾರ್ಹವೆಂದು ಕೆಲವು ದೂರುಗಳು ಬಂದ ನಂತರ ಪಾಕಿಸ್ತಾನಿ ಲೇಖಕರೊಬ್ಬರ ಬೋಧನೆಗಳನ್ನು ಪಠ್ಯದಿಂದ ತೆಗೆದುಹಾಕಲು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ನಿರ್ಧರಿಸಿತು. ಎರಡು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಗುರಿಯಾಗಿಸುವ ಈ ಕಲ್ಪನೆಯನ್ನು ಜಾಫ್ರಿ ವಿರೋಧಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಹಮ್ದರ್ದ್ ವಿಶ್ವವಿದ್ಯಾಲಯದಲ್ಲಿ ಜಿಹಾದಿ ಇಸ್ಲಾಮಿಕ್ ಕೋರ್ಸ್ ಪಠ್ಯಕ್ರಮದ ಬಗ್ಗೆ ಕಳೆದ ವರ್ಷ 25 ಶಿಕ್ಷಣತಜ್ಞರು ಭಾರತದ ಪ್ರಧಾನಿಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಅಬುಲ್ ಅಲಾ ಮೌದೂದಿಯವರ ಬರಹಗಳು ಮೂರು ವಿಶ್ವವಿದ್ಯಾನಿಲಯಗಳ ಪಠ್ಯಕ್ರಮದ ಭಾಗವಾಗಿರುವುದು ತೀವ್ರ ಕಳವಳ ಮತ್ತು ಕಳವಳಕಾರಿ ಸಂಗತಿ ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ವಿಶ್ವವಿದ್ಯಾಲಯವು ಪಠ್ಯಕ್ರಮದಿಂದ ಆ ಭಾಗವನ್ನು ಅಧಿಕೃತವಾಗಿ ತೆಗೆದುಹಾಕಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...