Homeಮುಖಪುಟನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

ನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

- Advertisement -
- Advertisement -

ಕಳೆದ ವಾರ ಪಶ್ಚಿಮ ದೆಹಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು “ಭಯೋತ್ಪಾದಕ” ಎಂದು ಕರೆದಿರುವುದು ವಿವಾದಕ್ಕೀಡಾಗಿದ್ದು, ಇದು ಬಿಜೆಪಿಗೆ ಬಹುದೊಡ್ಡ ಹಿನ್ನೆಡೆ ಎನ್ನಲಾಗುತ್ತಿದೆ.

“ಹಿಂದೂ ಮಹಿಳೆಯರನ್ನು ಮುಸ್ಲಿಂ ಪುರುಷರು ಎತ್ತಿಕೊಂಡುಹೋದ ಉದಾಹರಣೆಗಳನ್ನು ನಾವು ಕೇಳುತ್ತೇವೆ. ಕೇಜ್ರಿವಾಲ್ ನಂತಹ ಭಯೋತ್ಪಾದಕರು ಎಲ್ಲೆಡೆ ಅಡಗಿರುವ ಕಾರಣ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದುದ್ದಲ್ಲದೆ, ನಾವು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದಕರೊಂದಿಗೆ ಅಥವಾ ಕೇಜ್ರಿವಾಲ್ ನಂತಹ ಭಯೋತ್ಪಾದಕರೊಂದಿಗೆ ಹೋರಾಡಬೇಕೇ?” ಎಂದು ವರ್ಮಾ ಮತದಾರರನ್ನು ಪ್ರಶ್ನಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಕೇಜ್ರಿವಾಲ್, “ನಾನು ಹೇಗೆ ಭಯೋತ್ಪಾದಕನಾಗುತ್ತೇನೆ? ನಾನು ಜನರಿಗೆ ಉತ್ತಮ ಆರೋಗ್ಯಕ್ಕಾಗಿ ಷಧಿಗಳನ್ನು ವ್ಯವಸ್ಥೆ ಮಾಡಿದ್ದೇನೆ … ಅಗತ್ಯವಿರುವವರಿಗೆ ತುಂಬಾ ಕೆಲಸ ಮಾಡಿದ್ದೇನೆ, ನಾನು ಎಂದಿಗೂ ನನ್ನ ಅಥವಾ ನನ್ನ ಕುಟುಂಬದ ಬಗ್ಗೆ ಯೋಚಿಸಿಲ್ಲ… ರಾಷ್ಟ್ರಕ್ಕಾಗಿ ನನ್ನ ಜೀವನವನ್ನು ನೀಡಲು ನಾನು ಸಿದ್ಧನಿದ್ದೇನೆ” ಎಂದಿದ್ದಾರೆ.

“ನಾನು ಮಧುಮೇಹ ರೋಗಿಯಾಗಿದ್ದೇನೆ, ನಾನು ದಿನಕ್ಕೆ ನಾಲ್ಕು ಬಾರಿ ಇನ್ಸುಲಿನ್ ತೆಗೆದುಕೊಳ್ಳುತ್ತೇನೆ. ವೈದ್ಯರು ನಾನು ರಾಜಕೀಯಕ್ಕೆ ಸೇರಬಾರದೆಂದು ಹೇಳಿದ್ದರು. ಇಲ್ಲವಾದಲ್ಲಿ ನಾನು ಬದುಕುವುದಿಲ್ಲ ಎಂದು ಸಹ ಹೇಳಿದ್ದರು” ಎಂದು ತಮ್ಮ ಭ್ರಷ್ಟಾಚಾರ ವಿರೋಧಿ ಹೋರಾಟದ ದಿನಗಳನ್ನು ನೆನೆಸಿಕೊಂಡಿದ್ದಾರೆ.

“ನಾನು ಬಯಸಿದರೆ… ನನ್ನ ಅನೇಕ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಮಾಡಿದ ರೀತಿಯಲ್ಲಿ ನಾನು ಸಹ ವಿದೇಶಕ್ಕೆ ಹೋಗಬಹುದಿತ್ತು …  ನಾನು ನನ್ನ ಕೆಲಸವನ್ನು ಬಿಟ್ಟುಬಿಟ್ಟೆ … ಭಯೋತ್ಪಾದಕನು ಇದನ್ನೆಲ್ಲಾ ಮಾಡುತ್ತಾನೆಯೇ?” ಪ್ರತಿಷ್ಠಿತ ಐಐಟಿ ಖರಗ್‌ಪುರದಿಂದ ಪದವಿ ಪಡೆದ ಕೇಜ್ರಿವಾಲ್, “ನಾನು ಇದನ್ನೆಲ್ಲ ನಿರ್ಧರಿಸಲು ದೆಹಲಿಯ ಜನರಿಗೆ ಬಿಡುತ್ತೇನೆ … ನಾನು ಅವರ ಮಗ, ಅವರ ಸಹೋದರನೋ ಅಥವಾ ಭಯೋತ್ಪಾದಕ” ಎಂದು ಅವರೆ ನಿರ್ಧರಿಸಲು ಎಂದು ಘೋಷಿಸಿದ್ದಾರೆ.

ಕೇಜ್ರಿವಾಲ್‌ರವರು ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಶಾಹೀನ್ ಬಾಗ್‌ನಲ್ಲಿ ಪೌರತ್ವ ವಿರೋಧಿ ಪ್ರತಿಭಟನಾಕಾರರು “ನಿಮ್ಮ ಮನೆಗೆ ನುಗ್ಗಿ ನಿಮ್ಮ ಸಹೋದರಿಯರು, ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ” ಎಂದು ವರ್ಮಾ ಕೆಟ್ಟದಾಗಿ ಮಾತನಾಡಿದ್ದರು.

ಘಟನೆಯ ವೀಡಿಯೊವೊಂದರಲ್ಲಿ ವರ್ಮಾ ಅವರು “ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಹಿಂದಿರುಗಿದರೆ, ಶಾಹೀನ್ ಬಾಗ್ ರೀತಿಯ ಜನರು ಬೀದಿಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ” ಮತ್ತು ಇದು “ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗೆ ಆದ ಪರಿಸ್ಥಿತಿ ಬರುತ್ತದೆ ಎಂದಿದ್ದರು.

“ನಾನು ದೆಹಲಿಗಾಗಿ ಐದು ವರ್ಷ, ಹಗಲು ರಾತ್ರಿ ಶ್ರಮಿಸಿದ್ದೇನೆ. ದೆಹಲಿ ಜನರಿಗಾಗಿ ನಾನು ಎಲ್ಲವನ್ನೂ ತ್ಯಜಿಸಿದ್ದೇನೆ. ರಾಜಕೀಯ ಪ್ರವೇಶಿಸಿದ ನಂತರ ನಾನು ಅನೇಕ ಸವಾಲುಗಳನ್ನು ಎದುರಿಸಿದ್ದೇನೆ, ಇದರಿಂದ ಜನರು ತಮ್ಮ ಜೀವನವನ್ನು ಸುಧಾರಿಸಲು ಸಹಾಯವಾಗಿದೆ. ಇದಕ್ಕೆ ಪ್ರತಿಯಾಗಿ, ಬಿಜೆಪಿ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ ”ಎಂದು ಕೇಜ್ರಿವಾಲ್ ನಿನ್ನೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...