Homeಮುಖಪುಟನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

ನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

- Advertisement -
- Advertisement -

ಕಳೆದ ವಾರ ಪಶ್ಚಿಮ ದೆಹಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು “ಭಯೋತ್ಪಾದಕ” ಎಂದು ಕರೆದಿರುವುದು ವಿವಾದಕ್ಕೀಡಾಗಿದ್ದು, ಇದು ಬಿಜೆಪಿಗೆ ಬಹುದೊಡ್ಡ ಹಿನ್ನೆಡೆ ಎನ್ನಲಾಗುತ್ತಿದೆ.

“ಹಿಂದೂ ಮಹಿಳೆಯರನ್ನು ಮುಸ್ಲಿಂ ಪುರುಷರು ಎತ್ತಿಕೊಂಡುಹೋದ ಉದಾಹರಣೆಗಳನ್ನು ನಾವು ಕೇಳುತ್ತೇವೆ. ಕೇಜ್ರಿವಾಲ್ ನಂತಹ ಭಯೋತ್ಪಾದಕರು ಎಲ್ಲೆಡೆ ಅಡಗಿರುವ ಕಾರಣ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದುದ್ದಲ್ಲದೆ, ನಾವು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದಕರೊಂದಿಗೆ ಅಥವಾ ಕೇಜ್ರಿವಾಲ್ ನಂತಹ ಭಯೋತ್ಪಾದಕರೊಂದಿಗೆ ಹೋರಾಡಬೇಕೇ?” ಎಂದು ವರ್ಮಾ ಮತದಾರರನ್ನು ಪ್ರಶ್ನಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಕೇಜ್ರಿವಾಲ್, “ನಾನು ಹೇಗೆ ಭಯೋತ್ಪಾದಕನಾಗುತ್ತೇನೆ? ನಾನು ಜನರಿಗೆ ಉತ್ತಮ ಆರೋಗ್ಯಕ್ಕಾಗಿ ಷಧಿಗಳನ್ನು ವ್ಯವಸ್ಥೆ ಮಾಡಿದ್ದೇನೆ … ಅಗತ್ಯವಿರುವವರಿಗೆ ತುಂಬಾ ಕೆಲಸ ಮಾಡಿದ್ದೇನೆ, ನಾನು ಎಂದಿಗೂ ನನ್ನ ಅಥವಾ ನನ್ನ ಕುಟುಂಬದ ಬಗ್ಗೆ ಯೋಚಿಸಿಲ್ಲ… ರಾಷ್ಟ್ರಕ್ಕಾಗಿ ನನ್ನ ಜೀವನವನ್ನು ನೀಡಲು ನಾನು ಸಿದ್ಧನಿದ್ದೇನೆ” ಎಂದಿದ್ದಾರೆ.

“ನಾನು ಮಧುಮೇಹ ರೋಗಿಯಾಗಿದ್ದೇನೆ, ನಾನು ದಿನಕ್ಕೆ ನಾಲ್ಕು ಬಾರಿ ಇನ್ಸುಲಿನ್ ತೆಗೆದುಕೊಳ್ಳುತ್ತೇನೆ. ವೈದ್ಯರು ನಾನು ರಾಜಕೀಯಕ್ಕೆ ಸೇರಬಾರದೆಂದು ಹೇಳಿದ್ದರು. ಇಲ್ಲವಾದಲ್ಲಿ ನಾನು ಬದುಕುವುದಿಲ್ಲ ಎಂದು ಸಹ ಹೇಳಿದ್ದರು” ಎಂದು ತಮ್ಮ ಭ್ರಷ್ಟಾಚಾರ ವಿರೋಧಿ ಹೋರಾಟದ ದಿನಗಳನ್ನು ನೆನೆಸಿಕೊಂಡಿದ್ದಾರೆ.

“ನಾನು ಬಯಸಿದರೆ… ನನ್ನ ಅನೇಕ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಮಾಡಿದ ರೀತಿಯಲ್ಲಿ ನಾನು ಸಹ ವಿದೇಶಕ್ಕೆ ಹೋಗಬಹುದಿತ್ತು …  ನಾನು ನನ್ನ ಕೆಲಸವನ್ನು ಬಿಟ್ಟುಬಿಟ್ಟೆ … ಭಯೋತ್ಪಾದಕನು ಇದನ್ನೆಲ್ಲಾ ಮಾಡುತ್ತಾನೆಯೇ?” ಪ್ರತಿಷ್ಠಿತ ಐಐಟಿ ಖರಗ್‌ಪುರದಿಂದ ಪದವಿ ಪಡೆದ ಕೇಜ್ರಿವಾಲ್, “ನಾನು ಇದನ್ನೆಲ್ಲ ನಿರ್ಧರಿಸಲು ದೆಹಲಿಯ ಜನರಿಗೆ ಬಿಡುತ್ತೇನೆ … ನಾನು ಅವರ ಮಗ, ಅವರ ಸಹೋದರನೋ ಅಥವಾ ಭಯೋತ್ಪಾದಕ” ಎಂದು ಅವರೆ ನಿರ್ಧರಿಸಲು ಎಂದು ಘೋಷಿಸಿದ್ದಾರೆ.

ಕೇಜ್ರಿವಾಲ್‌ರವರು ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಶಾಹೀನ್ ಬಾಗ್‌ನಲ್ಲಿ ಪೌರತ್ವ ವಿರೋಧಿ ಪ್ರತಿಭಟನಾಕಾರರು “ನಿಮ್ಮ ಮನೆಗೆ ನುಗ್ಗಿ ನಿಮ್ಮ ಸಹೋದರಿಯರು, ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ” ಎಂದು ವರ್ಮಾ ಕೆಟ್ಟದಾಗಿ ಮಾತನಾಡಿದ್ದರು.

ಘಟನೆಯ ವೀಡಿಯೊವೊಂದರಲ್ಲಿ ವರ್ಮಾ ಅವರು “ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಹಿಂದಿರುಗಿದರೆ, ಶಾಹೀನ್ ಬಾಗ್ ರೀತಿಯ ಜನರು ಬೀದಿಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ” ಮತ್ತು ಇದು “ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗೆ ಆದ ಪರಿಸ್ಥಿತಿ ಬರುತ್ತದೆ ಎಂದಿದ್ದರು.

“ನಾನು ದೆಹಲಿಗಾಗಿ ಐದು ವರ್ಷ, ಹಗಲು ರಾತ್ರಿ ಶ್ರಮಿಸಿದ್ದೇನೆ. ದೆಹಲಿ ಜನರಿಗಾಗಿ ನಾನು ಎಲ್ಲವನ್ನೂ ತ್ಯಜಿಸಿದ್ದೇನೆ. ರಾಜಕೀಯ ಪ್ರವೇಶಿಸಿದ ನಂತರ ನಾನು ಅನೇಕ ಸವಾಲುಗಳನ್ನು ಎದುರಿಸಿದ್ದೇನೆ, ಇದರಿಂದ ಜನರು ತಮ್ಮ ಜೀವನವನ್ನು ಸುಧಾರಿಸಲು ಸಹಾಯವಾಗಿದೆ. ಇದಕ್ಕೆ ಪ್ರತಿಯಾಗಿ, ಬಿಜೆಪಿ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ ”ಎಂದು ಕೇಜ್ರಿವಾಲ್ ನಿನ್ನೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...