Homeಮುಖಪುಟನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

ನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

- Advertisement -
- Advertisement -

ಕಳೆದ ವಾರ ಪಶ್ಚಿಮ ದೆಹಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು “ಭಯೋತ್ಪಾದಕ” ಎಂದು ಕರೆದಿರುವುದು ವಿವಾದಕ್ಕೀಡಾಗಿದ್ದು, ಇದು ಬಿಜೆಪಿಗೆ ಬಹುದೊಡ್ಡ ಹಿನ್ನೆಡೆ ಎನ್ನಲಾಗುತ್ತಿದೆ.

“ಹಿಂದೂ ಮಹಿಳೆಯರನ್ನು ಮುಸ್ಲಿಂ ಪುರುಷರು ಎತ್ತಿಕೊಂಡುಹೋದ ಉದಾಹರಣೆಗಳನ್ನು ನಾವು ಕೇಳುತ್ತೇವೆ. ಕೇಜ್ರಿವಾಲ್ ನಂತಹ ಭಯೋತ್ಪಾದಕರು ಎಲ್ಲೆಡೆ ಅಡಗಿರುವ ಕಾರಣ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದುದ್ದಲ್ಲದೆ, ನಾವು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದಕರೊಂದಿಗೆ ಅಥವಾ ಕೇಜ್ರಿವಾಲ್ ನಂತಹ ಭಯೋತ್ಪಾದಕರೊಂದಿಗೆ ಹೋರಾಡಬೇಕೇ?” ಎಂದು ವರ್ಮಾ ಮತದಾರರನ್ನು ಪ್ರಶ್ನಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಕೇಜ್ರಿವಾಲ್, “ನಾನು ಹೇಗೆ ಭಯೋತ್ಪಾದಕನಾಗುತ್ತೇನೆ? ನಾನು ಜನರಿಗೆ ಉತ್ತಮ ಆರೋಗ್ಯಕ್ಕಾಗಿ ಷಧಿಗಳನ್ನು ವ್ಯವಸ್ಥೆ ಮಾಡಿದ್ದೇನೆ … ಅಗತ್ಯವಿರುವವರಿಗೆ ತುಂಬಾ ಕೆಲಸ ಮಾಡಿದ್ದೇನೆ, ನಾನು ಎಂದಿಗೂ ನನ್ನ ಅಥವಾ ನನ್ನ ಕುಟುಂಬದ ಬಗ್ಗೆ ಯೋಚಿಸಿಲ್ಲ… ರಾಷ್ಟ್ರಕ್ಕಾಗಿ ನನ್ನ ಜೀವನವನ್ನು ನೀಡಲು ನಾನು ಸಿದ್ಧನಿದ್ದೇನೆ” ಎಂದಿದ್ದಾರೆ.

“ನಾನು ಮಧುಮೇಹ ರೋಗಿಯಾಗಿದ್ದೇನೆ, ನಾನು ದಿನಕ್ಕೆ ನಾಲ್ಕು ಬಾರಿ ಇನ್ಸುಲಿನ್ ತೆಗೆದುಕೊಳ್ಳುತ್ತೇನೆ. ವೈದ್ಯರು ನಾನು ರಾಜಕೀಯಕ್ಕೆ ಸೇರಬಾರದೆಂದು ಹೇಳಿದ್ದರು. ಇಲ್ಲವಾದಲ್ಲಿ ನಾನು ಬದುಕುವುದಿಲ್ಲ ಎಂದು ಸಹ ಹೇಳಿದ್ದರು” ಎಂದು ತಮ್ಮ ಭ್ರಷ್ಟಾಚಾರ ವಿರೋಧಿ ಹೋರಾಟದ ದಿನಗಳನ್ನು ನೆನೆಸಿಕೊಂಡಿದ್ದಾರೆ.

“ನಾನು ಬಯಸಿದರೆ… ನನ್ನ ಅನೇಕ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಮಾಡಿದ ರೀತಿಯಲ್ಲಿ ನಾನು ಸಹ ವಿದೇಶಕ್ಕೆ ಹೋಗಬಹುದಿತ್ತು …  ನಾನು ನನ್ನ ಕೆಲಸವನ್ನು ಬಿಟ್ಟುಬಿಟ್ಟೆ … ಭಯೋತ್ಪಾದಕನು ಇದನ್ನೆಲ್ಲಾ ಮಾಡುತ್ತಾನೆಯೇ?” ಪ್ರತಿಷ್ಠಿತ ಐಐಟಿ ಖರಗ್‌ಪುರದಿಂದ ಪದವಿ ಪಡೆದ ಕೇಜ್ರಿವಾಲ್, “ನಾನು ಇದನ್ನೆಲ್ಲ ನಿರ್ಧರಿಸಲು ದೆಹಲಿಯ ಜನರಿಗೆ ಬಿಡುತ್ತೇನೆ … ನಾನು ಅವರ ಮಗ, ಅವರ ಸಹೋದರನೋ ಅಥವಾ ಭಯೋತ್ಪಾದಕ” ಎಂದು ಅವರೆ ನಿರ್ಧರಿಸಲು ಎಂದು ಘೋಷಿಸಿದ್ದಾರೆ.

ಕೇಜ್ರಿವಾಲ್‌ರವರು ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಶಾಹೀನ್ ಬಾಗ್‌ನಲ್ಲಿ ಪೌರತ್ವ ವಿರೋಧಿ ಪ್ರತಿಭಟನಾಕಾರರು “ನಿಮ್ಮ ಮನೆಗೆ ನುಗ್ಗಿ ನಿಮ್ಮ ಸಹೋದರಿಯರು, ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ” ಎಂದು ವರ್ಮಾ ಕೆಟ್ಟದಾಗಿ ಮಾತನಾಡಿದ್ದರು.

ಘಟನೆಯ ವೀಡಿಯೊವೊಂದರಲ್ಲಿ ವರ್ಮಾ ಅವರು “ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಹಿಂದಿರುಗಿದರೆ, ಶಾಹೀನ್ ಬಾಗ್ ರೀತಿಯ ಜನರು ಬೀದಿಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ” ಮತ್ತು ಇದು “ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗೆ ಆದ ಪರಿಸ್ಥಿತಿ ಬರುತ್ತದೆ ಎಂದಿದ್ದರು.

“ನಾನು ದೆಹಲಿಗಾಗಿ ಐದು ವರ್ಷ, ಹಗಲು ರಾತ್ರಿ ಶ್ರಮಿಸಿದ್ದೇನೆ. ದೆಹಲಿ ಜನರಿಗಾಗಿ ನಾನು ಎಲ್ಲವನ್ನೂ ತ್ಯಜಿಸಿದ್ದೇನೆ. ರಾಜಕೀಯ ಪ್ರವೇಶಿಸಿದ ನಂತರ ನಾನು ಅನೇಕ ಸವಾಲುಗಳನ್ನು ಎದುರಿಸಿದ್ದೇನೆ, ಇದರಿಂದ ಜನರು ತಮ್ಮ ಜೀವನವನ್ನು ಸುಧಾರಿಸಲು ಸಹಾಯವಾಗಿದೆ. ಇದಕ್ಕೆ ಪ್ರತಿಯಾಗಿ, ಬಿಜೆಪಿ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ ”ಎಂದು ಕೇಜ್ರಿವಾಲ್ ನಿನ್ನೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...