Homeಮುಖಪುಟನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

ನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

- Advertisement -
- Advertisement -

ಕಳೆದ ವಾರ ಪಶ್ಚಿಮ ದೆಹಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು “ಭಯೋತ್ಪಾದಕ” ಎಂದು ಕರೆದಿರುವುದು ವಿವಾದಕ್ಕೀಡಾಗಿದ್ದು, ಇದು ಬಿಜೆಪಿಗೆ ಬಹುದೊಡ್ಡ ಹಿನ್ನೆಡೆ ಎನ್ನಲಾಗುತ್ತಿದೆ.

“ಹಿಂದೂ ಮಹಿಳೆಯರನ್ನು ಮುಸ್ಲಿಂ ಪುರುಷರು ಎತ್ತಿಕೊಂಡುಹೋದ ಉದಾಹರಣೆಗಳನ್ನು ನಾವು ಕೇಳುತ್ತೇವೆ. ಕೇಜ್ರಿವಾಲ್ ನಂತಹ ಭಯೋತ್ಪಾದಕರು ಎಲ್ಲೆಡೆ ಅಡಗಿರುವ ಕಾರಣ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದುದ್ದಲ್ಲದೆ, ನಾವು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದಕರೊಂದಿಗೆ ಅಥವಾ ಕೇಜ್ರಿವಾಲ್ ನಂತಹ ಭಯೋತ್ಪಾದಕರೊಂದಿಗೆ ಹೋರಾಡಬೇಕೇ?” ಎಂದು ವರ್ಮಾ ಮತದಾರರನ್ನು ಪ್ರಶ್ನಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಕೇಜ್ರಿವಾಲ್, “ನಾನು ಹೇಗೆ ಭಯೋತ್ಪಾದಕನಾಗುತ್ತೇನೆ? ನಾನು ಜನರಿಗೆ ಉತ್ತಮ ಆರೋಗ್ಯಕ್ಕಾಗಿ ಷಧಿಗಳನ್ನು ವ್ಯವಸ್ಥೆ ಮಾಡಿದ್ದೇನೆ … ಅಗತ್ಯವಿರುವವರಿಗೆ ತುಂಬಾ ಕೆಲಸ ಮಾಡಿದ್ದೇನೆ, ನಾನು ಎಂದಿಗೂ ನನ್ನ ಅಥವಾ ನನ್ನ ಕುಟುಂಬದ ಬಗ್ಗೆ ಯೋಚಿಸಿಲ್ಲ… ರಾಷ್ಟ್ರಕ್ಕಾಗಿ ನನ್ನ ಜೀವನವನ್ನು ನೀಡಲು ನಾನು ಸಿದ್ಧನಿದ್ದೇನೆ” ಎಂದಿದ್ದಾರೆ.

“ನಾನು ಮಧುಮೇಹ ರೋಗಿಯಾಗಿದ್ದೇನೆ, ನಾನು ದಿನಕ್ಕೆ ನಾಲ್ಕು ಬಾರಿ ಇನ್ಸುಲಿನ್ ತೆಗೆದುಕೊಳ್ಳುತ್ತೇನೆ. ವೈದ್ಯರು ನಾನು ರಾಜಕೀಯಕ್ಕೆ ಸೇರಬಾರದೆಂದು ಹೇಳಿದ್ದರು. ಇಲ್ಲವಾದಲ್ಲಿ ನಾನು ಬದುಕುವುದಿಲ್ಲ ಎಂದು ಸಹ ಹೇಳಿದ್ದರು” ಎಂದು ತಮ್ಮ ಭ್ರಷ್ಟಾಚಾರ ವಿರೋಧಿ ಹೋರಾಟದ ದಿನಗಳನ್ನು ನೆನೆಸಿಕೊಂಡಿದ್ದಾರೆ.

“ನಾನು ಬಯಸಿದರೆ… ನನ್ನ ಅನೇಕ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಮಾಡಿದ ರೀತಿಯಲ್ಲಿ ನಾನು ಸಹ ವಿದೇಶಕ್ಕೆ ಹೋಗಬಹುದಿತ್ತು …  ನಾನು ನನ್ನ ಕೆಲಸವನ್ನು ಬಿಟ್ಟುಬಿಟ್ಟೆ … ಭಯೋತ್ಪಾದಕನು ಇದನ್ನೆಲ್ಲಾ ಮಾಡುತ್ತಾನೆಯೇ?” ಪ್ರತಿಷ್ಠಿತ ಐಐಟಿ ಖರಗ್‌ಪುರದಿಂದ ಪದವಿ ಪಡೆದ ಕೇಜ್ರಿವಾಲ್, “ನಾನು ಇದನ್ನೆಲ್ಲ ನಿರ್ಧರಿಸಲು ದೆಹಲಿಯ ಜನರಿಗೆ ಬಿಡುತ್ತೇನೆ … ನಾನು ಅವರ ಮಗ, ಅವರ ಸಹೋದರನೋ ಅಥವಾ ಭಯೋತ್ಪಾದಕ” ಎಂದು ಅವರೆ ನಿರ್ಧರಿಸಲು ಎಂದು ಘೋಷಿಸಿದ್ದಾರೆ.

ಕೇಜ್ರಿವಾಲ್‌ರವರು ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಶಾಹೀನ್ ಬಾಗ್‌ನಲ್ಲಿ ಪೌರತ್ವ ವಿರೋಧಿ ಪ್ರತಿಭಟನಾಕಾರರು “ನಿಮ್ಮ ಮನೆಗೆ ನುಗ್ಗಿ ನಿಮ್ಮ ಸಹೋದರಿಯರು, ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ” ಎಂದು ವರ್ಮಾ ಕೆಟ್ಟದಾಗಿ ಮಾತನಾಡಿದ್ದರು.

ಘಟನೆಯ ವೀಡಿಯೊವೊಂದರಲ್ಲಿ ವರ್ಮಾ ಅವರು “ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಹಿಂದಿರುಗಿದರೆ, ಶಾಹೀನ್ ಬಾಗ್ ರೀತಿಯ ಜನರು ಬೀದಿಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ” ಮತ್ತು ಇದು “ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗೆ ಆದ ಪರಿಸ್ಥಿತಿ ಬರುತ್ತದೆ ಎಂದಿದ್ದರು.

“ನಾನು ದೆಹಲಿಗಾಗಿ ಐದು ವರ್ಷ, ಹಗಲು ರಾತ್ರಿ ಶ್ರಮಿಸಿದ್ದೇನೆ. ದೆಹಲಿ ಜನರಿಗಾಗಿ ನಾನು ಎಲ್ಲವನ್ನೂ ತ್ಯಜಿಸಿದ್ದೇನೆ. ರಾಜಕೀಯ ಪ್ರವೇಶಿಸಿದ ನಂತರ ನಾನು ಅನೇಕ ಸವಾಲುಗಳನ್ನು ಎದುರಿಸಿದ್ದೇನೆ, ಇದರಿಂದ ಜನರು ತಮ್ಮ ಜೀವನವನ್ನು ಸುಧಾರಿಸಲು ಸಹಾಯವಾಗಿದೆ. ಇದಕ್ಕೆ ಪ್ರತಿಯಾಗಿ, ಬಿಜೆಪಿ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ ”ಎಂದು ಕೇಜ್ರಿವಾಲ್ ನಿನ್ನೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...