Homeಮುಖಪುಟಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧದ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡ ಪಕ್ಷದ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಭಾರತ, ಇದು ಹಿಂದೂಗಳಿಗೆ ಸೇರಿದ್ದು, ಸನಾತನ ಧರ್ಮ ಇಲ್ಲಿ ಉಳಿಯುತ್ತದೆ. ಅದನ್ನು ಜೀವಂತವಾಗಿಡುವುದು ನಮ್ಮ ಜವಾಬ್ದಾರಿ. ನಾವು ಅದನ್ನು ಮಾಡುತ್ತೇವೆ” ಎಂದಿದ್ದಾರೆ.

ನೂಪುರ್ ಶರ್ಮಾ ಅವರು ಕೊಲೆ ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದಾರೆಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಯಾವುದೇ ನಂಬಿಕೆ ಇಲ್ಲದವರು ಇದೇ ಕೃತ್ಯ ಎಸಗುತ್ತಾರೆ. ಕಮಲೇಶ್ ತಿವಾರಿ ಏನೋ ಹೇಳಿ ಕೊಲೆಯಾದರು. ಬೇರೆಯವರು [ನೂಪುರ್ ಶರ್ಮಾ] ಏನೋ ಹೇಳಿದರು, ಅವರಿಗೆ ಕೊಲೆ ಬೆದರಿಕೆ ಕೂಡ ಬಂದಿದೆ. ಅವರು ನಮ್ಮ ದೇವರು, ದೇವತೆಗಳನ್ನು ವಿರೂಪಗೊಳಿಸುತ್ತಾರೆ. ಅದರ ಬಗ್ಗೆ ಚಲನಚಿತ್ರಗಳನ್ನೂ ಮಾಡುತ್ತಾರೆ. ಹಲವು ವರ್ಷಗಳಿಂದಲೂ ಇದನ್ನು ಮಾಡುತ್ತಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ” ಎಂದಿದ್ದಾರೆ.

ಹಿಂದುತ್ವ ನಾಯಕ ಕಮಲೇಶ್ ತಿವಾರಿ, ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ ನೀಡಿ ಶಿಕ್ಷೆಗೊಳಗಾಗಿದ್ದರು. ಅಕ್ಟೋಬರ್ 18, 2019ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ತಮ್ಮ ಮನೆಯ ಹೊರಗೆ ಕಮಲೇಶ್‌ ತಿವಾರಿ ಕೊಲೆಯಾಗಿದ್ದರು.

ತಿವಾರಿ ಅವರು ಹಿಂದೂ ಮಹಾಸಭಾದ “ಸ್ವಯಂ ಘೋಷಿತ” ಕಾರ್ಯಾಧ್ಯಕ್ಷರಾಗಿದ್ದರು. ಅಲ್ಲದೆ ಹಿಂದೂ ಮಹಾಸಭಾದ ಟಿಕೆಟ್‌ನಲ್ಲಿ 2012ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು ಎಂದು ವರದಿಗಳು ಹೇಳುತ್ತವೆ.

ತಿವಾರಿಯವರ ಹತ್ಯೆಗೆ ಸಂಬಂಧಿಸಿದ ನಿರೂಪಣೆಯನ್ನು ಇಲ್ಲಿ ಗಮನಿಸಬೇಕು. ಪೊಲೀಸರು ಮುಸ್ಲಿಂ ಧರ್ಮಗುರುಗಳ ಮೇಲೆ ಆರೋಪ ಹೊರಿಸಿದ್ದರು. ಆದರೆ ತಿವಾರಿ ಕುಟುಂಬವು ಹತ್ಯೆಯ ವಿಚಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಮತ್ತು ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರವನ್ನು ದೂಷಿಸಿದ ನಂತರ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿತು. ಥಾಥೇರಿ ನಿವಾಸಿಯಾಗಿರುವ ಸ್ಥಳೀಯ ಬಿಜೆಪಿ ಮುಖಂಡ ಶಿವಕುಮಾರ್ ಗುಪ್ತಾ ಅವರು ‘ದೇವಸ್ಥಾನ ವಿವಾದ’ದ ಹಿನ್ನೆಲೆಯಲ್ಲಿ ತಿವಾರಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ತಿವಾರಿ ಅವರ ತಾಯಿ ಮತ್ತು ಸೋದರಳಿಯ ಹೇಳಿಕೊಂಡಿದ್ದರು.

ನೂಪುರ್ ಶರ್ಮಾ ಅವರಲ್ಲದೆ, ಮತ್ತೊಬ್ಬ ಬಿಜೆಪಿ ನಾಯಕ ನವೀನ್ ಜಿಂದಾಲ್ ಕೂಡ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದು ಭಾರತದಲ್ಲಿ ಮಾತ್ರವಲ್ಲದೆ ಗಲ್ಫ್ ರಾಷ್ಟ್ರಗಳಲ್ಲಿಯೂ ಪ್ರತಿಭಟನೆಗೆ ಕಾರಣವಾಯಿತು. ನಂತರ ಬಿಜೆಪಿ ಕ್ರಮ ಜರುಗಿಸಿತು. ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತು. ಜಿಂದಾಲ್ ಅವರನ್ನು ಹೊರಹಾಕಿತು.

ಇದನ್ನೂ ಓದಿರಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳಿಗಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನವದೆಹಲಿಯ ಜಾಮಾ ಮಸೀದಿಯ ಹೊರಗೆ, ಉತ್ತರ ಪ್ರದೇಶದ ಸಹರಾನ್‌ಪುರ, ಕೋಲ್ಕತ್ತಾದ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಮತ್ತು ಭಾರತದ ಇತರ ನಗರಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ.

ಪ್ರಜ್ಞಾ ಸಿಂಗ್ ಠಾಕೂರ್ ಇಂತಹ ವಿವಾದಾತ್ಮಕ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ನವೆಂಬರ್ 2019ರಲ್ಲಿ, ಠಾಕೂರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ‘ದೇಶಭಕ್ತ’ (ದೇಶಭಕ್ತ) ಎಂದು ಕರೆದಿದ್ದರು. ಇದು ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಮೇ 2019ರಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರಜ್ಞಾ ಅವರು, “ನಾಥೂರಾಮ್‌ ಗೋಡ್ಸೆ ಒಬ್ಬ ದೇಶಭಕ್ತ. ಆತ ದೇಶಭಕ್ತನಾಗಿಯೇ ಉಳಿಯುತ್ತಾನೆ. ಆತನನ್ನು ಭಯೋತ್ಪಾದಕ ಎಂದು ಕರೆಯುವ ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಂಥವರಿಗೆ ಈ ಚುನಾವಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...