Homeಮುಖಪುಟಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರ ವಿರುದ್ಧದ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡ ಪಕ್ಷದ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಬಿಜೆಪಿ ಸಂಸದೆ, ಮಾಲೆಗಾಂವ್ ಸ್ಫೋಟದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಭಾರತ, ಇದು ಹಿಂದೂಗಳಿಗೆ ಸೇರಿದ್ದು, ಸನಾತನ ಧರ್ಮ ಇಲ್ಲಿ ಉಳಿಯುತ್ತದೆ. ಅದನ್ನು ಜೀವಂತವಾಗಿಡುವುದು ನಮ್ಮ ಜವಾಬ್ದಾರಿ. ನಾವು ಅದನ್ನು ಮಾಡುತ್ತೇವೆ” ಎಂದಿದ್ದಾರೆ.

ನೂಪುರ್ ಶರ್ಮಾ ಅವರು ಕೊಲೆ ಬೆದರಿಕೆ ಕರೆಗಳನ್ನು ಸ್ವೀಕರಿಸಿದ್ದಾರೆಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಯಾವುದೇ ನಂಬಿಕೆ ಇಲ್ಲದವರು ಇದೇ ಕೃತ್ಯ ಎಸಗುತ್ತಾರೆ. ಕಮಲೇಶ್ ತಿವಾರಿ ಏನೋ ಹೇಳಿ ಕೊಲೆಯಾದರು. ಬೇರೆಯವರು [ನೂಪುರ್ ಶರ್ಮಾ] ಏನೋ ಹೇಳಿದರು, ಅವರಿಗೆ ಕೊಲೆ ಬೆದರಿಕೆ ಕೂಡ ಬಂದಿದೆ. ಅವರು ನಮ್ಮ ದೇವರು, ದೇವತೆಗಳನ್ನು ವಿರೂಪಗೊಳಿಸುತ್ತಾರೆ. ಅದರ ಬಗ್ಗೆ ಚಲನಚಿತ್ರಗಳನ್ನೂ ಮಾಡುತ್ತಾರೆ. ಹಲವು ವರ್ಷಗಳಿಂದಲೂ ಇದನ್ನು ಮಾಡುತ್ತಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ” ಎಂದಿದ್ದಾರೆ.

ಹಿಂದುತ್ವ ನಾಯಕ ಕಮಲೇಶ್ ತಿವಾರಿ, ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ ನೀಡಿ ಶಿಕ್ಷೆಗೊಳಗಾಗಿದ್ದರು. ಅಕ್ಟೋಬರ್ 18, 2019ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ತಮ್ಮ ಮನೆಯ ಹೊರಗೆ ಕಮಲೇಶ್‌ ತಿವಾರಿ ಕೊಲೆಯಾಗಿದ್ದರು.

ತಿವಾರಿ ಅವರು ಹಿಂದೂ ಮಹಾಸಭಾದ “ಸ್ವಯಂ ಘೋಷಿತ” ಕಾರ್ಯಾಧ್ಯಕ್ಷರಾಗಿದ್ದರು. ಅಲ್ಲದೆ ಹಿಂದೂ ಮಹಾಸಭಾದ ಟಿಕೆಟ್‌ನಲ್ಲಿ 2012ರ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು ಎಂದು ವರದಿಗಳು ಹೇಳುತ್ತವೆ.

ತಿವಾರಿಯವರ ಹತ್ಯೆಗೆ ಸಂಬಂಧಿಸಿದ ನಿರೂಪಣೆಯನ್ನು ಇಲ್ಲಿ ಗಮನಿಸಬೇಕು. ಪೊಲೀಸರು ಮುಸ್ಲಿಂ ಧರ್ಮಗುರುಗಳ ಮೇಲೆ ಆರೋಪ ಹೊರಿಸಿದ್ದರು. ಆದರೆ ತಿವಾರಿ ಕುಟುಂಬವು ಹತ್ಯೆಯ ವಿಚಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಮತ್ತು ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರವನ್ನು ದೂಷಿಸಿದ ನಂತರ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿತು. ಥಾಥೇರಿ ನಿವಾಸಿಯಾಗಿರುವ ಸ್ಥಳೀಯ ಬಿಜೆಪಿ ಮುಖಂಡ ಶಿವಕುಮಾರ್ ಗುಪ್ತಾ ಅವರು ‘ದೇವಸ್ಥಾನ ವಿವಾದ’ದ ಹಿನ್ನೆಲೆಯಲ್ಲಿ ತಿವಾರಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ತಿವಾರಿ ಅವರ ತಾಯಿ ಮತ್ತು ಸೋದರಳಿಯ ಹೇಳಿಕೊಂಡಿದ್ದರು.

ನೂಪುರ್ ಶರ್ಮಾ ಅವರಲ್ಲದೆ, ಮತ್ತೊಬ್ಬ ಬಿಜೆಪಿ ನಾಯಕ ನವೀನ್ ಜಿಂದಾಲ್ ಕೂಡ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇದು ಭಾರತದಲ್ಲಿ ಮಾತ್ರವಲ್ಲದೆ ಗಲ್ಫ್ ರಾಷ್ಟ್ರಗಳಲ್ಲಿಯೂ ಪ್ರತಿಭಟನೆಗೆ ಕಾರಣವಾಯಿತು. ನಂತರ ಬಿಜೆಪಿ ಕ್ರಮ ಜರುಗಿಸಿತು. ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತು. ಜಿಂದಾಲ್ ಅವರನ್ನು ಹೊರಹಾಕಿತು.

ಇದನ್ನೂ ಓದಿರಿ: ಒಳಗೊಳ್ಳದ ಮಾದರಿಯ ಸರ್ಕಾರಕ್ಕೆ ವಿದೇಶದಿಂದ ಬಂದೊದಗಿದ ಘಾಸಿ

ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳಿಗಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನವದೆಹಲಿಯ ಜಾಮಾ ಮಸೀದಿಯ ಹೊರಗೆ, ಉತ್ತರ ಪ್ರದೇಶದ ಸಹರಾನ್‌ಪುರ, ಕೋಲ್ಕತ್ತಾದ ಪಾರ್ಕ್ ಸರ್ಕಸ್ ಪ್ರದೇಶದಲ್ಲಿ ಮತ್ತು ಭಾರತದ ಇತರ ನಗರಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ.

ಪ್ರಜ್ಞಾ ಸಿಂಗ್ ಠಾಕೂರ್ ಇಂತಹ ವಿವಾದಾತ್ಮಕ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ನವೆಂಬರ್ 2019ರಲ್ಲಿ, ಠಾಕೂರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ‘ದೇಶಭಕ್ತ’ (ದೇಶಭಕ್ತ) ಎಂದು ಕರೆದಿದ್ದರು. ಇದು ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

ಮೇ 2019ರಲ್ಲಿ ಲೋಕಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರಜ್ಞಾ ಅವರು, “ನಾಥೂರಾಮ್‌ ಗೋಡ್ಸೆ ಒಬ್ಬ ದೇಶಭಕ್ತ. ಆತ ದೇಶಭಕ್ತನಾಗಿಯೇ ಉಳಿಯುತ್ತಾನೆ. ಆತನನ್ನು ಭಯೋತ್ಪಾದಕ ಎಂದು ಕರೆಯುವ ಜನರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಂಥವರಿಗೆ ಈ ಚುನಾವಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು” ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...