Homeಕರ್ನಾಟಕಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

“ಪ್ರಿಯ ಪ್ರಕಾಶ್ ರಾಜ್, ನಿಮ್ಮ ಮತ್ತು ನಿಮ್ಮ ಕುಟುಂಬದ ವಿರುದ್ಧ 2017ರ ಅಕ್ಟೋಬರ್ 2 & 3 ರಂದು ಕೀಳುಮಟ್ಟದ ಲೇಖನವನ್ನು ಪೋಸ್ಟ್ ಮಾಡಿದ್ದೆ. ಆದರೆ ಅದು ಅನಗತ್ಯವಾಗಿತ್ತು ಮತ್ತು ನಿಮಗೆ ನೋಯಿಸುವಂತದ್ದಾಗಿತ್ತು ಎಂದು ನನಗೀಗ ಅರ್ಥವಾಗಿದೆ. ಆದ್ದರಿಂದ ನಾನು ಅದನ್ನು ವಾಪಸ್ ಪಡೆಯುತ್ತಿದ್ದೇನೆ ಮತ್ತೆ ಟ್ವಿಟ್ಟರ್ ಫೇಸ್ ಬುಕ್ ಮೂಲಕ ಕ್ಷಮೆಯಾಚಿಸುತ್ತೇನೆ” ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಹುಭಾಷ ನಟ ಮತ್ತು ರಾಜಕಾರಣಿ ಪ್ರಕಾಶ್ ರಾಜ್ ಅವರು “ಕ್ಷಮಾಪಣೆಯನ್ನು ನಾನು ಸ್ವೀಕರಿಸಿದ್ದೇನೆ. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿರಬಹುದು, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ತೇಜೋವಧೆ ಮಾಡಬಾರದು. ನಾವಿಬ್ಬರು ನಮ್ಮ ನಮ್ಮ ಕ್ಷೇತ್ರಗಳಲ್ಲಿ ಯಶಸ್ವಿ ವ್ಯಕ್ತಿಗಳಾಗಿದ್ದೇವೆ. ಹಾಗಾಗಿ ಸಮಾಜದಲ್ಲಿ ಒಳ್ಳೆಯ ಮಾದರಿಯನ್ನು ಹುಟ್ಟುಹಾಕುವುದ ನಮ್ಮ ಜವಾಬ್ದಾರಿ” ಎಂದಿದ್ದಾರೆ.

ಪ್ರತಾಪ್ ಸಿಂಹ ಪ್ರಕಾಶ್ ರಾಜ್ ವಿರುದ್ಧ ತೀರಾ ಕೆಟ್ಟ ಭಾಷೆಯಲ್ಲಿ ಹಲವು ಲೇಖನಗಳನ್ನು ಬರೆದಿದ್ದರು. ಅವರ ಕುಟುಂಬದ ತೇಜೋವಧೆ ಮಾಡಿದ್ದರು. ಇದರ ವಿರುದ್ಧ ನಟ ಪ್ರಕಾಶ್ ರಾಜ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ನನಗೆ ಹಣ ಬೇಕಿಲ್ಲ ಆದರೆ ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕೆಂದು 1 ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಿ ನೋಟಿಸ್ ಕಳಿಸಿದ್ದರು.

ಆದರೆ ಇದಕ್ಕೆ ಪ್ರತಾಪ್ ಸಿಂಹ ಉತ್ತರಿಸಿರಲಿಲ್ಲ. ಬದಲಿಗೆ ನಿಮ್ಮ ಮಾನ ಕೇವಲ 1 ರೂಪಾಯಿ ಅಷ್ಟೇನಾ ಎಂದು ದಾರ್ಷ್ಟ್ಯ ತೋರಿಸಿದ್ದರು. ಆ ನಂತರ ಕರ್ನಾಟದಕ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿಕೊಂಡಿತ್ತು. ವಿಚಾರಣೆಯಲ್ಲಿ ಪ್ರತಾಪ್ ಸಿಂಹ ತಪ್ಪೆಸೆಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೂಡಲೇ ಪ್ರತಾಪ್ ಸಿಂಹ ಪ್ರಕಾಶ್ ರಾಜ್ ರವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕೆಂದು ಆದೇಶ ನೀಡಿತ್ತು.

ಈ ಕುರಿತ ಮಾತನಾಡಿರುವ ಪ್ರಕಾಶ್ ರಾಜ್ “ಇಂದು ವಿಚಾರಣೆಗೂ ಮುನ್ನ ಪ್ರತಾಪ್ ಸಿಂಹ ರಾಜಿಯಾಗಲು ಬಯಸಿದರು. ಆಗ ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಒಳ್ಳೆಯದು ಎಂದು ಹೇಳಿದ್ದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ನಮ್ಮ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಅದರೆ ನಾವು ಸಾರ್ವಜನಿಕ ಚರ್ಚೆಗಳಲ್ಲಿ ಘನತೆಯನ್ನು ಕಾಪಾಡಬೇಕಿದೆ. ಕ್ಷಮೆಯನ್ನು ಅಂಗೀಕರಿಸುವುದು ಮನುಷ್ಯತ್ವ. ಕ್ಷಮಿಸುವುದು ದೊಡ್ಡ ವ್ಯಕ್ತಿತ್ವ ಎಂದು ನಂಬಿದ್ದೇನೆ. ಈ ಘಟನೆ ನನಗೆ ನೈತಿಕವಾಗಿ ದೊಡ್ಡ ವಿಜಯವಾಗಿದೆ. ಆದರೆ ಅದಕ್ಕಾಗಿ ನಾನು ಎರಡು ವರ್ಷಗಳನ್ನು ವ್ಯಯಿಸಬೇಕಾಯಿತು. ಕೊನೆಗೂ ಅವರು ಕ್ಷಮೆ ಕೇಳಿದ್ದಾರೆ. ನಾನು ಸ್ವೀಕರಿಸಿದ್ದೇನೆ” ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...