Homeಕರ್ನಾಟಕಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

“ಪ್ರಿಯ ಪ್ರಕಾಶ್ ರಾಜ್, ನಿಮ್ಮ ಮತ್ತು ನಿಮ್ಮ ಕುಟುಂಬದ ವಿರುದ್ಧ 2017ರ ಅಕ್ಟೋಬರ್ 2 & 3 ರಂದು ಕೀಳುಮಟ್ಟದ ಲೇಖನವನ್ನು ಪೋಸ್ಟ್ ಮಾಡಿದ್ದೆ. ಆದರೆ ಅದು ಅನಗತ್ಯವಾಗಿತ್ತು ಮತ್ತು ನಿಮಗೆ ನೋಯಿಸುವಂತದ್ದಾಗಿತ್ತು ಎಂದು ನನಗೀಗ ಅರ್ಥವಾಗಿದೆ. ಆದ್ದರಿಂದ ನಾನು ಅದನ್ನು ವಾಪಸ್ ಪಡೆಯುತ್ತಿದ್ದೇನೆ ಮತ್ತೆ ಟ್ವಿಟ್ಟರ್ ಫೇಸ್ ಬುಕ್ ಮೂಲಕ ಕ್ಷಮೆಯಾಚಿಸುತ್ತೇನೆ” ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಹುಭಾಷ ನಟ ಮತ್ತು ರಾಜಕಾರಣಿ ಪ್ರಕಾಶ್ ರಾಜ್ ಅವರು “ಕ್ಷಮಾಪಣೆಯನ್ನು ನಾನು ಸ್ವೀಕರಿಸಿದ್ದೇನೆ. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿರಬಹುದು, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ತೇಜೋವಧೆ ಮಾಡಬಾರದು. ನಾವಿಬ್ಬರು ನಮ್ಮ ನಮ್ಮ ಕ್ಷೇತ್ರಗಳಲ್ಲಿ ಯಶಸ್ವಿ ವ್ಯಕ್ತಿಗಳಾಗಿದ್ದೇವೆ. ಹಾಗಾಗಿ ಸಮಾಜದಲ್ಲಿ ಒಳ್ಳೆಯ ಮಾದರಿಯನ್ನು ಹುಟ್ಟುಹಾಕುವುದ ನಮ್ಮ ಜವಾಬ್ದಾರಿ” ಎಂದಿದ್ದಾರೆ.

ಪ್ರತಾಪ್ ಸಿಂಹ ಪ್ರಕಾಶ್ ರಾಜ್ ವಿರುದ್ಧ ತೀರಾ ಕೆಟ್ಟ ಭಾಷೆಯಲ್ಲಿ ಹಲವು ಲೇಖನಗಳನ್ನು ಬರೆದಿದ್ದರು. ಅವರ ಕುಟುಂಬದ ತೇಜೋವಧೆ ಮಾಡಿದ್ದರು. ಇದರ ವಿರುದ್ಧ ನಟ ಪ್ರಕಾಶ್ ರಾಜ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ನನಗೆ ಹಣ ಬೇಕಿಲ್ಲ ಆದರೆ ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕೆಂದು 1 ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಿ ನೋಟಿಸ್ ಕಳಿಸಿದ್ದರು.

ಆದರೆ ಇದಕ್ಕೆ ಪ್ರತಾಪ್ ಸಿಂಹ ಉತ್ತರಿಸಿರಲಿಲ್ಲ. ಬದಲಿಗೆ ನಿಮ್ಮ ಮಾನ ಕೇವಲ 1 ರೂಪಾಯಿ ಅಷ್ಟೇನಾ ಎಂದು ದಾರ್ಷ್ಟ್ಯ ತೋರಿಸಿದ್ದರು. ಆ ನಂತರ ಕರ್ನಾಟದಕ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿಕೊಂಡಿತ್ತು. ವಿಚಾರಣೆಯಲ್ಲಿ ಪ್ರತಾಪ್ ಸಿಂಹ ತಪ್ಪೆಸೆಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೂಡಲೇ ಪ್ರತಾಪ್ ಸಿಂಹ ಪ್ರಕಾಶ್ ರಾಜ್ ರವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕೆಂದು ಆದೇಶ ನೀಡಿತ್ತು.

ಈ ಕುರಿತ ಮಾತನಾಡಿರುವ ಪ್ರಕಾಶ್ ರಾಜ್ “ಇಂದು ವಿಚಾರಣೆಗೂ ಮುನ್ನ ಪ್ರತಾಪ್ ಸಿಂಹ ರಾಜಿಯಾಗಲು ಬಯಸಿದರು. ಆಗ ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಒಳ್ಳೆಯದು ಎಂದು ಹೇಳಿದ್ದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ನಮ್ಮ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಅದರೆ ನಾವು ಸಾರ್ವಜನಿಕ ಚರ್ಚೆಗಳಲ್ಲಿ ಘನತೆಯನ್ನು ಕಾಪಾಡಬೇಕಿದೆ. ಕ್ಷಮೆಯನ್ನು ಅಂಗೀಕರಿಸುವುದು ಮನುಷ್ಯತ್ವ. ಕ್ಷಮಿಸುವುದು ದೊಡ್ಡ ವ್ಯಕ್ತಿತ್ವ ಎಂದು ನಂಬಿದ್ದೇನೆ. ಈ ಘಟನೆ ನನಗೆ ನೈತಿಕವಾಗಿ ದೊಡ್ಡ ವಿಜಯವಾಗಿದೆ. ಆದರೆ ಅದಕ್ಕಾಗಿ ನಾನು ಎರಡು ವರ್ಷಗಳನ್ನು ವ್ಯಯಿಸಬೇಕಾಯಿತು. ಕೊನೆಗೂ ಅವರು ಕ್ಷಮೆ ಕೇಳಿದ್ದಾರೆ. ನಾನು ಸ್ವೀಕರಿಸಿದ್ದೇನೆ” ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...