Homeಕರ್ನಾಟಕಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

“ಪ್ರಿಯ ಪ್ರಕಾಶ್ ರಾಜ್, ನಿಮ್ಮ ಮತ್ತು ನಿಮ್ಮ ಕುಟುಂಬದ ವಿರುದ್ಧ 2017ರ ಅಕ್ಟೋಬರ್ 2 & 3 ರಂದು ಕೀಳುಮಟ್ಟದ ಲೇಖನವನ್ನು ಪೋಸ್ಟ್ ಮಾಡಿದ್ದೆ. ಆದರೆ ಅದು ಅನಗತ್ಯವಾಗಿತ್ತು ಮತ್ತು ನಿಮಗೆ ನೋಯಿಸುವಂತದ್ದಾಗಿತ್ತು ಎಂದು ನನಗೀಗ ಅರ್ಥವಾಗಿದೆ. ಆದ್ದರಿಂದ ನಾನು ಅದನ್ನು ವಾಪಸ್ ಪಡೆಯುತ್ತಿದ್ದೇನೆ ಮತ್ತೆ ಟ್ವಿಟ್ಟರ್ ಫೇಸ್ ಬುಕ್ ಮೂಲಕ ಕ್ಷಮೆಯಾಚಿಸುತ್ತೇನೆ” ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಹುಭಾಷ ನಟ ಮತ್ತು ರಾಜಕಾರಣಿ ಪ್ರಕಾಶ್ ರಾಜ್ ಅವರು “ಕ್ಷಮಾಪಣೆಯನ್ನು ನಾನು ಸ್ವೀಕರಿಸಿದ್ದೇನೆ. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿರಬಹುದು, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ತೇಜೋವಧೆ ಮಾಡಬಾರದು. ನಾವಿಬ್ಬರು ನಮ್ಮ ನಮ್ಮ ಕ್ಷೇತ್ರಗಳಲ್ಲಿ ಯಶಸ್ವಿ ವ್ಯಕ್ತಿಗಳಾಗಿದ್ದೇವೆ. ಹಾಗಾಗಿ ಸಮಾಜದಲ್ಲಿ ಒಳ್ಳೆಯ ಮಾದರಿಯನ್ನು ಹುಟ್ಟುಹಾಕುವುದ ನಮ್ಮ ಜವಾಬ್ದಾರಿ” ಎಂದಿದ್ದಾರೆ.

ಪ್ರತಾಪ್ ಸಿಂಹ ಪ್ರಕಾಶ್ ರಾಜ್ ವಿರುದ್ಧ ತೀರಾ ಕೆಟ್ಟ ಭಾಷೆಯಲ್ಲಿ ಹಲವು ಲೇಖನಗಳನ್ನು ಬರೆದಿದ್ದರು. ಅವರ ಕುಟುಂಬದ ತೇಜೋವಧೆ ಮಾಡಿದ್ದರು. ಇದರ ವಿರುದ್ಧ ನಟ ಪ್ರಕಾಶ್ ರಾಜ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ನನಗೆ ಹಣ ಬೇಕಿಲ್ಲ ಆದರೆ ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕೆಂದು 1 ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಿ ನೋಟಿಸ್ ಕಳಿಸಿದ್ದರು.

ಆದರೆ ಇದಕ್ಕೆ ಪ್ರತಾಪ್ ಸಿಂಹ ಉತ್ತರಿಸಿರಲಿಲ್ಲ. ಬದಲಿಗೆ ನಿಮ್ಮ ಮಾನ ಕೇವಲ 1 ರೂಪಾಯಿ ಅಷ್ಟೇನಾ ಎಂದು ದಾರ್ಷ್ಟ್ಯ ತೋರಿಸಿದ್ದರು. ಆ ನಂತರ ಕರ್ನಾಟದಕ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿಕೊಂಡಿತ್ತು. ವಿಚಾರಣೆಯಲ್ಲಿ ಪ್ರತಾಪ್ ಸಿಂಹ ತಪ್ಪೆಸೆಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೂಡಲೇ ಪ್ರತಾಪ್ ಸಿಂಹ ಪ್ರಕಾಶ್ ರಾಜ್ ರವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕೆಂದು ಆದೇಶ ನೀಡಿತ್ತು.

ಈ ಕುರಿತ ಮಾತನಾಡಿರುವ ಪ್ರಕಾಶ್ ರಾಜ್ “ಇಂದು ವಿಚಾರಣೆಗೂ ಮುನ್ನ ಪ್ರತಾಪ್ ಸಿಂಹ ರಾಜಿಯಾಗಲು ಬಯಸಿದರು. ಆಗ ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಒಳ್ಳೆಯದು ಎಂದು ಹೇಳಿದ್ದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ನಮ್ಮ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಅದರೆ ನಾವು ಸಾರ್ವಜನಿಕ ಚರ್ಚೆಗಳಲ್ಲಿ ಘನತೆಯನ್ನು ಕಾಪಾಡಬೇಕಿದೆ. ಕ್ಷಮೆಯನ್ನು ಅಂಗೀಕರಿಸುವುದು ಮನುಷ್ಯತ್ವ. ಕ್ಷಮಿಸುವುದು ದೊಡ್ಡ ವ್ಯಕ್ತಿತ್ವ ಎಂದು ನಂಬಿದ್ದೇನೆ. ಈ ಘಟನೆ ನನಗೆ ನೈತಿಕವಾಗಿ ದೊಡ್ಡ ವಿಜಯವಾಗಿದೆ. ಆದರೆ ಅದಕ್ಕಾಗಿ ನಾನು ಎರಡು ವರ್ಷಗಳನ್ನು ವ್ಯಯಿಸಬೇಕಾಯಿತು. ಕೊನೆಗೂ ಅವರು ಕ್ಷಮೆ ಕೇಳಿದ್ದಾರೆ. ನಾನು ಸ್ವೀಕರಿಸಿದ್ದೇನೆ” ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...