Homeಕರ್ನಾಟಕಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

“ಪ್ರಿಯ ಪ್ರಕಾಶ್ ರಾಜ್, ನಿಮ್ಮ ಮತ್ತು ನಿಮ್ಮ ಕುಟುಂಬದ ವಿರುದ್ಧ 2017ರ ಅಕ್ಟೋಬರ್ 2 & 3 ರಂದು ಕೀಳುಮಟ್ಟದ ಲೇಖನವನ್ನು ಪೋಸ್ಟ್ ಮಾಡಿದ್ದೆ. ಆದರೆ ಅದು ಅನಗತ್ಯವಾಗಿತ್ತು ಮತ್ತು ನಿಮಗೆ ನೋಯಿಸುವಂತದ್ದಾಗಿತ್ತು ಎಂದು ನನಗೀಗ ಅರ್ಥವಾಗಿದೆ. ಆದ್ದರಿಂದ ನಾನು ಅದನ್ನು ವಾಪಸ್ ಪಡೆಯುತ್ತಿದ್ದೇನೆ ಮತ್ತೆ ಟ್ವಿಟ್ಟರ್ ಫೇಸ್ ಬುಕ್ ಮೂಲಕ ಕ್ಷಮೆಯಾಚಿಸುತ್ತೇನೆ” ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಹುಭಾಷ ನಟ ಮತ್ತು ರಾಜಕಾರಣಿ ಪ್ರಕಾಶ್ ರಾಜ್ ಅವರು “ಕ್ಷಮಾಪಣೆಯನ್ನು ನಾನು ಸ್ವೀಕರಿಸಿದ್ದೇನೆ. ನಮ್ಮಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಯವಿರಬಹುದು, ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ತೇಜೋವಧೆ ಮಾಡಬಾರದು. ನಾವಿಬ್ಬರು ನಮ್ಮ ನಮ್ಮ ಕ್ಷೇತ್ರಗಳಲ್ಲಿ ಯಶಸ್ವಿ ವ್ಯಕ್ತಿಗಳಾಗಿದ್ದೇವೆ. ಹಾಗಾಗಿ ಸಮಾಜದಲ್ಲಿ ಒಳ್ಳೆಯ ಮಾದರಿಯನ್ನು ಹುಟ್ಟುಹಾಕುವುದ ನಮ್ಮ ಜವಾಬ್ದಾರಿ” ಎಂದಿದ್ದಾರೆ.

ಪ್ರತಾಪ್ ಸಿಂಹ ಪ್ರಕಾಶ್ ರಾಜ್ ವಿರುದ್ಧ ತೀರಾ ಕೆಟ್ಟ ಭಾಷೆಯಲ್ಲಿ ಹಲವು ಲೇಖನಗಳನ್ನು ಬರೆದಿದ್ದರು. ಅವರ ಕುಟುಂಬದ ತೇಜೋವಧೆ ಮಾಡಿದ್ದರು. ಇದರ ವಿರುದ್ಧ ನಟ ಪ್ರಕಾಶ್ ರಾಜ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ನನಗೆ ಹಣ ಬೇಕಿಲ್ಲ ಆದರೆ ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕೆಂದು 1 ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಿ ನೋಟಿಸ್ ಕಳಿಸಿದ್ದರು.

ಆದರೆ ಇದಕ್ಕೆ ಪ್ರತಾಪ್ ಸಿಂಹ ಉತ್ತರಿಸಿರಲಿಲ್ಲ. ಬದಲಿಗೆ ನಿಮ್ಮ ಮಾನ ಕೇವಲ 1 ರೂಪಾಯಿ ಅಷ್ಟೇನಾ ಎಂದು ದಾರ್ಷ್ಟ್ಯ ತೋರಿಸಿದ್ದರು. ಆ ನಂತರ ಕರ್ನಾಟದಕ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿಕೊಂಡಿತ್ತು. ವಿಚಾರಣೆಯಲ್ಲಿ ಪ್ರತಾಪ್ ಸಿಂಹ ತಪ್ಪೆಸೆಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಕೂಡಲೇ ಪ್ರತಾಪ್ ಸಿಂಹ ಪ್ರಕಾಶ್ ರಾಜ್ ರವರ ಬಳಿ ಬಹಿರಂಗ ಕ್ಷಮೆಯಾಚಿಸಬೇಕೆಂದು ಆದೇಶ ನೀಡಿತ್ತು.

ಈ ಕುರಿತ ಮಾತನಾಡಿರುವ ಪ್ರಕಾಶ್ ರಾಜ್ “ಇಂದು ವಿಚಾರಣೆಗೂ ಮುನ್ನ ಪ್ರತಾಪ್ ಸಿಂಹ ರಾಜಿಯಾಗಲು ಬಯಸಿದರು. ಆಗ ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಒಳ್ಳೆಯದು ಎಂದು ಹೇಳಿದ್ದೆ. ಈಗ ಅವರು ಕ್ಷಮೆ ಕೇಳಿದ್ದಾರೆ. ನಮ್ಮ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು. ಅದರೆ ನಾವು ಸಾರ್ವಜನಿಕ ಚರ್ಚೆಗಳಲ್ಲಿ ಘನತೆಯನ್ನು ಕಾಪಾಡಬೇಕಿದೆ. ಕ್ಷಮೆಯನ್ನು ಅಂಗೀಕರಿಸುವುದು ಮನುಷ್ಯತ್ವ. ಕ್ಷಮಿಸುವುದು ದೊಡ್ಡ ವ್ಯಕ್ತಿತ್ವ ಎಂದು ನಂಬಿದ್ದೇನೆ. ಈ ಘಟನೆ ನನಗೆ ನೈತಿಕವಾಗಿ ದೊಡ್ಡ ವಿಜಯವಾಗಿದೆ. ಆದರೆ ಅದಕ್ಕಾಗಿ ನಾನು ಎರಡು ವರ್ಷಗಳನ್ನು ವ್ಯಯಿಸಬೇಕಾಯಿತು. ಕೊನೆಗೂ ಅವರು ಕ್ಷಮೆ ಕೇಳಿದ್ದಾರೆ. ನಾನು ಸ್ವೀಕರಿಸಿದ್ದೇನೆ” ಎಂದಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...