Homeಮುಖಪುಟಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಜಾರ್ಖಂಡ್ ಜಿಲ್ಲಾಡಳಿತ!

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಜಾರ್ಖಂಡ್ ಜಿಲ್ಲಾಡಳಿತ!

"ನಾನು ಭಾರತದ ಸಂಸದ. ಜಾರ್ಖಂಡ್‌ ಕೂಡ ಭಾರತದ ಭಾಗ ಎಂಬುದನ್ನು ಮರೆಯಬೇಡಿ. ಗಿರಿಡಿಹ್‌ನಲ್ಲಿ ಅನಾರೋಗ್ಯಕ್ಕೊಳಗಾಗಿರುವ ನನ್ನ ತಾಯಿಯನ್ನು ನೋಡಲು ಬರಬಾರದೇ" ಎಂದು ಸಂಸದರು ಕಿಡಿಕಾರಿದ್ದಾರೆ.

- Advertisement -
- Advertisement -

ಕೋವಿಡ್ ಲಾಕ್‌ಡೌನ್‌ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಘಟನೆ ಇಂದು ಸಂಭವಿಸಿದೆ.

ಉತ್ತರ ಪ್ರದೇಶದಿಂದ ನೇರ ಜಾರ್ಖಂಡ್‌ನ ಗಿರಿಡಿಹ್ ತೆರಳಿದ ಸಾಕ್ಷಿ ಮಹಾರಾಜ್ ಅಲ್ಲಿಂದ ಧನಬಾದ್‌ ಮೂಲಕ ಉನ್ನಾವ್‌ ತೆರಳಿ ಅಲ್ಲಿಂದ ರೈಲಿನಲ್ಲಿ ದೆಹಲಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಪಿರ್ಟಾಂಡ್ ಪೊಲೀಸ್ ಸ್ಟೇಷನ್ ಬಳಿ ತಡೆಯಲಾಗಿದೆ.

ಸಂಸದರು ಜಿಲ್ಲೆಗೆ ಬರುವ ವಿಷಯ ತಿಳಿಸಿರಲಿಲ್ಲ. ಕೋವಿಡ್ ಸಾಂಕ್ರಾಮಿಕ ಕಾರಣಕ್ಕಾಗಿ ರಾಜ್ಯ ಗಡಿಯನ್ನು ಬಂದ್ ಮಾಡಲಾಗಿದ್ದರು ನಿಬಂಧನೆಗಳನ್ನು ಉಲ್ಲಂಘಿಸಿ ರಾಜ್ಯ ಪ್ರವೇಶಿಸಿದ್ದಾಕ್ಕಿ ಅವರನ್ನು ನಗರದ ಶಾಂತಿ ಭವನದಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಿದ್ದೇವೆ ಎಂದು ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ತಮ್ಮನ್ನು ಕ್ವಾರಂಟೈನ್‌ಗೆ ಒಳಪಡಿಸುವುದಕ್ಕೆ ಖಂಡತುಂಡವಾಗಿ ವಿರೋಧ ವ್ಯಕ್ತಪಡಿಸಿದ ಸಾಕ್ಷಿ ಮಹಾರಾಜ್ “ನಾನು ಭಾರತದ ಸಂಸದ. ಜಾರ್ಖಂಡ್‌ ಕೂಡ ಭಾರತದ ಭಾಗ ಎಂಬುದನ್ನು ಮರೆಯಬೇಡಿ. ಗಿರಿಡಿಹ್‌ನಲ್ಲಿ ಅನಾರೋಗ್ಯಕ್ಕೊಳಗಾಗಿರುವ ನನ್ನ ತಾಯಿಯನ್ನು ನೋಡಲು ಬರಬಾರದೇ” ಎಂದು ಕಿಡಿಕಾರಿದ್ದಾರೆ.

ಪೊಲೀಸ್ ಮತ್ತು ಜಿಲ್ಲಾಧಿಕಾರಿಗಳ ಎದುರೆ ಉತ್ತರ ಪ್ರದೇಶದ ಚೀಫ್ ಸೆಕ್ರಟರಿಯವರಿಗೆ ಫೋನ್ ಮಾಡಿ ಅವರಿಂದ ಜಾರ್ಖಂಡ್ ಅಧಿಕಾರಿಗಳಿಗೆ ಮಾತನಾಡಿಸಿದ್ದಾರೆ. ಆದರೂ ಏನೂ ಪ್ರಯೋಜನವಾಗಿಲ್ಲ. ಜಾರ್ಖಂಡ್ ನಿಯಮಗಳ ಪ್ರಕಾರ ಅವರಿಗೆ ಕ್ವಾರಂಟೈನ್ ಕಡ್ಡಾಯ ಎಂದು ಅಧಿಕಾರಿಗಳು ಖಡಕ್‌ ಆಗಿ ಹೇಳಿದ್ದಾರೆ.

ನನಗೆ ಭಾನುವಾರ ಸಂಸತ್ತಿನ ಸ್ಥಾಯಿ ಸಮಿತಿಯ ಸಭೆಯಿದೆ. ಹಾಗಾಗಿ ನಾನು ಹೋಗಲೇಬೇಕು. ಆದರೆ ನನ್ನನ್ನು ಬಲವಂತವಾಗಿ ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿನ ನಿಯಮಗಳು ನನಗೆ ಮೊದಲೇ ಗೊತ್ತಿದ್ದರೆ ಬರುತ್ತಲೇ ಇರಲಿಲ್ಲ ಎಂದು ಮಾಧ್ಯಮಗಳ ಎದುರು ಗೋಳು ತೋಡಿಕೊಂಡಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್‌ ಕೂಡ ಬುಧವಾರ ರಾಂಚಿಯ ರಿಮ್ಸ್‌ನಲ್ಲಿರುವ ತನ್ನ ತಂದೆಯನ್ನು ನೋಡಿ ಹೋಗಿದ್ದಾರೆ. ಅವರಿಗಿಲ್ಲದ ಕ್ವಾರಂಟೈನ್ ನನಗೆ ಏಕೆ? ಇಲ್ಲಿ ರಾಜಕೀಯ ನಡೆಯುತ್ತಿದೆ. ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...