Homeಮುಖಪುಟಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಜಾರ್ಖಂಡ್ ಜಿಲ್ಲಾಡಳಿತ!

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಜಾರ್ಖಂಡ್ ಜಿಲ್ಲಾಡಳಿತ!

"ನಾನು ಭಾರತದ ಸಂಸದ. ಜಾರ್ಖಂಡ್‌ ಕೂಡ ಭಾರತದ ಭಾಗ ಎಂಬುದನ್ನು ಮರೆಯಬೇಡಿ. ಗಿರಿಡಿಹ್‌ನಲ್ಲಿ ಅನಾರೋಗ್ಯಕ್ಕೊಳಗಾಗಿರುವ ನನ್ನ ತಾಯಿಯನ್ನು ನೋಡಲು ಬರಬಾರದೇ" ಎಂದು ಸಂಸದರು ಕಿಡಿಕಾರಿದ್ದಾರೆ.

- Advertisement -
- Advertisement -

ಕೋವಿಡ್ ಲಾಕ್‌ಡೌನ್‌ ನಿಬಂಧನೆಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರ್ಖಂಡ್ ಜಿಲ್ಲಾಡಳಿತ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ಗೆ ಬಲವಂತವಾಗಿ 14 ದಿನ ಕ್ವಾರಂಟೈನ್‌ಗೊಳಪಡಿಸಿದ ಘಟನೆ ಇಂದು ಸಂಭವಿಸಿದೆ.

ಉತ್ತರ ಪ್ರದೇಶದಿಂದ ನೇರ ಜಾರ್ಖಂಡ್‌ನ ಗಿರಿಡಿಹ್ ತೆರಳಿದ ಸಾಕ್ಷಿ ಮಹಾರಾಜ್ ಅಲ್ಲಿಂದ ಧನಬಾದ್‌ ಮೂಲಕ ಉನ್ನಾವ್‌ ತೆರಳಿ ಅಲ್ಲಿಂದ ರೈಲಿನಲ್ಲಿ ದೆಹಲಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಪಿರ್ಟಾಂಡ್ ಪೊಲೀಸ್ ಸ್ಟೇಷನ್ ಬಳಿ ತಡೆಯಲಾಗಿದೆ.

ಸಂಸದರು ಜಿಲ್ಲೆಗೆ ಬರುವ ವಿಷಯ ತಿಳಿಸಿರಲಿಲ್ಲ. ಕೋವಿಡ್ ಸಾಂಕ್ರಾಮಿಕ ಕಾರಣಕ್ಕಾಗಿ ರಾಜ್ಯ ಗಡಿಯನ್ನು ಬಂದ್ ಮಾಡಲಾಗಿದ್ದರು ನಿಬಂಧನೆಗಳನ್ನು ಉಲ್ಲಂಘಿಸಿ ರಾಜ್ಯ ಪ್ರವೇಶಿಸಿದ್ದಾಕ್ಕಿ ಅವರನ್ನು ನಗರದ ಶಾಂತಿ ಭವನದಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಪಡಿಸಿದ್ದೇವೆ ಎಂದು ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಸಿನ್ಹಾ ಹೇಳಿದ್ದಾರೆ.

ತಮ್ಮನ್ನು ಕ್ವಾರಂಟೈನ್‌ಗೆ ಒಳಪಡಿಸುವುದಕ್ಕೆ ಖಂಡತುಂಡವಾಗಿ ವಿರೋಧ ವ್ಯಕ್ತಪಡಿಸಿದ ಸಾಕ್ಷಿ ಮಹಾರಾಜ್ “ನಾನು ಭಾರತದ ಸಂಸದ. ಜಾರ್ಖಂಡ್‌ ಕೂಡ ಭಾರತದ ಭಾಗ ಎಂಬುದನ್ನು ಮರೆಯಬೇಡಿ. ಗಿರಿಡಿಹ್‌ನಲ್ಲಿ ಅನಾರೋಗ್ಯಕ್ಕೊಳಗಾಗಿರುವ ನನ್ನ ತಾಯಿಯನ್ನು ನೋಡಲು ಬರಬಾರದೇ” ಎಂದು ಕಿಡಿಕಾರಿದ್ದಾರೆ.

ಪೊಲೀಸ್ ಮತ್ತು ಜಿಲ್ಲಾಧಿಕಾರಿಗಳ ಎದುರೆ ಉತ್ತರ ಪ್ರದೇಶದ ಚೀಫ್ ಸೆಕ್ರಟರಿಯವರಿಗೆ ಫೋನ್ ಮಾಡಿ ಅವರಿಂದ ಜಾರ್ಖಂಡ್ ಅಧಿಕಾರಿಗಳಿಗೆ ಮಾತನಾಡಿಸಿದ್ದಾರೆ. ಆದರೂ ಏನೂ ಪ್ರಯೋಜನವಾಗಿಲ್ಲ. ಜಾರ್ಖಂಡ್ ನಿಯಮಗಳ ಪ್ರಕಾರ ಅವರಿಗೆ ಕ್ವಾರಂಟೈನ್ ಕಡ್ಡಾಯ ಎಂದು ಅಧಿಕಾರಿಗಳು ಖಡಕ್‌ ಆಗಿ ಹೇಳಿದ್ದಾರೆ.

ನನಗೆ ಭಾನುವಾರ ಸಂಸತ್ತಿನ ಸ್ಥಾಯಿ ಸಮಿತಿಯ ಸಭೆಯಿದೆ. ಹಾಗಾಗಿ ನಾನು ಹೋಗಲೇಬೇಕು. ಆದರೆ ನನ್ನನ್ನು ಬಲವಂತವಾಗಿ ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿನ ನಿಯಮಗಳು ನನಗೆ ಮೊದಲೇ ಗೊತ್ತಿದ್ದರೆ ಬರುತ್ತಲೇ ಇರಲಿಲ್ಲ ಎಂದು ಮಾಧ್ಯಮಗಳ ಎದುರು ಗೋಳು ತೋಡಿಕೊಂಡಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್‌ ಕೂಡ ಬುಧವಾರ ರಾಂಚಿಯ ರಿಮ್ಸ್‌ನಲ್ಲಿರುವ ತನ್ನ ತಂದೆಯನ್ನು ನೋಡಿ ಹೋಗಿದ್ದಾರೆ. ಅವರಿಗಿಲ್ಲದ ಕ್ವಾರಂಟೈನ್ ನನಗೆ ಏಕೆ? ಇಲ್ಲಿ ರಾಜಕೀಯ ನಡೆಯುತ್ತಿದೆ. ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...