Homeಕರ್ನಾಟಕ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

- Advertisement -
- Advertisement -

ಬುಧವಾರವಷ್ಟೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಹೆಚ್ಚಾಗಿದೆ. ದೇಶದಾದ್ಯಂತ ಈ ಬಗ್ಗೆ ಆಕ್ರೋಶ ಹೆಚ್ಚಾಗಿದೆ. ಆದರೆ ಬಿಜೆಪಿ ನಾಯಕರು ತಮ್ಮ ಉಡಾಫೆ ನಡೆಯನ್ನು ಇನ್ನು ಬಿಟ್ಟಕೊಟ್ಟಿಲ್ಲ. ವಾಡಿಕೆಯಂತೆ ಬೆಲೆ ಏರಿಕೆಗೂ ಕಾಂಗ್ರೆಸ್‌ನತ್ತ ಕೈತೋರಿಸುತ್ತಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿ ಸಂಸದ ಸಂಗಣ್ಣ ಕರಡಿ, “ನಿಮ್ಮಪ್ಪ ಸಾಲ ಮಾಡಿದರೆ ಮಗನಾಗಿ ನೀನು ಸಾಲ ತೀರಿಸುವುದಿಲ್ಲವೆ, ಹಾಗೆಯೆ ನಾವು ಕೂಡಾ ಸಾಲ ತೀರಿಸಲೇ ಬೇಕಲ್ಲ” ಎಂದು ಉಡಾಫೆಯಿಂದ ಮಾತನಾಡಿದ್ದಾರೆ.

“ಕಾಂಗ್ರೆಸ್‌ ಸಾಲ ಮಾಡಿದ್ದು ಈಗ ನಾವು ಅನಿವಾರ್ಯವಾಗಿ ಸಾಲ ಬಗೆಹರಿಸಬೇಕಿದೆ’’ ಎಂದು ಅವರು ಪತ್ರಕರ್ತರಿಗೆ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಸಂಪನ್ಮೂಲವಿಲ್ಲ. ದೇಶವನ್ನು ಮುನ್ನಡೆಸುವ ದೃಷ್ಟಿಯಿಂದ ಬೆಲೆ ಏರಿಕೆ ಅನಿವಾರ್ಯ. ಆದರೂ ಒಕ್ಕೂಟ ಸರಕಾರ ಬಡವರ ಪರವಾದ ಯಾವುದೇ ಯೋಜನೆ ಮತ್ತು ಕಾರ್ಯಕ್ರಮಗಳನ್ನು ನಿಲ್ಲಿಸಿಲ್ಲ ಎಂದು ಸಂಗಣ್ಣ ಕರಡಿ ತಿಳಿಸಿದ್ದಾರೆ.

ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಹೆಚ್ಚಳ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೊಳಗಾಗಿರುವ ಜನಸಾಮಾನ್ಯರಿಗೆ ಮೋದಿ ಸರ್ಕಾರ ಮತ್ತೊಮ್ಮೆ ಹೊಡೆತ ನೀಡಿದೆ. ಆಗಸ್ಟ್‌ 1 ರಂದು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಆಗಸ್ಟ್‌ 17ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25ರೂ ಏರಿಕೆ ಮಾಡಲಾಗಿತ್ತು. ಅದಾದ ನಂತರ ಈಗ ಸೆಪ್ಟೆಂಬರ್‌ 1ರಿಂದ ಜಾರಿಗೆ ಬರುವಂತೆ ಮತ್ತೆ 25 ರೂ ಹೆಚ್ಚಿಸಲಾಗಿದೆ.

ಬೆಂಗಳೂರಿನಲ್ಲಿ 14.2 ಕೆ.ಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗೆ 862 ರೂ ನೀಡಲಾಗುತ್ತಿತ್ತು. ಇನ್ನು ಮುಂದೆ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 887ರೂ ಬೆಲೆ ತೆರಬೇಕಾಗಿದೆ. ಹದಿನೈದು ದಿನಗಳ ಅಂತದಲ್ಲಿ 50 ರೂ ಏರಿಕೆಯಾಗಿರುವುದು ಜನಸಾಮಾನ್ಯರ ಹೊರೆ ಹೆಚ್ಚಿಸಿದೆ. 2021ರ ಜನವರಿಯಿಂದ ಸೆಪ್ಟೆಂಬರ್‌ 1ರವರೆಗೆ ಅಡುಗೆ ಸಿಲಿಂಡರ್‌ ಬೆಲೆ ಒಟ್ಟು 190 ರೂ ಹೆಚ್ಚಳವಾಗಿದೆ.

ಸಿಲಿಂಡರ್‌, ಅಡುಗೆ ಎಣ್ಣೆ, ದಿನಸಿ, ಪೆಟ್ರೋಲ್‌, ವಿದ್ಯುತ್‌… ಹೀಗೆ ದಿನನಿತ್ಯದ ಬದುಕಿನ ಅಗತ್ಯಗಳ ಬೆಲೆ ಏರಿಕೆಯಿಂದಾಗಿ ಜನರು ಹೈರಾಣರಾಗಿದ್ದಾರೆ. ಒಂದು ಕಡೆ ಕೋವಿಡ್‌ನಿಂದಾಗಿ ಸರಿಯಾಗಿ ಸಂಬಳ, ದಿನಗೂಲಿ ಇಲ್ಲದೇ ಮನೆಯಲ್ಲಿ ಇದ್ದದ್ದರಲ್ಲೇ ಒಂದೊತ್ತಿನ ಹೊಟ್ಟೆ ತುಂಬಿಸಿಕೊಂಡಿದ್ದ ಜನರ ಬದುಕಲ್ಲಂತೂ ಈ ಬೆಲೆ ಏರಿಕೆ ಸಾವು ನೋವಿನ ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...