Homeಮುಖಪುಟಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ: ಡೈವರ್ಸ್‌ಗೆ ಮುಂದಾದ ಸಂಸದ!

ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ: ಡೈವರ್ಸ್‌ಗೆ ಮುಂದಾದ ಸಂಸದ!

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ಶಾಕ್ ನೀಡಿದ್ದ ಸುಜಾತಾ ಮೊಂಡಾಲ್ ಖಾನ್‌ಗೆ ಪತಿ ವಿಚ್ಚೇದನ ನೀಡಿ ಶಾಕ್ ನೀಡಲು ಹೊರಟಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರುತ್ತಲೇ ಇದೆ. ಆ ಪಕ್ಷದಿಂದ ಈ ಪಕ್ಷಕ್ಕೆ ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಹೀಗಾಗಿಯೇ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಟಿಎಂಸಿಗೆ ಸೇರ್ಪಡೆಯಾಗಿದ್ದರು. ಈಗ ಸಂಸದ ಸೌಮಿತ್ರಾ ಖಾನ್ ಪತ್ನಿಗೆ ಡೈವರ್ಸ್ ನಿಡಲು ಮುಂದಾಗಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ಶಾಕ್ ನೀಡಿದ್ದ ಸುಜಾತಾ ಮೊಂಡಾಲ್ ಖಾನ್‌ಗೆ ಪತಿ ವಿಚ್ಚೇದನ ನೀಡಿ ಶಾಕ್ ನೀಡಲು ಹೊರಟಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆ ನಡೆಯುತ್ತಿರುವ ರಾಜಕೀಯ ನಾಯಕರುಗಳ ಜಗಳದಿಂದಾಗಿ ಒಂದು ಮದುವೆ ಮುರಿದುಬೀಳುವ ಹಂತಕ್ಕೆ ಬಂದಿದೆ. ರಾಜಕೀಯ ನಮ್ಮ ಮದುವೆಯನ್ನು ಕೊನೆಗೊಳಿಸಿದೆ ಎಂದು ಸಂಸದ ಸೌಮಿತ್ರಾ ಖಾನ್ ಕಣ್ಣೀರಿಟ್ಟು ಹೇಳಿದ್ದಾರೆ

ಇದನ್ನೂ ಓದಿ: ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

“ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ಸುಜಾತಾ ಮೊಂಡಾಲ್ ತಿಳಿಸಿದ್ದರು.

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಒಟ್ಟಾರೆ, ಪಕ್ಷಗಳ ಜಗಳಕ್ಕೆ, ರಾಜಕೀಯಕ್ಕೆ ಕುಟುಂಬವೊಂದು ಬಿರುಕು ಬಿಡುವ ಸಂದರ್ಭ ಬಂದಿದೆ. ರಾಜಕೀಯ ಎಂಬುದು ಮನೆಯೊಳಗೆ ಬಂದರೆ ಇಂತಹ ಘಟನೆಗಳು ನಡೆಯುತ್ತವೆ. ರಾಜಕೀಯವನ್ನು ಮನೆ, ಕುಟುಂಬಗಳಿಂದ ಹೊರಗಿಟ್ಟರೆ ಎಷ್ಟೋ ಮದುವೆಗಳು, ಸಂಸಾರಗಳು ಉಳಿಯಬಹುದು.

ಇತ್ತ, ಪಶ್ಚಿಮ ಬಂಗಾಳದ ದುರ್ಗಾಪುರ ರ್‍ಯಾಲಿಯಲ್ಲಿ ಬಿಜೆಪಿಯ ಹೊಸ ಕಾರ್ಯಕರ್ತರು ಮತ್ತು ಹಳೇ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಪಕ್ಷದ ರಾಜ್ಯದ್ಯಕ್ಷ ದಿಲೀಪ್‌ ಘೋಷ್‌ ಮತ್ತು ಪಕ್ಷದ ನಾಯಕ ಅರ್ಜುನ್‌ ಸಿಂಗ್‌ ಜೊತೆಗೆ ಯಾರು ವೇದಿಕೆ ಹಂಚಿಕೊಳ್ಳಬೇಕು ಎಂಬ ವಿಚಾರಕ್ಕೆ ಪರಸ್ಪರ ಕುರ್ಚಿಗಳು ಮತ್ತು ಕೋಲುಗಳಿಂದ ಬಡಿದಾಡಿಕೊಂಡಿದ್ದಾರೆ.


ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...