Homeಮುಖಪುಟದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

- Advertisement -
- Advertisement -

ಜಾರ್ಖಂಡ್‌ನ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ದೇವಸ್ಥಾನವೊಂದರಲ್ಲಿ ಪೂಜೆ ನಡೆಸುವ ಮೂಲಕ ಹಿಂದೂ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.

ದಿಯೋಘರ್‌ನ ಬಾಬಾ ಬೈದ್ಯನಾಥ ಧಾಮ್ ದೇವಸ್ಥಾನದಲ್ಲಿ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಪೂಜೆ ನಡೆಸಿದ್ದರು. ಇದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ನಿಶಿಕಾಂತ್ ದುಬೆ  ಬೆದರಿಕೆ ಹಾಕಿದ್ದಾರೆ.

ಅನ್ಸಾರಿ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕಾಯ್ದೆ ಪ್ರಕಾರ ಒಂದು ವರ್ಷದವರೆಗೆ ವಿಚಾರಣೆಯಿಲ್ಲದೆ ಬಂಧನದಲ್ಲಿ ಇಡಬಹುದು.

ಇರ್ಫಾನ್ ಅನ್ಸಾರಿ ಮೊದಲು ಹಿಂದೂ ಧರ್ಮವನ್ನು ಅಳವಡಿಸಿಕೊಳ್ಳಲಿ, ನಿಜವಾಗಿಯೂ ಅವರು ಶಿವನ ಭಕ್ತನಾಗಿದ್ದರೆ ನಂತರ ಪೂಜೆ ನಡೆಸಲಿ ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

“ಬಾಬಾ ಬೈದ್ಯನಾಥ ಧಾಮ್ ದೇವಾಲಯದ ಗರ್ಭಗುಡಿಯಲ್ಲಿ ಮುಸ್ಲಿಮರಿಗೆ ಪ್ರವೇಶಿಸಲು ಅಥವಾ ಪೂಜೆ ನಡೆಸಲು ಅನುಮತಿ ಇಲ್ಲ. ಮಕ್ಕಾನಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ? ಇಲ್ಲ. ಹಾಗಾಗಿ ಬೈದ್ಯನಾಥ ಧಾಮ್ ದೇವಾಲಯದಲ್ಲೂ ಮುಸ್ಲಿಮರಿಗೆ ಪೂಜೆ ಸಲ್ಲಿಸಲು ಅನುಮತಿಯಿಲ್ಲ” ಎಂದು ದುಬೆ ಹೇಳಿದ್ದಾರೆ.

’ಇದು ರಾಜಕೀಯ ವಿಷಯವಲ್ಲ ಆದರೆ, ಧಾರ್ಮಿಕ ನಂಬಿಕೆಗೆ ಸಂಬಂಧಿಸಿದೆ. ಇರ್ಫಾನ್ ಅನ್ಸಾರಿ ಉದ್ದೇಶಪೂರ್ವಕವಾಗಿ ಕೋಟಿಗಟ್ಟಲೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

“ನಾನು ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಸಂಬಂಧಪಟ್ಟ ವ್ಯಕ್ತಿಗೆ ಕಳುಹಿಸಿದ್ದೇನೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ, ಆದರೆ, ಅನ್ಸಾರಿ ಧಾರ್ಮಿಕ ಮನೋಭಾವವನ್ನು ಕೆರಳಿಸಲು ಪ್ರಯತ್ನಿಸಿದ್ದಾರೆ. ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾನು ನ್ಯಾಯ ಕೋರಿ ನ್ಯಾಯಾಲಯಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ದುಬೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅನ್ಸಾರಿ, ’ಉಪಚುನಾವಣೆಗೆ ಮುಂಚಿತವಾಗಿ ನಿಶಿಕಾಂತ್ ದುಬೆ ಅನಗತ್ಯವಾಗಿ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ. ಬಾಬಾ ನಾಗ್ರಿ ನನ್ನ ಜನ್ಮಸ್ಥಳ. ನಾನು ಬಾಬಾ ಬೈದ್ಯನಾಥ್ ಧಾಮ್ ದೇವಸ್ಥಾನಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದೇನೆ”. ಎಂದಿದ್ದಾರೆ.

ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಮತ್ತೆ ಇಲ್ಲಿಯೇ ಪೂಜೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನನ್ನನ್ನು ಯಾರು ತಡೆಯುತ್ತಾರೆಂದು ನಾನು ನೋಡುತ್ತೇನೆ. ಶಿವ ಯಾರೊಬ್ಬರ ವೈಯಕ್ತಿಕ ಆಸ್ತಿಯಲ್ಲ. ಶಿವನ ಮೇಲೆ ನನಗೆ ನಂಬಿಕೆಯಿದೆ” ಎಂದು ಸವಾಲು ಹಾಕಿದ್ದಾರೆ.

ಸಚಿವ ಹಾಜಿ ಹುಸೇನ್ ಅನ್ಸಾರಿ ಅವರ ನಿಧನದ ನಂತರ ಮಧುಪುರ ಸ್ಥಾನ ಖಾಲಿ ಬಿದ್ದಿದೆ. ಆ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ತಮ್ಮ ಅಪ್ಪನ ಮನೆ ಆಸ್ತಿ ಅನ್ನು ತರಹ ಉಪಯೋಗಿಸುವ ಈ ದುರ್ಮಾಗಿಗಳ ವಿರುದ್ಧ ಮೊದಲು ಕ್ರಮ ತೆಗೆದುಕೊಳ್ಳಬೇಕು. ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ತಾನು ನೀಡಿದ ಹೇಳಿದ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಕೇಳಬೇಕು. ಹಿಂದೂ ಧರ್ಮ ಒಂದು ನೀಚ ಧರ್ಮವೆಂದು ಸಾರಿದಕ್ಕೂ ಕ್ಷಮೆಯಾಚಿಸಬೇಕು.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...