Homeಮುಖಪುಟದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

- Advertisement -
- Advertisement -

ಜಾರ್ಖಂಡ್‌ನ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ದೇವಸ್ಥಾನವೊಂದರಲ್ಲಿ ಪೂಜೆ ನಡೆಸುವ ಮೂಲಕ ಹಿಂದೂ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.

ದಿಯೋಘರ್‌ನ ಬಾಬಾ ಬೈದ್ಯನಾಥ ಧಾಮ್ ದೇವಸ್ಥಾನದಲ್ಲಿ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಪೂಜೆ ನಡೆಸಿದ್ದರು. ಇದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ನಿಶಿಕಾಂತ್ ದುಬೆ  ಬೆದರಿಕೆ ಹಾಕಿದ್ದಾರೆ.

ಅನ್ಸಾರಿ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕಾಯ್ದೆ ಪ್ರಕಾರ ಒಂದು ವರ್ಷದವರೆಗೆ ವಿಚಾರಣೆಯಿಲ್ಲದೆ ಬಂಧನದಲ್ಲಿ ಇಡಬಹುದು.

ಇರ್ಫಾನ್ ಅನ್ಸಾರಿ ಮೊದಲು ಹಿಂದೂ ಧರ್ಮವನ್ನು ಅಳವಡಿಸಿಕೊಳ್ಳಲಿ, ನಿಜವಾಗಿಯೂ ಅವರು ಶಿವನ ಭಕ್ತನಾಗಿದ್ದರೆ ನಂತರ ಪೂಜೆ ನಡೆಸಲಿ ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

“ಬಾಬಾ ಬೈದ್ಯನಾಥ ಧಾಮ್ ದೇವಾಲಯದ ಗರ್ಭಗುಡಿಯಲ್ಲಿ ಮುಸ್ಲಿಮರಿಗೆ ಪ್ರವೇಶಿಸಲು ಅಥವಾ ಪೂಜೆ ನಡೆಸಲು ಅನುಮತಿ ಇಲ್ಲ. ಮಕ್ಕಾನಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ? ಇಲ್ಲ. ಹಾಗಾಗಿ ಬೈದ್ಯನಾಥ ಧಾಮ್ ದೇವಾಲಯದಲ್ಲೂ ಮುಸ್ಲಿಮರಿಗೆ ಪೂಜೆ ಸಲ್ಲಿಸಲು ಅನುಮತಿಯಿಲ್ಲ” ಎಂದು ದುಬೆ ಹೇಳಿದ್ದಾರೆ.

’ಇದು ರಾಜಕೀಯ ವಿಷಯವಲ್ಲ ಆದರೆ, ಧಾರ್ಮಿಕ ನಂಬಿಕೆಗೆ ಸಂಬಂಧಿಸಿದೆ. ಇರ್ಫಾನ್ ಅನ್ಸಾರಿ ಉದ್ದೇಶಪೂರ್ವಕವಾಗಿ ಕೋಟಿಗಟ್ಟಲೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

“ನಾನು ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಸಂಬಂಧಪಟ್ಟ ವ್ಯಕ್ತಿಗೆ ಕಳುಹಿಸಿದ್ದೇನೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ, ಆದರೆ, ಅನ್ಸಾರಿ ಧಾರ್ಮಿಕ ಮನೋಭಾವವನ್ನು ಕೆರಳಿಸಲು ಪ್ರಯತ್ನಿಸಿದ್ದಾರೆ. ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾನು ನ್ಯಾಯ ಕೋರಿ ನ್ಯಾಯಾಲಯಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ದುಬೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅನ್ಸಾರಿ, ’ಉಪಚುನಾವಣೆಗೆ ಮುಂಚಿತವಾಗಿ ನಿಶಿಕಾಂತ್ ದುಬೆ ಅನಗತ್ಯವಾಗಿ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ. ಬಾಬಾ ನಾಗ್ರಿ ನನ್ನ ಜನ್ಮಸ್ಥಳ. ನಾನು ಬಾಬಾ ಬೈದ್ಯನಾಥ್ ಧಾಮ್ ದೇವಸ್ಥಾನಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದೇನೆ”. ಎಂದಿದ್ದಾರೆ.

ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಮತ್ತೆ ಇಲ್ಲಿಯೇ ಪೂಜೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನನ್ನನ್ನು ಯಾರು ತಡೆಯುತ್ತಾರೆಂದು ನಾನು ನೋಡುತ್ತೇನೆ. ಶಿವ ಯಾರೊಬ್ಬರ ವೈಯಕ್ತಿಕ ಆಸ್ತಿಯಲ್ಲ. ಶಿವನ ಮೇಲೆ ನನಗೆ ನಂಬಿಕೆಯಿದೆ” ಎಂದು ಸವಾಲು ಹಾಕಿದ್ದಾರೆ.

ಸಚಿವ ಹಾಜಿ ಹುಸೇನ್ ಅನ್ಸಾರಿ ಅವರ ನಿಧನದ ನಂತರ ಮಧುಪುರ ಸ್ಥಾನ ಖಾಲಿ ಬಿದ್ದಿದೆ. ಆ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ತಮ್ಮ ಅಪ್ಪನ ಮನೆ ಆಸ್ತಿ ಅನ್ನು ತರಹ ಉಪಯೋಗಿಸುವ ಈ ದುರ್ಮಾಗಿಗಳ ವಿರುದ್ಧ ಮೊದಲು ಕ್ರಮ ತೆಗೆದುಕೊಳ್ಳಬೇಕು. ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ತಾನು ನೀಡಿದ ಹೇಳಿದ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಕೇಳಬೇಕು. ಹಿಂದೂ ಧರ್ಮ ಒಂದು ನೀಚ ಧರ್ಮವೆಂದು ಸಾರಿದಕ್ಕೂ ಕ್ಷಮೆಯಾಚಿಸಬೇಕು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...