Homeಮುಖಪುಟದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

- Advertisement -
- Advertisement -

ಜಾರ್ಖಂಡ್‌ನ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ದೇವಸ್ಥಾನವೊಂದರಲ್ಲಿ ಪೂಜೆ ನಡೆಸುವ ಮೂಲಕ ಹಿಂದೂ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.

ದಿಯೋಘರ್‌ನ ಬಾಬಾ ಬೈದ್ಯನಾಥ ಧಾಮ್ ದೇವಸ್ಥಾನದಲ್ಲಿ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಪೂಜೆ ನಡೆಸಿದ್ದರು. ಇದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ನಿಶಿಕಾಂತ್ ದುಬೆ  ಬೆದರಿಕೆ ಹಾಕಿದ್ದಾರೆ.

ಅನ್ಸಾರಿ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕಾಯ್ದೆ ಪ್ರಕಾರ ಒಂದು ವರ್ಷದವರೆಗೆ ವಿಚಾರಣೆಯಿಲ್ಲದೆ ಬಂಧನದಲ್ಲಿ ಇಡಬಹುದು.

ಇರ್ಫಾನ್ ಅನ್ಸಾರಿ ಮೊದಲು ಹಿಂದೂ ಧರ್ಮವನ್ನು ಅಳವಡಿಸಿಕೊಳ್ಳಲಿ, ನಿಜವಾಗಿಯೂ ಅವರು ಶಿವನ ಭಕ್ತನಾಗಿದ್ದರೆ ನಂತರ ಪೂಜೆ ನಡೆಸಲಿ ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

“ಬಾಬಾ ಬೈದ್ಯನಾಥ ಧಾಮ್ ದೇವಾಲಯದ ಗರ್ಭಗುಡಿಯಲ್ಲಿ ಮುಸ್ಲಿಮರಿಗೆ ಪ್ರವೇಶಿಸಲು ಅಥವಾ ಪೂಜೆ ನಡೆಸಲು ಅನುಮತಿ ಇಲ್ಲ. ಮಕ್ಕಾನಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ? ಇಲ್ಲ. ಹಾಗಾಗಿ ಬೈದ್ಯನಾಥ ಧಾಮ್ ದೇವಾಲಯದಲ್ಲೂ ಮುಸ್ಲಿಮರಿಗೆ ಪೂಜೆ ಸಲ್ಲಿಸಲು ಅನುಮತಿಯಿಲ್ಲ” ಎಂದು ದುಬೆ ಹೇಳಿದ್ದಾರೆ.

’ಇದು ರಾಜಕೀಯ ವಿಷಯವಲ್ಲ ಆದರೆ, ಧಾರ್ಮಿಕ ನಂಬಿಕೆಗೆ ಸಂಬಂಧಿಸಿದೆ. ಇರ್ಫಾನ್ ಅನ್ಸಾರಿ ಉದ್ದೇಶಪೂರ್ವಕವಾಗಿ ಕೋಟಿಗಟ್ಟಲೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

“ನಾನು ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಸಂಬಂಧಪಟ್ಟ ವ್ಯಕ್ತಿಗೆ ಕಳುಹಿಸಿದ್ದೇನೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ, ಆದರೆ, ಅನ್ಸಾರಿ ಧಾರ್ಮಿಕ ಮನೋಭಾವವನ್ನು ಕೆರಳಿಸಲು ಪ್ರಯತ್ನಿಸಿದ್ದಾರೆ. ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾನು ನ್ಯಾಯ ಕೋರಿ ನ್ಯಾಯಾಲಯಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ದುಬೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅನ್ಸಾರಿ, ’ಉಪಚುನಾವಣೆಗೆ ಮುಂಚಿತವಾಗಿ ನಿಶಿಕಾಂತ್ ದುಬೆ ಅನಗತ್ಯವಾಗಿ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ. ಬಾಬಾ ನಾಗ್ರಿ ನನ್ನ ಜನ್ಮಸ್ಥಳ. ನಾನು ಬಾಬಾ ಬೈದ್ಯನಾಥ್ ಧಾಮ್ ದೇವಸ್ಥಾನಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದೇನೆ”. ಎಂದಿದ್ದಾರೆ.

ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಮತ್ತೆ ಇಲ್ಲಿಯೇ ಪೂಜೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನನ್ನನ್ನು ಯಾರು ತಡೆಯುತ್ತಾರೆಂದು ನಾನು ನೋಡುತ್ತೇನೆ. ಶಿವ ಯಾರೊಬ್ಬರ ವೈಯಕ್ತಿಕ ಆಸ್ತಿಯಲ್ಲ. ಶಿವನ ಮೇಲೆ ನನಗೆ ನಂಬಿಕೆಯಿದೆ” ಎಂದು ಸವಾಲು ಹಾಕಿದ್ದಾರೆ.

ಸಚಿವ ಹಾಜಿ ಹುಸೇನ್ ಅನ್ಸಾರಿ ಅವರ ನಿಧನದ ನಂತರ ಮಧುಪುರ ಸ್ಥಾನ ಖಾಲಿ ಬಿದ್ದಿದೆ. ಆ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ತಮ್ಮ ಅಪ್ಪನ ಮನೆ ಆಸ್ತಿ ಅನ್ನು ತರಹ ಉಪಯೋಗಿಸುವ ಈ ದುರ್ಮಾಗಿಗಳ ವಿರುದ್ಧ ಮೊದಲು ಕ್ರಮ ತೆಗೆದುಕೊಳ್ಳಬೇಕು. ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ತಾನು ನೀಡಿದ ಹೇಳಿದ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಕೇಳಬೇಕು. ಹಿಂದೂ ಧರ್ಮ ಒಂದು ನೀಚ ಧರ್ಮವೆಂದು ಸಾರಿದಕ್ಕೂ ಕ್ಷಮೆಯಾಚಿಸಬೇಕು.

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...