Homeಮುಖಪುಟಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

- Advertisement -
- Advertisement -

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಬ್ರಿಜ್ ಭೂಷಣ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಕೂಡಾ ಆಗಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಒಂದು ವೇಳೆ ನಿಜವಾಗಿಯೂ ಅಂತಹ ಘಟನೆ ನಡೆದಿದ್ದರೆ, ತಾನು ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. 2021 ರಲ್ಲಿ, ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ರಿಜ್ ಭೂಷಣ್ ಅವರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುವ ವಿಡಿಯೊ ಹೊರಹೊಮ್ಮಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಒಕ್ಕೂಟದ ಅಧ್ಯಕ್ಷರು ‘ಸರ್ವಾಧಿಕಾರ’ ನಡೆಸುತ್ತಿದ್ದು, ಕುಸ್ತಿಪಟುಗಳ ಮೇಲಿನ ದೌರ್ಜನ್ಯವು ವರ್ಷಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸುಮಾರು 30 ಮಂದಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅದರಲ್ಲಿ ಪ್ರಮುಖವಾಗಿ ಸರಿತಾ ಮೋರ್, ಸಂಗೀತಾ ಫೋಗಟ್, ಸತ್ಯವರ್ತ್ ಮಲಿಕ್, ಜಿತೇಂದರ್ ಕಿನ್ಹಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಸುಮಿತ್ ಮಲಿಕ್ ಕೂಡ ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಮಹಿಳಾ ಕುಸ್ತಿಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತುದಾರರಿಂದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಹಲವು ಹುಡುಗಿಯರ ಲೈಂಗಿಕ ಕಿರುಕುಳದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ.

ಫೆಡರೇಶನ್‌ನ ‘ಮೆಚ್ಚಿನವರು’ ಎಂದು ಪರಿಗಣಿಸುವ ಕೆಲವು ತರಬೇತುದಾರರು ಮಹಿಳಾ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ.

“ಇಂದು ನಾನು ಇದನ್ನು ಹೇಳಿದ್ದೇನೆ, ನಾಳೆ ನಾನು ಜೀವಂತವಾಗಿರುತ್ತೇನೆ ಎಂದು ನನಗೆ ತಿಳಿದಿಲ್ಲ. ಡಬ್ಲ್ಯುಎಫ್‌ಐನಲ್ಲಿರುವ ಜನರು ತುಂಬಾ ಶಕ್ತಿಶಾಲಿಗಳು” ಎಂದು ವಿನೇಶ್ ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಹರಿಯಾಣದವರಾದ ವಿನೇಶ್‌ ಫೋಗಟ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟುವಾಗಿದ್ದಾರೆ. ಅವರು ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಚಿನ್ನಗಳನ್ನು ಗೆದ್ದಿದ್ದಾರೆ. ವಿನೇಶ್ ಅವರ ಸೋದರಸಂಬಂಧಿ, ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅವರು 2020 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು.

ಒಂದು ದಶಕದಿಂದ ನನ್ನ ಸಮಸ್ಯೆಗಳನ್ನು ಆಲಿಸಲು ಫೆಡರೇಶನ್‌ ಜೊತೆಗೆ ಪ್ರಯತ್ನಿಸುತ್ತಿದ್ದೇನೆ ಎಂದು ವಿನೇಶ್ ಹೇಳಿದ್ದಾರೆ. ತಾನು ಮತ್ತು ಇತರ ಕುಸ್ತಿಪಟುಗಳು ಪ್ರಧಾನ ಮಂತ್ರಿ ಮತ್ತು ಅದನ್ನು ಕೇಳಬಹುದಾದ ಯಾವುದೇ ಹೈಕೋರ್ಟ್‌ಗೆ “ಸಾಕ್ಷ್ಯವನ್ನು ಸಲ್ಲಿಸಲು” ಸಿದ್ಧ ಎಂದು ಅವರು ANI ಗೆ ತಿಳಿಸಿದ್ದಾರೆ.

“ಇದು ನ್ಯಾಯೋಚಿತವಲ್ಲ ಮತ್ತು ನಾವು ಇದನ್ನು ಮೌನವಾಗಿ ಸಹಿಸಿಕೊಳ್ಳುತ್ತಿದ್ದೇವೆ. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಭಾರತೀಯ ಕುಸ್ತಿ ಒಕ್ಕೂಟದಿಂದ ಕುಸ್ತಿಪಟುಗಳಿಗೆ ಕಿರುಕುಳ ನೀಡಲಾಗುತ್ತಿದೆ. ಡಬ್ಲ್ಯುಎಫ್‌ಐನ ಭಾಗವಾಗಿರುವವರಿಗೆ ಕ್ರೀಡೆಯ ಬಗ್ಗೆ ಏನೂ ತಿಳಿದಿಲ್ಲ” ಎಂದು ಒಲಿಂಪಿಕ್‌ನಲ್ಲಿ ಕಂಚು ಗೆದ್ದಿರುವ ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕೂಡಾ, “ವಿವರಗಳನ್ನು ಬಹಿರಂಗಪಡಿಸಲು ಹಾಗೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಮಾತನಾಡಲು ಸಿದ್ಧರಾಗಿದ್ದೇವೆ. ಹೊಸ ಕುಸ್ತಿಪಟುಗಳ ಭವಿಷ್ಯವು ಸುರಕ್ಷಿತವಾಗಿರಲು ಇಡೀ ಒಕ್ಕೂಟವನ್ನು ರದ್ದು ಮಾಡಬೇಕು. ಹೊಸ ಒಕ್ಕೂಟ ಅಸ್ತಿತ್ವಕ್ಕೆ ಬರಬೇಕು” ಎಂದು ಹೇಳಿದ್ದಾರೆ.

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ ಬ್ರಿಜ್‌‌ಭೂಷಣ್‌, “ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಕಂಪನಿಯ ಲೋಗೋ ಇರುವ ಬಟ್ಟೆಯನ್ನು ಏಕೆ ಧರಿಸಿದ್ದರು. ಫೆಡರೇಶನ್ ಯಾವುದಾರೂ ಕ್ರೀಡಾಪಟುವಿಗೆ ಕಿರುಕುಳ ನೀಡಿದೆ ಎಂದು ಹೇಳುವ ಯಾರಾದರೂ ಇದ್ದಾರೆಯೇ?. ಲೈಂಗಿಕ ಕಿರುಕುಳದ ಯಾವುದೇ ಘಟನೆ ನಡೆದಿಲ್ಲ. ಒಂದು ವೇಳೆ ಅಂತಹ ಘಟನೆ ಸಂಭವಿಸಿದಲ್ಲಿ ತಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...