Homeಮುಖಪುಟಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

- Advertisement -
- Advertisement -

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಬ್ರಿಜ್ ಭೂಷಣ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಕೂಡಾ ಆಗಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಒಂದು ವೇಳೆ ನಿಜವಾಗಿಯೂ ಅಂತಹ ಘಟನೆ ನಡೆದಿದ್ದರೆ, ತಾನು ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. 2021 ರಲ್ಲಿ, ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ರಿಜ್ ಭೂಷಣ್ ಅವರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುವ ವಿಡಿಯೊ ಹೊರಹೊಮ್ಮಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಒಕ್ಕೂಟದ ಅಧ್ಯಕ್ಷರು ‘ಸರ್ವಾಧಿಕಾರ’ ನಡೆಸುತ್ತಿದ್ದು, ಕುಸ್ತಿಪಟುಗಳ ಮೇಲಿನ ದೌರ್ಜನ್ಯವು ವರ್ಷಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸುಮಾರು 30 ಮಂದಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅದರಲ್ಲಿ ಪ್ರಮುಖವಾಗಿ ಸರಿತಾ ಮೋರ್, ಸಂಗೀತಾ ಫೋಗಟ್, ಸತ್ಯವರ್ತ್ ಮಲಿಕ್, ಜಿತೇಂದರ್ ಕಿನ್ಹಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಸುಮಿತ್ ಮಲಿಕ್ ಕೂಡ ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಮಹಿಳಾ ಕುಸ್ತಿಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತುದಾರರಿಂದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಹಲವು ಹುಡುಗಿಯರ ಲೈಂಗಿಕ ಕಿರುಕುಳದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ.

ಫೆಡರೇಶನ್‌ನ ‘ಮೆಚ್ಚಿನವರು’ ಎಂದು ಪರಿಗಣಿಸುವ ಕೆಲವು ತರಬೇತುದಾರರು ಮಹಿಳಾ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ.

“ಇಂದು ನಾನು ಇದನ್ನು ಹೇಳಿದ್ದೇನೆ, ನಾಳೆ ನಾನು ಜೀವಂತವಾಗಿರುತ್ತೇನೆ ಎಂದು ನನಗೆ ತಿಳಿದಿಲ್ಲ. ಡಬ್ಲ್ಯುಎಫ್‌ಐನಲ್ಲಿರುವ ಜನರು ತುಂಬಾ ಶಕ್ತಿಶಾಲಿಗಳು” ಎಂದು ವಿನೇಶ್ ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಹರಿಯಾಣದವರಾದ ವಿನೇಶ್‌ ಫೋಗಟ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟುವಾಗಿದ್ದಾರೆ. ಅವರು ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಚಿನ್ನಗಳನ್ನು ಗೆದ್ದಿದ್ದಾರೆ. ವಿನೇಶ್ ಅವರ ಸೋದರಸಂಬಂಧಿ, ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅವರು 2020 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು.

ಒಂದು ದಶಕದಿಂದ ನನ್ನ ಸಮಸ್ಯೆಗಳನ್ನು ಆಲಿಸಲು ಫೆಡರೇಶನ್‌ ಜೊತೆಗೆ ಪ್ರಯತ್ನಿಸುತ್ತಿದ್ದೇನೆ ಎಂದು ವಿನೇಶ್ ಹೇಳಿದ್ದಾರೆ. ತಾನು ಮತ್ತು ಇತರ ಕುಸ್ತಿಪಟುಗಳು ಪ್ರಧಾನ ಮಂತ್ರಿ ಮತ್ತು ಅದನ್ನು ಕೇಳಬಹುದಾದ ಯಾವುದೇ ಹೈಕೋರ್ಟ್‌ಗೆ “ಸಾಕ್ಷ್ಯವನ್ನು ಸಲ್ಲಿಸಲು” ಸಿದ್ಧ ಎಂದು ಅವರು ANI ಗೆ ತಿಳಿಸಿದ್ದಾರೆ.

“ಇದು ನ್ಯಾಯೋಚಿತವಲ್ಲ ಮತ್ತು ನಾವು ಇದನ್ನು ಮೌನವಾಗಿ ಸಹಿಸಿಕೊಳ್ಳುತ್ತಿದ್ದೇವೆ. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಭಾರತೀಯ ಕುಸ್ತಿ ಒಕ್ಕೂಟದಿಂದ ಕುಸ್ತಿಪಟುಗಳಿಗೆ ಕಿರುಕುಳ ನೀಡಲಾಗುತ್ತಿದೆ. ಡಬ್ಲ್ಯುಎಫ್‌ಐನ ಭಾಗವಾಗಿರುವವರಿಗೆ ಕ್ರೀಡೆಯ ಬಗ್ಗೆ ಏನೂ ತಿಳಿದಿಲ್ಲ” ಎಂದು ಒಲಿಂಪಿಕ್‌ನಲ್ಲಿ ಕಂಚು ಗೆದ್ದಿರುವ ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕೂಡಾ, “ವಿವರಗಳನ್ನು ಬಹಿರಂಗಪಡಿಸಲು ಹಾಗೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಮಾತನಾಡಲು ಸಿದ್ಧರಾಗಿದ್ದೇವೆ. ಹೊಸ ಕುಸ್ತಿಪಟುಗಳ ಭವಿಷ್ಯವು ಸುರಕ್ಷಿತವಾಗಿರಲು ಇಡೀ ಒಕ್ಕೂಟವನ್ನು ರದ್ದು ಮಾಡಬೇಕು. ಹೊಸ ಒಕ್ಕೂಟ ಅಸ್ತಿತ್ವಕ್ಕೆ ಬರಬೇಕು” ಎಂದು ಹೇಳಿದ್ದಾರೆ.

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ ಬ್ರಿಜ್‌‌ಭೂಷಣ್‌, “ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಕಂಪನಿಯ ಲೋಗೋ ಇರುವ ಬಟ್ಟೆಯನ್ನು ಏಕೆ ಧರಿಸಿದ್ದರು. ಫೆಡರೇಶನ್ ಯಾವುದಾರೂ ಕ್ರೀಡಾಪಟುವಿಗೆ ಕಿರುಕುಳ ನೀಡಿದೆ ಎಂದು ಹೇಳುವ ಯಾರಾದರೂ ಇದ್ದಾರೆಯೇ?. ಲೈಂಗಿಕ ಕಿರುಕುಳದ ಯಾವುದೇ ಘಟನೆ ನಡೆದಿಲ್ಲ. ಒಂದು ವೇಳೆ ಅಂತಹ ಘಟನೆ ಸಂಭವಿಸಿದಲ್ಲಿ ತಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...