Homeಮುಖಪುಟಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

- Advertisement -
- Advertisement -

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಬ್ರಿಜ್ ಭೂಷಣ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಕೂಡಾ ಆಗಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಒಂದು ವೇಳೆ ನಿಜವಾಗಿಯೂ ಅಂತಹ ಘಟನೆ ನಡೆದಿದ್ದರೆ, ತಾನು ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. 2021 ರಲ್ಲಿ, ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ರಿಜ್ ಭೂಷಣ್ ಅವರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುವ ವಿಡಿಯೊ ಹೊರಹೊಮ್ಮಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಒಕ್ಕೂಟದ ಅಧ್ಯಕ್ಷರು ‘ಸರ್ವಾಧಿಕಾರ’ ನಡೆಸುತ್ತಿದ್ದು, ಕುಸ್ತಿಪಟುಗಳ ಮೇಲಿನ ದೌರ್ಜನ್ಯವು ವರ್ಷಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸುಮಾರು 30 ಮಂದಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅದರಲ್ಲಿ ಪ್ರಮುಖವಾಗಿ ಸರಿತಾ ಮೋರ್, ಸಂಗೀತಾ ಫೋಗಟ್, ಸತ್ಯವರ್ತ್ ಮಲಿಕ್, ಜಿತೇಂದರ್ ಕಿನ್ಹಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಸುಮಿತ್ ಮಲಿಕ್ ಕೂಡ ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಮಹಿಳಾ ಕುಸ್ತಿಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತುದಾರರಿಂದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಹಲವು ಹುಡುಗಿಯರ ಲೈಂಗಿಕ ಕಿರುಕುಳದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ.

ಫೆಡರೇಶನ್‌ನ ‘ಮೆಚ್ಚಿನವರು’ ಎಂದು ಪರಿಗಣಿಸುವ ಕೆಲವು ತರಬೇತುದಾರರು ಮಹಿಳಾ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ.

“ಇಂದು ನಾನು ಇದನ್ನು ಹೇಳಿದ್ದೇನೆ, ನಾಳೆ ನಾನು ಜೀವಂತವಾಗಿರುತ್ತೇನೆ ಎಂದು ನನಗೆ ತಿಳಿದಿಲ್ಲ. ಡಬ್ಲ್ಯುಎಫ್‌ಐನಲ್ಲಿರುವ ಜನರು ತುಂಬಾ ಶಕ್ತಿಶಾಲಿಗಳು” ಎಂದು ವಿನೇಶ್ ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಹರಿಯಾಣದವರಾದ ವಿನೇಶ್‌ ಫೋಗಟ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟುವಾಗಿದ್ದಾರೆ. ಅವರು ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಚಿನ್ನಗಳನ್ನು ಗೆದ್ದಿದ್ದಾರೆ. ವಿನೇಶ್ ಅವರ ಸೋದರಸಂಬಂಧಿ, ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅವರು 2020 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು.

ಒಂದು ದಶಕದಿಂದ ನನ್ನ ಸಮಸ್ಯೆಗಳನ್ನು ಆಲಿಸಲು ಫೆಡರೇಶನ್‌ ಜೊತೆಗೆ ಪ್ರಯತ್ನಿಸುತ್ತಿದ್ದೇನೆ ಎಂದು ವಿನೇಶ್ ಹೇಳಿದ್ದಾರೆ. ತಾನು ಮತ್ತು ಇತರ ಕುಸ್ತಿಪಟುಗಳು ಪ್ರಧಾನ ಮಂತ್ರಿ ಮತ್ತು ಅದನ್ನು ಕೇಳಬಹುದಾದ ಯಾವುದೇ ಹೈಕೋರ್ಟ್‌ಗೆ “ಸಾಕ್ಷ್ಯವನ್ನು ಸಲ್ಲಿಸಲು” ಸಿದ್ಧ ಎಂದು ಅವರು ANI ಗೆ ತಿಳಿಸಿದ್ದಾರೆ.

“ಇದು ನ್ಯಾಯೋಚಿತವಲ್ಲ ಮತ್ತು ನಾವು ಇದನ್ನು ಮೌನವಾಗಿ ಸಹಿಸಿಕೊಳ್ಳುತ್ತಿದ್ದೇವೆ. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಭಾರತೀಯ ಕುಸ್ತಿ ಒಕ್ಕೂಟದಿಂದ ಕುಸ್ತಿಪಟುಗಳಿಗೆ ಕಿರುಕುಳ ನೀಡಲಾಗುತ್ತಿದೆ. ಡಬ್ಲ್ಯುಎಫ್‌ಐನ ಭಾಗವಾಗಿರುವವರಿಗೆ ಕ್ರೀಡೆಯ ಬಗ್ಗೆ ಏನೂ ತಿಳಿದಿಲ್ಲ” ಎಂದು ಒಲಿಂಪಿಕ್‌ನಲ್ಲಿ ಕಂಚು ಗೆದ್ದಿರುವ ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕೂಡಾ, “ವಿವರಗಳನ್ನು ಬಹಿರಂಗಪಡಿಸಲು ಹಾಗೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಮಾತನಾಡಲು ಸಿದ್ಧರಾಗಿದ್ದೇವೆ. ಹೊಸ ಕುಸ್ತಿಪಟುಗಳ ಭವಿಷ್ಯವು ಸುರಕ್ಷಿತವಾಗಿರಲು ಇಡೀ ಒಕ್ಕೂಟವನ್ನು ರದ್ದು ಮಾಡಬೇಕು. ಹೊಸ ಒಕ್ಕೂಟ ಅಸ್ತಿತ್ವಕ್ಕೆ ಬರಬೇಕು” ಎಂದು ಹೇಳಿದ್ದಾರೆ.

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ ಬ್ರಿಜ್‌‌ಭೂಷಣ್‌, “ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಕಂಪನಿಯ ಲೋಗೋ ಇರುವ ಬಟ್ಟೆಯನ್ನು ಏಕೆ ಧರಿಸಿದ್ದರು. ಫೆಡರೇಶನ್ ಯಾವುದಾರೂ ಕ್ರೀಡಾಪಟುವಿಗೆ ಕಿರುಕುಳ ನೀಡಿದೆ ಎಂದು ಹೇಳುವ ಯಾರಾದರೂ ಇದ್ದಾರೆಯೇ?. ಲೈಂಗಿಕ ಕಿರುಕುಳದ ಯಾವುದೇ ಘಟನೆ ನಡೆದಿಲ್ಲ. ಒಂದು ವೇಳೆ ಅಂತಹ ಘಟನೆ ಸಂಭವಿಸಿದಲ್ಲಿ ತಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...