Homeಮುಖಪುಟಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

- Advertisement -
- Advertisement -

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಬ್ರಿಜ್ ಭೂಷಣ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಕೂಡಾ ಆಗಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಒಂದು ವೇಳೆ ನಿಜವಾಗಿಯೂ ಅಂತಹ ಘಟನೆ ನಡೆದಿದ್ದರೆ, ತಾನು ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. 2021 ರಲ್ಲಿ, ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ರಿಜ್ ಭೂಷಣ್ ಅವರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುವ ವಿಡಿಯೊ ಹೊರಹೊಮ್ಮಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಒಕ್ಕೂಟದ ಅಧ್ಯಕ್ಷರು ‘ಸರ್ವಾಧಿಕಾರ’ ನಡೆಸುತ್ತಿದ್ದು, ಕುಸ್ತಿಪಟುಗಳ ಮೇಲಿನ ದೌರ್ಜನ್ಯವು ವರ್ಷಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸುಮಾರು 30 ಮಂದಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅದರಲ್ಲಿ ಪ್ರಮುಖವಾಗಿ ಸರಿತಾ ಮೋರ್, ಸಂಗೀತಾ ಫೋಗಟ್, ಸತ್ಯವರ್ತ್ ಮಲಿಕ್, ಜಿತೇಂದರ್ ಕಿನ್ಹಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಸುಮಿತ್ ಮಲಿಕ್ ಕೂಡ ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಮಹಿಳಾ ಕುಸ್ತಿಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತುದಾರರಿಂದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಹಲವು ಹುಡುಗಿಯರ ಲೈಂಗಿಕ ಕಿರುಕುಳದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ.

ಫೆಡರೇಶನ್‌ನ ‘ಮೆಚ್ಚಿನವರು’ ಎಂದು ಪರಿಗಣಿಸುವ ಕೆಲವು ತರಬೇತುದಾರರು ಮಹಿಳಾ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ.

“ಇಂದು ನಾನು ಇದನ್ನು ಹೇಳಿದ್ದೇನೆ, ನಾಳೆ ನಾನು ಜೀವಂತವಾಗಿರುತ್ತೇನೆ ಎಂದು ನನಗೆ ತಿಳಿದಿಲ್ಲ. ಡಬ್ಲ್ಯುಎಫ್‌ಐನಲ್ಲಿರುವ ಜನರು ತುಂಬಾ ಶಕ್ತಿಶಾಲಿಗಳು” ಎಂದು ವಿನೇಶ್ ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಹರಿಯಾಣದವರಾದ ವಿನೇಶ್‌ ಫೋಗಟ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟುವಾಗಿದ್ದಾರೆ. ಅವರು ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಚಿನ್ನಗಳನ್ನು ಗೆದ್ದಿದ್ದಾರೆ. ವಿನೇಶ್ ಅವರ ಸೋದರಸಂಬಂಧಿ, ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅವರು 2020 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು.

ಒಂದು ದಶಕದಿಂದ ನನ್ನ ಸಮಸ್ಯೆಗಳನ್ನು ಆಲಿಸಲು ಫೆಡರೇಶನ್‌ ಜೊತೆಗೆ ಪ್ರಯತ್ನಿಸುತ್ತಿದ್ದೇನೆ ಎಂದು ವಿನೇಶ್ ಹೇಳಿದ್ದಾರೆ. ತಾನು ಮತ್ತು ಇತರ ಕುಸ್ತಿಪಟುಗಳು ಪ್ರಧಾನ ಮಂತ್ರಿ ಮತ್ತು ಅದನ್ನು ಕೇಳಬಹುದಾದ ಯಾವುದೇ ಹೈಕೋರ್ಟ್‌ಗೆ “ಸಾಕ್ಷ್ಯವನ್ನು ಸಲ್ಲಿಸಲು” ಸಿದ್ಧ ಎಂದು ಅವರು ANI ಗೆ ತಿಳಿಸಿದ್ದಾರೆ.

“ಇದು ನ್ಯಾಯೋಚಿತವಲ್ಲ ಮತ್ತು ನಾವು ಇದನ್ನು ಮೌನವಾಗಿ ಸಹಿಸಿಕೊಳ್ಳುತ್ತಿದ್ದೇವೆ. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಭಾರತೀಯ ಕುಸ್ತಿ ಒಕ್ಕೂಟದಿಂದ ಕುಸ್ತಿಪಟುಗಳಿಗೆ ಕಿರುಕುಳ ನೀಡಲಾಗುತ್ತಿದೆ. ಡಬ್ಲ್ಯುಎಫ್‌ಐನ ಭಾಗವಾಗಿರುವವರಿಗೆ ಕ್ರೀಡೆಯ ಬಗ್ಗೆ ಏನೂ ತಿಳಿದಿಲ್ಲ” ಎಂದು ಒಲಿಂಪಿಕ್‌ನಲ್ಲಿ ಕಂಚು ಗೆದ್ದಿರುವ ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕೂಡಾ, “ವಿವರಗಳನ್ನು ಬಹಿರಂಗಪಡಿಸಲು ಹಾಗೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಮಾತನಾಡಲು ಸಿದ್ಧರಾಗಿದ್ದೇವೆ. ಹೊಸ ಕುಸ್ತಿಪಟುಗಳ ಭವಿಷ್ಯವು ಸುರಕ್ಷಿತವಾಗಿರಲು ಇಡೀ ಒಕ್ಕೂಟವನ್ನು ರದ್ದು ಮಾಡಬೇಕು. ಹೊಸ ಒಕ್ಕೂಟ ಅಸ್ತಿತ್ವಕ್ಕೆ ಬರಬೇಕು” ಎಂದು ಹೇಳಿದ್ದಾರೆ.

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ ಬ್ರಿಜ್‌‌ಭೂಷಣ್‌, “ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಕಂಪನಿಯ ಲೋಗೋ ಇರುವ ಬಟ್ಟೆಯನ್ನು ಏಕೆ ಧರಿಸಿದ್ದರು. ಫೆಡರೇಶನ್ ಯಾವುದಾರೂ ಕ್ರೀಡಾಪಟುವಿಗೆ ಕಿರುಕುಳ ನೀಡಿದೆ ಎಂದು ಹೇಳುವ ಯಾರಾದರೂ ಇದ್ದಾರೆಯೇ?. ಲೈಂಗಿಕ ಕಿರುಕುಳದ ಯಾವುದೇ ಘಟನೆ ನಡೆದಿಲ್ಲ. ಒಂದು ವೇಳೆ ಅಂತಹ ಘಟನೆ ಸಂಭವಿಸಿದಲ್ಲಿ ತಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...