Homeಮುಖಪುಟಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

- Advertisement -
- Advertisement -

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಬ್ರಿಜ್ ಭೂಷಣ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಕೂಡಾ ಆಗಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಒಂದು ವೇಳೆ ನಿಜವಾಗಿಯೂ ಅಂತಹ ಘಟನೆ ನಡೆದಿದ್ದರೆ, ತಾನು ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. 2021 ರಲ್ಲಿ, ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ರಿಜ್ ಭೂಷಣ್ ಅವರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುವ ವಿಡಿಯೊ ಹೊರಹೊಮ್ಮಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಒಕ್ಕೂಟದ ಅಧ್ಯಕ್ಷರು ‘ಸರ್ವಾಧಿಕಾರ’ ನಡೆಸುತ್ತಿದ್ದು, ಕುಸ್ತಿಪಟುಗಳ ಮೇಲಿನ ದೌರ್ಜನ್ಯವು ವರ್ಷಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸುಮಾರು 30 ಮಂದಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅದರಲ್ಲಿ ಪ್ರಮುಖವಾಗಿ ಸರಿತಾ ಮೋರ್, ಸಂಗೀತಾ ಫೋಗಟ್, ಸತ್ಯವರ್ತ್ ಮಲಿಕ್, ಜಿತೇಂದರ್ ಕಿನ್ಹಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಸುಮಿತ್ ಮಲಿಕ್ ಕೂಡ ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಮಹಿಳಾ ಕುಸ್ತಿಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತುದಾರರಿಂದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಹಲವು ಹುಡುಗಿಯರ ಲೈಂಗಿಕ ಕಿರುಕುಳದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ.

ಫೆಡರೇಶನ್‌ನ ‘ಮೆಚ್ಚಿನವರು’ ಎಂದು ಪರಿಗಣಿಸುವ ಕೆಲವು ತರಬೇತುದಾರರು ಮಹಿಳಾ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ.

“ಇಂದು ನಾನು ಇದನ್ನು ಹೇಳಿದ್ದೇನೆ, ನಾಳೆ ನಾನು ಜೀವಂತವಾಗಿರುತ್ತೇನೆ ಎಂದು ನನಗೆ ತಿಳಿದಿಲ್ಲ. ಡಬ್ಲ್ಯುಎಫ್‌ಐನಲ್ಲಿರುವ ಜನರು ತುಂಬಾ ಶಕ್ತಿಶಾಲಿಗಳು” ಎಂದು ವಿನೇಶ್ ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಹರಿಯಾಣದವರಾದ ವಿನೇಶ್‌ ಫೋಗಟ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟುವಾಗಿದ್ದಾರೆ. ಅವರು ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಚಿನ್ನಗಳನ್ನು ಗೆದ್ದಿದ್ದಾರೆ. ವಿನೇಶ್ ಅವರ ಸೋದರಸಂಬಂಧಿ, ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅವರು 2020 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು.

ಒಂದು ದಶಕದಿಂದ ನನ್ನ ಸಮಸ್ಯೆಗಳನ್ನು ಆಲಿಸಲು ಫೆಡರೇಶನ್‌ ಜೊತೆಗೆ ಪ್ರಯತ್ನಿಸುತ್ತಿದ್ದೇನೆ ಎಂದು ವಿನೇಶ್ ಹೇಳಿದ್ದಾರೆ. ತಾನು ಮತ್ತು ಇತರ ಕುಸ್ತಿಪಟುಗಳು ಪ್ರಧಾನ ಮಂತ್ರಿ ಮತ್ತು ಅದನ್ನು ಕೇಳಬಹುದಾದ ಯಾವುದೇ ಹೈಕೋರ್ಟ್‌ಗೆ “ಸಾಕ್ಷ್ಯವನ್ನು ಸಲ್ಲಿಸಲು” ಸಿದ್ಧ ಎಂದು ಅವರು ANI ಗೆ ತಿಳಿಸಿದ್ದಾರೆ.

“ಇದು ನ್ಯಾಯೋಚಿತವಲ್ಲ ಮತ್ತು ನಾವು ಇದನ್ನು ಮೌನವಾಗಿ ಸಹಿಸಿಕೊಳ್ಳುತ್ತಿದ್ದೇವೆ. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಭಾರತೀಯ ಕುಸ್ತಿ ಒಕ್ಕೂಟದಿಂದ ಕುಸ್ತಿಪಟುಗಳಿಗೆ ಕಿರುಕುಳ ನೀಡಲಾಗುತ್ತಿದೆ. ಡಬ್ಲ್ಯುಎಫ್‌ಐನ ಭಾಗವಾಗಿರುವವರಿಗೆ ಕ್ರೀಡೆಯ ಬಗ್ಗೆ ಏನೂ ತಿಳಿದಿಲ್ಲ” ಎಂದು ಒಲಿಂಪಿಕ್‌ನಲ್ಲಿ ಕಂಚು ಗೆದ್ದಿರುವ ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕೂಡಾ, “ವಿವರಗಳನ್ನು ಬಹಿರಂಗಪಡಿಸಲು ಹಾಗೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಮಾತನಾಡಲು ಸಿದ್ಧರಾಗಿದ್ದೇವೆ. ಹೊಸ ಕುಸ್ತಿಪಟುಗಳ ಭವಿಷ್ಯವು ಸುರಕ್ಷಿತವಾಗಿರಲು ಇಡೀ ಒಕ್ಕೂಟವನ್ನು ರದ್ದು ಮಾಡಬೇಕು. ಹೊಸ ಒಕ್ಕೂಟ ಅಸ್ತಿತ್ವಕ್ಕೆ ಬರಬೇಕು” ಎಂದು ಹೇಳಿದ್ದಾರೆ.

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ ಬ್ರಿಜ್‌‌ಭೂಷಣ್‌, “ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಕಂಪನಿಯ ಲೋಗೋ ಇರುವ ಬಟ್ಟೆಯನ್ನು ಏಕೆ ಧರಿಸಿದ್ದರು. ಫೆಡರೇಶನ್ ಯಾವುದಾರೂ ಕ್ರೀಡಾಪಟುವಿಗೆ ಕಿರುಕುಳ ನೀಡಿದೆ ಎಂದು ಹೇಳುವ ಯಾರಾದರೂ ಇದ್ದಾರೆಯೇ?. ಲೈಂಗಿಕ ಕಿರುಕುಳದ ಯಾವುದೇ ಘಟನೆ ನಡೆದಿಲ್ಲ. ಒಂದು ವೇಳೆ ಅಂತಹ ಘಟನೆ ಸಂಭವಿಸಿದಲ್ಲಿ ತಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...