Homeಮುಖಪುಟಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

ಬಿಜೆಪಿ ಸಂಸದನಿಂದ ಕ್ರೀಡಾಪಟು & ತರಬೇತುದಾರರಿಗೆ ಲೈಂಗಿಕ ಕಿರುಕುಳ: ಪದಕ ವಿಜೇತ ಕುಸ್ತಿಪಟುಗಳಿಂದ ಪ್ರತಿಭಟನೆ

- Advertisement -
- Advertisement -

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಸದ ಬ್ರಿಜ್ ಭೂಷಣ್ ಅವರು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಕೂಡಾ ಆಗಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಒಂದು ವೇಳೆ ನಿಜವಾಗಿಯೂ ಅಂತಹ ಘಟನೆ ನಡೆದಿದ್ದರೆ, ತಾನು ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. 2021 ರಲ್ಲಿ, ರಾಂಚಿಯಲ್ಲಿ ನಡೆದ 15 ವರ್ಷದೊಳಗಿನವರ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಬ್ರಿಜ್ ಭೂಷಣ್ ಅವರು ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡುವ ವಿಡಿಯೊ ಹೊರಹೊಮ್ಮಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು, ಒಕ್ಕೂಟದ ಅಧ್ಯಕ್ಷರು ‘ಸರ್ವಾಧಿಕಾರ’ ನಡೆಸುತ್ತಿದ್ದು, ಕುಸ್ತಿಪಟುಗಳ ಮೇಲಿನ ದೌರ್ಜನ್ಯವು ವರ್ಷಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸುಮಾರು 30 ಮಂದಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದು, ಅದರಲ್ಲಿ ಪ್ರಮುಖವಾಗಿ ಸರಿತಾ ಮೋರ್, ಸಂಗೀತಾ ಫೋಗಟ್, ಸತ್ಯವರ್ತ್ ಮಲಿಕ್, ಜಿತೇಂದರ್ ಕಿನ್ಹಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಸುಮಿತ್ ಮಲಿಕ್ ಕೂಡ ಇದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಮಹಿಳಾ ಕುಸ್ತಿಪಟುಗಳು ರಾಷ್ಟ್ರೀಯ ಶಿಬಿರಗಳಲ್ಲಿ ತರಬೇತುದಾರರಿಂದ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ” ಎಂದು ವಿನೇಶ್ ಫೋಗಟ್ ಹೇಳಿದ್ದಾರೆ. ಹಲವು ಹುಡುಗಿಯರ ಲೈಂಗಿಕ ಕಿರುಕುಳದಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ.

ಫೆಡರೇಶನ್‌ನ ‘ಮೆಚ್ಚಿನವರು’ ಎಂದು ಪರಿಗಣಿಸುವ ಕೆಲವು ತರಬೇತುದಾರರು ಮಹಿಳಾ ತರಬೇತುದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ ಎಂದು ವಿನೇಶ್ ಆರೋಪಿಸಿದ್ದಾರೆ.

“ಇಂದು ನಾನು ಇದನ್ನು ಹೇಳಿದ್ದೇನೆ, ನಾಳೆ ನಾನು ಜೀವಂತವಾಗಿರುತ್ತೇನೆ ಎಂದು ನನಗೆ ತಿಳಿದಿಲ್ಲ. ಡಬ್ಲ್ಯುಎಫ್‌ಐನಲ್ಲಿರುವ ಜನರು ತುಂಬಾ ಶಕ್ತಿಶಾಲಿಗಳು” ಎಂದು ವಿನೇಶ್ ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಹರಿಯಾಣದವರಾದ ವಿನೇಶ್‌ ಫೋಗಟ್ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟುವಾಗಿದ್ದಾರೆ. ಅವರು ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಅನೇಕ ಚಿನ್ನಗಳನ್ನು ಗೆದ್ದಿದ್ದಾರೆ. ವಿನೇಶ್ ಅವರ ಸೋದರಸಂಬಂಧಿ, ಕುಸ್ತಿಪಟು ಬಬಿತಾ ಫೋಗಟ್ ಮತ್ತು ಅವರ ಚಿಕ್ಕಪ್ಪ ಮಹಾವೀರ್ ಫೋಗಟ್ ಅವರು 2020 ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದರು.

ಒಂದು ದಶಕದಿಂದ ನನ್ನ ಸಮಸ್ಯೆಗಳನ್ನು ಆಲಿಸಲು ಫೆಡರೇಶನ್‌ ಜೊತೆಗೆ ಪ್ರಯತ್ನಿಸುತ್ತಿದ್ದೇನೆ ಎಂದು ವಿನೇಶ್ ಹೇಳಿದ್ದಾರೆ. ತಾನು ಮತ್ತು ಇತರ ಕುಸ್ತಿಪಟುಗಳು ಪ್ರಧಾನ ಮಂತ್ರಿ ಮತ್ತು ಅದನ್ನು ಕೇಳಬಹುದಾದ ಯಾವುದೇ ಹೈಕೋರ್ಟ್‌ಗೆ “ಸಾಕ್ಷ್ಯವನ್ನು ಸಲ್ಲಿಸಲು” ಸಿದ್ಧ ಎಂದು ಅವರು ANI ಗೆ ತಿಳಿಸಿದ್ದಾರೆ.

“ಇದು ನ್ಯಾಯೋಚಿತವಲ್ಲ ಮತ್ತು ನಾವು ಇದನ್ನು ಮೌನವಾಗಿ ಸಹಿಸಿಕೊಳ್ಳುತ್ತಿದ್ದೇವೆ. ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ಭಾರತೀಯ ಕುಸ್ತಿ ಒಕ್ಕೂಟದಿಂದ ಕುಸ್ತಿಪಟುಗಳಿಗೆ ಕಿರುಕುಳ ನೀಡಲಾಗುತ್ತಿದೆ. ಡಬ್ಲ್ಯುಎಫ್‌ಐನ ಭಾಗವಾಗಿರುವವರಿಗೆ ಕ್ರೀಡೆಯ ಬಗ್ಗೆ ಏನೂ ತಿಳಿದಿಲ್ಲ” ಎಂದು ಒಲಿಂಪಿಕ್‌ನಲ್ಲಿ ಕಂಚು ಗೆದ್ದಿರುವ ಬಜರಂಗ್ ಪುನಿಯಾ ತಿಳಿಸಿದ್ದಾರೆ.

ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕೂಡಾ, “ವಿವರಗಳನ್ನು ಬಹಿರಂಗಪಡಿಸಲು ಹಾಗೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಮಾತನಾಡಲು ಸಿದ್ಧರಾಗಿದ್ದೇವೆ. ಹೊಸ ಕುಸ್ತಿಪಟುಗಳ ಭವಿಷ್ಯವು ಸುರಕ್ಷಿತವಾಗಿರಲು ಇಡೀ ಒಕ್ಕೂಟವನ್ನು ರದ್ದು ಮಾಡಬೇಕು. ಹೊಸ ಒಕ್ಕೂಟ ಅಸ್ತಿತ್ವಕ್ಕೆ ಬರಬೇಕು” ಎಂದು ಹೇಳಿದ್ದಾರೆ.

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ

ಕುಸ್ತಿ ಪಟುಗಳ ಆರೋಪ ನಿರಾಕರಿಸಿದ ಬಿಜೆಪಿ ಸಂಸದ ಬ್ರಿಜ್‌‌ಭೂಷಣ್‌, “ವಿನೇಶ್ ಫೋಗಟ್ ಅವರು ಒಲಿಂಪಿಕ್ಸ್‌ನಲ್ಲಿ ಕಂಪನಿಯ ಲೋಗೋ ಇರುವ ಬಟ್ಟೆಯನ್ನು ಏಕೆ ಧರಿಸಿದ್ದರು. ಫೆಡರೇಶನ್ ಯಾವುದಾರೂ ಕ್ರೀಡಾಪಟುವಿಗೆ ಕಿರುಕುಳ ನೀಡಿದೆ ಎಂದು ಹೇಳುವ ಯಾರಾದರೂ ಇದ್ದಾರೆಯೇ?. ಲೈಂಗಿಕ ಕಿರುಕುಳದ ಯಾವುದೇ ಘಟನೆ ನಡೆದಿಲ್ಲ. ಒಂದು ವೇಳೆ ಅಂತಹ ಘಟನೆ ಸಂಭವಿಸಿದಲ್ಲಿ ತಾನು ನೇಣು ಹಾಕಿಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...