Homeಕರ್ನಾಟಕಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

ಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಸಿದ್ದರಾಮಯ್ಯ ಮೇಲಿನ ಮುನಿಸಿನ ಕಾರಣಕ್ಕೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ರಾಜಕಾರಣಿ, ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ಜಯಲಕ್ಷ್ಮಿಪುರಂ ನಿವಾಸಕ್ಕೆ ಖುದ್ದು ಮುಖ್ಯಮಂತ್ರಿಗಳೆ ಇಂದು ಭೇಟಿ ಕೊಟ್ಟಿರುವುದು ಕುತೂಹಲ ಮೂಡಿಸಿದೆ.

ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲೇಬೇಕು ಎಂದು ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್‌ ಜತೆಗಿನ ಹಲವು ವರ್ಷಗಳ ಮನಸ್ಥಾಪ ಮರೆತು, ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮುನಿಸು ಶಮನ:

ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಮುಖ್ಯಮಂತ್ರಿ ಆಗಿದ್ದಾಗ ಶ್ರೀನಿವಾಸ್ ಪ್ರಸಾದ್ ಕಂದಾಯ ಸಚಿವರಾಗಿದ್ದರು. ನಂತರ, ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಲೋಕಸಭಾ ಚುನಾವಣೆ ಹೊತ್ತಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿರುವಂತೆ ಕಾಣುತ್ತಿದ್ದು, ಹಲವು ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಅವರನ್ನು ಭೇಟಿಯಾಗುವ ಮೂಲಕ ಇಬ್ಬರು ನಾಯಕರು ಮುನಿಸು ಅಂತ್ಯಗೊಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ನಾಳೆ ಮೈಸೂರಿಗೆ ಆಗಮಿಸಲಿದ್ದು, ಈ ಹೊತ್ತಿನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಕಳೆದ ಆರೇಳು ವರ್ಷಗಳಿಂದ ಈ ಇಬ್ಬರು ನಾಯಕರು ಪರಸ್ಪರ ಮುಖಾಮುಖಿಯಾಗಿರಲಿಲ್ಲ. ಸಿದ್ದರಾಮಯ್ಯ ಕುರಿತು ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಕಟುವಾದ ಮಾತುಗಳಿಂದ ಟೀಕಿಸುತ್ತಿದ್ದರು. ಇದೀಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ನೀಡಿರುವುದು ಕಮಲ ನಾಯಕರಿಗೆ ಶಾಕ್ ನೀಡಿದೆ.

ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದು, ಈ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌. ಲಕ್ಷ್ಮಣ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್ ಅವರನ್ನು ಬೆಂಬಲಿಸುವಂತೆ ಕೋರಿದರು ಎಂದು ತಿಳಿದುಬಂದಿದೆ.

ಪ್ರಸಾದ್ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾನು ಹಾಗೂ ಪ್ರಸಾದ್ ದೀರ್ಘಕಾಲದಿಂದ ಸ್ನೇಹಿತರು; ಜೊತೆಯಲ್ಲೇ ರಾಜಕಾರಣ ಮಾಡಿದವರು. ರಾಜಕೀಯವಾಗಿ ನಾನು ಕಾಂಗ್ರೆಸ್‌ನಲ್ಲಿದ್ದೆ, ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರು ರಾಜಕೀಯದಿಂದ ನಿವೃತ್ತರಾಗಿದ್ದು, ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲು ಬಂದಿದ್ದೆ” ಎಂರು.

“ನಾನು ಯಾವ ಪಕ್ಷಕ್ಕೂ ಬೆಂಬಲ ಕೊಡುವುದಿಲ್ಲ” ಎಂದು ಪ್ರಸಾದ್ ಹೇಳಿದ್ದಾರೆ.‌ ಆದ್ದರಿಂದ, ಅವರಿಂದ ರಾಜಕೀಯವಾಗಿ ಬೆಂಬಲ ಕೋರುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಏನನ್ನೂ ಚರ್ಚೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಅನುಕಂಪವಿರಲಿ ಎಂದು ಕೇಳಿಕೊಂಡಿದ್ದೇನೆ” ಎಂದು ತಿಳಿಸಿದರು.

ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ: ಪ್ರಸಾದ್

ಸಿಎಂ ಜತೆಗಿನ ಮಾತುಕತೆ ಬಳಿಕ ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಶ್ರೀನಿವಾಸ ಪ್ರಸಾದ್, “ನಾಳೆ ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಗಮಿಸುವಂತೆ ನನಗೆ ಆಹ್ವಾ ನ ಬಂದಿಲ್ಲ; ಬರುವುದೂ‌ ಇಲ್ಲ. ಅವರು ಕರೆದಿಲ್ಲ, ಕರೆಯುವುದೂ ಇಲ್ಲ, ನಾನು ಹೋಗುವುದೂ ಇಲ್ಲ” ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

“ಸಿದ್ದರಾಮಯ್ಯನವರ ಜೊತೆಗಿನ ಮಾತುಕತೆಯಲ್ಲಿ ನಾನು ರಾಜಕೀಯದ ಚರ್ಚೆ ನಡೆಸಿಲ್ಲ; ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದೆ. ಅವರು ಬೆಂಬಲ ಕೇಳಿದ್ದಾರೆ; ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನಷ್ಟೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ” ಎಂದು ಅವರು ಕಾಂಗ್ರೆಸ್ ಪರವಾಗಿ ಒಲವು ವ್ಯಕ್ತಪಡಿಸಿದ್ದಾರೆ.

ಬೋಸ್ ಹೇಳಿಕೆಯಿಂದ ಬಿಜೆಪಿಯಲ್ಲಿ ತಳಮಳ:

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, “ನಮಗೆ ಶ್ರೀನಿವಾಸ ಪ್ರಸಾದ್‌ ಅವರ ಬೆಂಬಲ ಇದೆ” ಎಂದು ಬಹಿರಂಗವಾಗಿ ಹೇಳಿದ್ದು, ಬಿಜೆಪಿಯಲ್ಲಿ ತಳಮಳ ಶುರುವಾಗಿದೆ.

ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸುನೀಲ್‌ ಬೋಸ್‌, “ಶ್ರೀನಿವಾಸ ಪ್ರಸಾದ್‌ ಅವರ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ಇದೆ. ಬಿಜೆಪಿ ಸಂಸದರ ಆಶೀರ್ವಾದ ಪಡೆದಿದ್ದೇನೆ. ಗೆದ್ದು ಬಾ ಎಂದು ನನಗೆ ಆಶೀರ್ವಾದ ಮಾಡಿದ್ದಾರೆ; ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಿದ್ದು, ನನ್ನ ಗೆಲುವು ನಿಶ್ಚಿತ” ಎಂದು ಬೋಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...