Homeಕರ್ನಾಟಕಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

ಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಸಿದ್ದರಾಮಯ್ಯ ಮೇಲಿನ ಮುನಿಸಿನ ಕಾರಣಕ್ಕೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ರಾಜಕಾರಣಿ, ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ಜಯಲಕ್ಷ್ಮಿಪುರಂ ನಿವಾಸಕ್ಕೆ ಖುದ್ದು ಮುಖ್ಯಮಂತ್ರಿಗಳೆ ಇಂದು ಭೇಟಿ ಕೊಟ್ಟಿರುವುದು ಕುತೂಹಲ ಮೂಡಿಸಿದೆ.

ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲೇಬೇಕು ಎಂದು ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್‌ ಜತೆಗಿನ ಹಲವು ವರ್ಷಗಳ ಮನಸ್ಥಾಪ ಮರೆತು, ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮುನಿಸು ಶಮನ:

ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಮುಖ್ಯಮಂತ್ರಿ ಆಗಿದ್ದಾಗ ಶ್ರೀನಿವಾಸ್ ಪ್ರಸಾದ್ ಕಂದಾಯ ಸಚಿವರಾಗಿದ್ದರು. ನಂತರ, ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಲೋಕಸಭಾ ಚುನಾವಣೆ ಹೊತ್ತಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿರುವಂತೆ ಕಾಣುತ್ತಿದ್ದು, ಹಲವು ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಅವರನ್ನು ಭೇಟಿಯಾಗುವ ಮೂಲಕ ಇಬ್ಬರು ನಾಯಕರು ಮುನಿಸು ಅಂತ್ಯಗೊಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ನಾಳೆ ಮೈಸೂರಿಗೆ ಆಗಮಿಸಲಿದ್ದು, ಈ ಹೊತ್ತಿನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಕಳೆದ ಆರೇಳು ವರ್ಷಗಳಿಂದ ಈ ಇಬ್ಬರು ನಾಯಕರು ಪರಸ್ಪರ ಮುಖಾಮುಖಿಯಾಗಿರಲಿಲ್ಲ. ಸಿದ್ದರಾಮಯ್ಯ ಕುರಿತು ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಕಟುವಾದ ಮಾತುಗಳಿಂದ ಟೀಕಿಸುತ್ತಿದ್ದರು. ಇದೀಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ನೀಡಿರುವುದು ಕಮಲ ನಾಯಕರಿಗೆ ಶಾಕ್ ನೀಡಿದೆ.

ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದು, ಈ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌. ಲಕ್ಷ್ಮಣ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್ ಅವರನ್ನು ಬೆಂಬಲಿಸುವಂತೆ ಕೋರಿದರು ಎಂದು ತಿಳಿದುಬಂದಿದೆ.

ಪ್ರಸಾದ್ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾನು ಹಾಗೂ ಪ್ರಸಾದ್ ದೀರ್ಘಕಾಲದಿಂದ ಸ್ನೇಹಿತರು; ಜೊತೆಯಲ್ಲೇ ರಾಜಕಾರಣ ಮಾಡಿದವರು. ರಾಜಕೀಯವಾಗಿ ನಾನು ಕಾಂಗ್ರೆಸ್‌ನಲ್ಲಿದ್ದೆ, ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರು ರಾಜಕೀಯದಿಂದ ನಿವೃತ್ತರಾಗಿದ್ದು, ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲು ಬಂದಿದ್ದೆ” ಎಂರು.

“ನಾನು ಯಾವ ಪಕ್ಷಕ್ಕೂ ಬೆಂಬಲ ಕೊಡುವುದಿಲ್ಲ” ಎಂದು ಪ್ರಸಾದ್ ಹೇಳಿದ್ದಾರೆ.‌ ಆದ್ದರಿಂದ, ಅವರಿಂದ ರಾಜಕೀಯವಾಗಿ ಬೆಂಬಲ ಕೋರುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಏನನ್ನೂ ಚರ್ಚೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಅನುಕಂಪವಿರಲಿ ಎಂದು ಕೇಳಿಕೊಂಡಿದ್ದೇನೆ” ಎಂದು ತಿಳಿಸಿದರು.

ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ: ಪ್ರಸಾದ್

ಸಿಎಂ ಜತೆಗಿನ ಮಾತುಕತೆ ಬಳಿಕ ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಶ್ರೀನಿವಾಸ ಪ್ರಸಾದ್, “ನಾಳೆ ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಗಮಿಸುವಂತೆ ನನಗೆ ಆಹ್ವಾ ನ ಬಂದಿಲ್ಲ; ಬರುವುದೂ‌ ಇಲ್ಲ. ಅವರು ಕರೆದಿಲ್ಲ, ಕರೆಯುವುದೂ ಇಲ್ಲ, ನಾನು ಹೋಗುವುದೂ ಇಲ್ಲ” ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

“ಸಿದ್ದರಾಮಯ್ಯನವರ ಜೊತೆಗಿನ ಮಾತುಕತೆಯಲ್ಲಿ ನಾನು ರಾಜಕೀಯದ ಚರ್ಚೆ ನಡೆಸಿಲ್ಲ; ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದೆ. ಅವರು ಬೆಂಬಲ ಕೇಳಿದ್ದಾರೆ; ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನಷ್ಟೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ” ಎಂದು ಅವರು ಕಾಂಗ್ರೆಸ್ ಪರವಾಗಿ ಒಲವು ವ್ಯಕ್ತಪಡಿಸಿದ್ದಾರೆ.

ಬೋಸ್ ಹೇಳಿಕೆಯಿಂದ ಬಿಜೆಪಿಯಲ್ಲಿ ತಳಮಳ:

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, “ನಮಗೆ ಶ್ರೀನಿವಾಸ ಪ್ರಸಾದ್‌ ಅವರ ಬೆಂಬಲ ಇದೆ” ಎಂದು ಬಹಿರಂಗವಾಗಿ ಹೇಳಿದ್ದು, ಬಿಜೆಪಿಯಲ್ಲಿ ತಳಮಳ ಶುರುವಾಗಿದೆ.

ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸುನೀಲ್‌ ಬೋಸ್‌, “ಶ್ರೀನಿವಾಸ ಪ್ರಸಾದ್‌ ಅವರ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ಇದೆ. ಬಿಜೆಪಿ ಸಂಸದರ ಆಶೀರ್ವಾದ ಪಡೆದಿದ್ದೇನೆ. ಗೆದ್ದು ಬಾ ಎಂದು ನನಗೆ ಆಶೀರ್ವಾದ ಮಾಡಿದ್ದಾರೆ; ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಿದ್ದು, ನನ್ನ ಗೆಲುವು ನಿಶ್ಚಿತ” ಎಂದು ಬೋಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...