Homeಕರ್ನಾಟಕಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

ಕುತೂಹಲ ಮೂಡಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್-ಸಿಎಂ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಸಿದ್ದರಾಮಯ್ಯ ಮೇಲಿನ ಮುನಿಸಿನ ಕಾರಣಕ್ಕೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ರಾಜಕಾರಣಿ, ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ಜಯಲಕ್ಷ್ಮಿಪುರಂ ನಿವಾಸಕ್ಕೆ ಖುದ್ದು ಮುಖ್ಯಮಂತ್ರಿಗಳೆ ಇಂದು ಭೇಟಿ ಕೊಟ್ಟಿರುವುದು ಕುತೂಹಲ ಮೂಡಿಸಿದೆ.

ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಲೇಬೇಕು ಎಂದು ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶ್ರೀನಿವಾಸ ಪ್ರಸಾದ್‌ ಜತೆಗಿನ ಹಲವು ವರ್ಷಗಳ ಮನಸ್ಥಾಪ ಮರೆತು, ಅವರ ಮನೆಗೆ ಭೇಟಿ ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮುನಿಸು ಶಮನ:

ಸಿದ್ದರಾಮಯ್ಯ ಅವರು ಮೊದಲ ಅವಧಿಗೆ ಮುಖ್ಯಮಂತ್ರಿ ಆಗಿದ್ದಾಗ ಶ್ರೀನಿವಾಸ್ ಪ್ರಸಾದ್ ಕಂದಾಯ ಸಚಿವರಾಗಿದ್ದರು. ನಂತರ, ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಲೋಕಸಭಾ ಚುನಾವಣೆ ಹೊತ್ತಲ್ಲಿ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿರುವಂತೆ ಕಾಣುತ್ತಿದ್ದು, ಹಲವು ವರ್ಷಗಳಿಂದ ಇದ್ದ ಮುನಿಸನ್ನು ಮರೆತು ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್ ಅವರನ್ನು ಭೇಟಿಯಾಗುವ ಮೂಲಕ ಇಬ್ಬರು ನಾಯಕರು ಮುನಿಸು ಅಂತ್ಯಗೊಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ನಾಳೆ ಮೈಸೂರಿಗೆ ಆಗಮಿಸಲಿದ್ದು, ಈ ಹೊತ್ತಿನಲ್ಲೇ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರನ್ನು ಸಿಎಂ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಕಳೆದ ಆರೇಳು ವರ್ಷಗಳಿಂದ ಈ ಇಬ್ಬರು ನಾಯಕರು ಪರಸ್ಪರ ಮುಖಾಮುಖಿಯಾಗಿರಲಿಲ್ಲ. ಸಿದ್ದರಾಮಯ್ಯ ಕುರಿತು ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಕಟುವಾದ ಮಾತುಗಳಿಂದ ಟೀಕಿಸುತ್ತಿದ್ದರು. ಇದೀಗ ಚುನಾವಣೆ ಹೊಸ್ತಿಲಲ್ಲಿ ಪ್ರಸಾದ್ ಮನೆಗೆ ಸಿದ್ದರಾಮಯ್ಯ ನೀಡಿರುವುದು ಕಮಲ ನಾಯಕರಿಗೆ ಶಾಕ್ ನೀಡಿದೆ.

ಇಬ್ಬರೂ ನಾಯಕರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚಿಸಿದ್ದು, ಈ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ‌. ಲಕ್ಷ್ಮಣ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸುನೀಲ್ ಬೋಸ್ ಅವರನ್ನು ಬೆಂಬಲಿಸುವಂತೆ ಕೋರಿದರು ಎಂದು ತಿಳಿದುಬಂದಿದೆ.

ಪ್ರಸಾದ್ ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾನು ಹಾಗೂ ಪ್ರಸಾದ್ ದೀರ್ಘಕಾಲದಿಂದ ಸ್ನೇಹಿತರು; ಜೊತೆಯಲ್ಲೇ ರಾಜಕಾರಣ ಮಾಡಿದವರು. ರಾಜಕೀಯವಾಗಿ ನಾನು ಕಾಂಗ್ರೆಸ್‌ನಲ್ಲಿದ್ದೆ, ಅವರು ಬಿಜೆಪಿಗೆ ಹೋಗಿದ್ದರು. ಈಗ ಅವರು ರಾಜಕೀಯದಿಂದ ನಿವೃತ್ತರಾಗಿದ್ದು, ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲು ಬಂದಿದ್ದೆ” ಎಂರು.

“ನಾನು ಯಾವ ಪಕ್ಷಕ್ಕೂ ಬೆಂಬಲ ಕೊಡುವುದಿಲ್ಲ” ಎಂದು ಪ್ರಸಾದ್ ಹೇಳಿದ್ದಾರೆ.‌ ಆದ್ದರಿಂದ, ಅವರಿಂದ ರಾಜಕೀಯವಾಗಿ ಬೆಂಬಲ ಕೋರುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಏನನ್ನೂ ಚರ್ಚೆ ಮಾಡಿಲ್ಲ. ಆದರೆ, ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಅನುಕಂಪವಿರಲಿ ಎಂದು ಕೇಳಿಕೊಂಡಿದ್ದೇನೆ” ಎಂದು ತಿಳಿಸಿದರು.

ಮೋದಿ ಸಮಾವೇಶಕ್ಕೆ ಆಹ್ವಾನ ಬಂದಿಲ್ಲ: ಪ್ರಸಾದ್

ಸಿಎಂ ಜತೆಗಿನ ಮಾತುಕತೆ ಬಳಿಕ ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಶ್ರೀನಿವಾಸ ಪ್ರಸಾದ್, “ನಾಳೆ ಮೈಸೂರಿನಲ್ಲಿ ನಡೆಯಲಿರುವ ಮೋದಿ ಸಮಾವೇಶಕ್ಕೆ ಆಗಮಿಸುವಂತೆ ನನಗೆ ಆಹ್ವಾ ನ ಬಂದಿಲ್ಲ; ಬರುವುದೂ‌ ಇಲ್ಲ. ಅವರು ಕರೆದಿಲ್ಲ, ಕರೆಯುವುದೂ ಇಲ್ಲ, ನಾನು ಹೋಗುವುದೂ ಇಲ್ಲ” ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

“ಸಿದ್ದರಾಮಯ್ಯನವರ ಜೊತೆಗಿನ ಮಾತುಕತೆಯಲ್ಲಿ ನಾನು ರಾಜಕೀಯದ ಚರ್ಚೆ ನಡೆಸಿಲ್ಲ; ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದೆ. ಅವರು ಬೆಂಬಲ ಕೇಳಿದ್ದಾರೆ; ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನಷ್ಟೆ. ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ” ಎಂದು ಅವರು ಕಾಂಗ್ರೆಸ್ ಪರವಾಗಿ ಒಲವು ವ್ಯಕ್ತಪಡಿಸಿದ್ದಾರೆ.

ಬೋಸ್ ಹೇಳಿಕೆಯಿಂದ ಬಿಜೆಪಿಯಲ್ಲಿ ತಳಮಳ:

ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಚಾಮರಾಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್ ಬೋಸ್ ಮಾತನಾಡಿ, “ನಮಗೆ ಶ್ರೀನಿವಾಸ ಪ್ರಸಾದ್‌ ಅವರ ಬೆಂಬಲ ಇದೆ” ಎಂದು ಬಹಿರಂಗವಾಗಿ ಹೇಳಿದ್ದು, ಬಿಜೆಪಿಯಲ್ಲಿ ತಳಮಳ ಶುರುವಾಗಿದೆ.

ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸುನೀಲ್‌ ಬೋಸ್‌, “ಶ್ರೀನಿವಾಸ ಪ್ರಸಾದ್‌ ಅವರ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ಇದೆ. ಬಿಜೆಪಿ ಸಂಸದರ ಆಶೀರ್ವಾದ ಪಡೆದಿದ್ದೇನೆ. ಗೆದ್ದು ಬಾ ಎಂದು ನನಗೆ ಆಶೀರ್ವಾದ ಮಾಡಿದ್ದಾರೆ; ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಿದ್ದು, ನನ್ನ ಗೆಲುವು ನಿಶ್ಚಿತ” ಎಂದು ಬೋಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಬಡ ಕುಟುಂಬಕ್ಕೆ ವಾರ್ಷಿಕ ₹1 ಲಕ್ಷ, 1 ಕೋಟಿ ಸರ್ಕಾರಿ ಉದ್ಯೋಗ: ಆರ್‌ಜೆಡಿ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...