Homeಕರ್ನಾಟಕಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ಗೆ ಭೇಟಿ ನೀಡಿ ಅಲ್ಲಿನ ತಿಂಡಿಗಳನ್ನು ಪ್ರಚಾರ ಮಾಡಿರುವ ವಿಡಿಯೊ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಬೆಂಗಳೂರಿನಲ್ಲಿ 51 ವರ್ಷಗಳ ಇತಿಹಾಸದಲ್ಲೆ ದಾಖಲೆಯ ಮಳೆ ಸುರಿದಿದೆ ಎಂದು ವರದಿಯಾಗಿದೆ. ಮಳೆಯ ಪರಿಣಾಮ ಬೆಂಗಳೂರಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದು ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ನೆರೆಯಿಂದಾಗಿ ಒಬ್ಬ ಯುವತಿ ವಿದ್ಯುತ್‌ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ನೆರೆಯು ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯ ಫಲ ಎಂದು ದೇಶದಾದ್ಯಂತ ಆಕ್ರೋಶವೂ ಭುಗಿಲೆದ್ದಿದೆ. ಈ ನಡುವೆ ಕ್ಷೇತ್ರವೊಂದನ್ನು ಪ್ರತಿನಿಧಿಸುವ ಸಂಸದರೊಬ್ಬರು ಜನರು ಸಂಕಷ್ಟದಲ್ಲಿ ಇರುವಾಗ ಅದರ ಬಗ್ಗೆ ಮಾತನಾಡದೆ ಯಾವುದೊ ಹೋಟೆಲ್ ಒಂದಕ್ಕೆ ತೆರಳಿ ಅದನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ಕೂಡಾ ಎದ್ದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಅವರು ಇನ್ಸ್‌ಟಾಗ್ರಾಂನಲ್ಲಿ ದೋಸೆಯ ಚಿತ್ರವೊಂದನ್ನು ನೋಡಿ ‘ಟೆಂಪ್ಟ್‌’ ಆಗಿ ಪದ್ಮನಾಗ ನಗರದ ಬಳಿಯ ಹೊಟೆಲ್‌ಗೆ ಬಂದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

“ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ ದೋಸೆ. ನೀವು ಬನ್ನಿ. ಅದನ್ನು ನೀವು ತಿಂದಾಗಲೆ ಅದರ ಆಸ್ವಾದನೆ ಗೊತ್ತಾಗೋದು. ಬಹಳ ಚೆನ್ನಾಗಿದೆ, ದಯವಿಟ್ಟು ಬನ್ನಿ. ಅದಲ್ಲದೆ ಇವರ ಉಪ್ಪಿಟ್ಟ ಬಹಳ ಚೆನ್ನಾಗಿದೆ. ಮನೆಯಲ್ಲಿ ಮಾಡಿದ್ರೆ ಮುಖ ಸಿಂಡರಿಸಿಕೊಂಡು ತಿಂತಾ ಇರಲಿಲ್ಲ. ಆದರೆ ಇಲ್ಲಿ ಉಪ್ಪಿಟ್ಟು ಬಹಳ ಚೆನ್ನಾಗಿದೆ. ಅದನ್ನೂ ಕೂಡಾ ಟ್ರೈ ಮಾಡಿ. ಧನ್ಯವಾದ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಲಾವಣ್ಯ ಬಳ್ಳಾಲ್ ಅವರು, “ಈ ವಿಡಿಯೊ ಸೆಪ್ಟೆಂಬರ್‌ 5 ರಂದು ಮಾಡಿದ್ದು. ಬೆಂಗಳೂರು ಮುಳುಗುತ್ತಿರುವಾಗ ತೇಜಸ್ವಿ ಸೂರ್ಯ ಒಳ್ಳೆಯ ಬೆಳಗ್ಗಿನ ತಿಂಡಿಯನ್ನು ತಿಂದು ಎಂಜಾಯ್ ಮಾಡುತ್ತಿದ್ದರು. ನೆರೆ ಬಂದಿರುವ ಪ್ರದೇಶದಕ್ಕೆ ಅವರು ಒಂದು ಬಾರಿಯಾದರೂ ಭೇಟಿ ನೀಡಿದ್ದಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸಾಮಾಜಿಕ ಕಾರ್ಯಕರ್ತ ಚೇತನ್ ಕೃಷ್ಣ ಅವರು, “ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕು. ಬೆಂಗಳೂರಿನ ಅರ್ಧ ಭಾಗ ಜಲಾವೃತವಾದಾಗ ಈ ಚೈಲ್ಡ್‌‌ ಚಪಾತಿ ಏನೂ ಆಗಿಲ್ಲ ಎಂಬಂತೆ ದೋಸೆ ಸವಿಯುತ್ತಿದ್ದಾರೆ. ಎಂತಹ ಅಸೂಕ್ಷ್ಮಯುಳ್ಳ ಕಪಟಿ” ಎಂದು ಕಿಡಿ ಕಾರಿದ್ದಾರೆ.

ಗಣೇಶ್ ನಚಿಕೇತು ಅವರು, “ಇಡೀ ಬೆಂಗಳೂರು ನಗರ ಜಲಾವೃತವಾಗಿದೆ. ಜನರು ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬೇಜವಾಬ್ದಾರಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಯಾವುದೋ ಹೋಟೆಲ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ವೀಡಿಯೊ ಸೆಪ್ಟೆಂಬರ್ 5 ರದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಭೂಷಣ್‌ ನಾಗ್‌ ಅವರು, “ಸಭೆಯೊಂದರಲ್ಲಿ ಬಿಜೆಪಿಯ ಪದ್ಮನಾಭನಗರ ಶಾಸಕ ಅಶೋಕ ಮಲಗಿದ್ದರೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ಮಾರುತ್ತಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಆದರೆ ಈ ವ್ಯಕ್ತಿಗಳು ವಿಶ್ರಾಂತಿಯಲ್ಲಿದ್ದು, ಚಿಲ್ ಆಗಿದ್ದಾರೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಹೆದ್ದಾರಿ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಂಡ ತೇಜಸ್ವಿ ಸೂರ್ಯ: ಸೂರ್ಯನ ಕೆಳಗೂ ಕತ್ತಲೆ ಎಂದ ಅಖಿಲೇಶ್ ಯಾದವ್

ವೈಟ್‌ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಹೇಳ್ಲಾ ……ಎಂಎಲ್ಎ ….ಎಂಪಿ ಆಗೋವರೆಲ್ಲ ಸಂಸಾರಿಗಳಾಗಿರಬೇಕು…..ಯುವಕರಿಗೆ ಕೊಟ್ಟು ದೇಶ ಉದ್ದಾರ ಆಗುತ್ತೆ ಅನ್ನೋದು ಕೇವಲ ಕಲ್ಪನೆ……. ಅವರು ದೊಡ್ಡ ಭ್ರಮೆಯಲ್ಲಿಟ್ಟುಕೊಂಡು ಭಾಷಣ ಬಿಗಿದ್ದಾರೆ ಅಷ್ಟೇ…..ಸಾಮಾಜಿಕ ಜ್ಞಾನ ಇರುವುದಿಲ್ಲ… ಇನ್ನು ಮುಂದೆ ಚುನಾವಣೆಯಲ್ಲಿ ಮತ ಹಾಕುವರೇ ಯೋಚನೆ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...