Homeಕರ್ನಾಟಕಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ಗೆ ಭೇಟಿ ನೀಡಿ ಅಲ್ಲಿನ ತಿಂಡಿಗಳನ್ನು ಪ್ರಚಾರ ಮಾಡಿರುವ ವಿಡಿಯೊ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಬೆಂಗಳೂರಿನಲ್ಲಿ 51 ವರ್ಷಗಳ ಇತಿಹಾಸದಲ್ಲೆ ದಾಖಲೆಯ ಮಳೆ ಸುರಿದಿದೆ ಎಂದು ವರದಿಯಾಗಿದೆ. ಮಳೆಯ ಪರಿಣಾಮ ಬೆಂಗಳೂರಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದು ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ನೆರೆಯಿಂದಾಗಿ ಒಬ್ಬ ಯುವತಿ ವಿದ್ಯುತ್‌ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ನೆರೆಯು ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯ ಫಲ ಎಂದು ದೇಶದಾದ್ಯಂತ ಆಕ್ರೋಶವೂ ಭುಗಿಲೆದ್ದಿದೆ. ಈ ನಡುವೆ ಕ್ಷೇತ್ರವೊಂದನ್ನು ಪ್ರತಿನಿಧಿಸುವ ಸಂಸದರೊಬ್ಬರು ಜನರು ಸಂಕಷ್ಟದಲ್ಲಿ ಇರುವಾಗ ಅದರ ಬಗ್ಗೆ ಮಾತನಾಡದೆ ಯಾವುದೊ ಹೋಟೆಲ್ ಒಂದಕ್ಕೆ ತೆರಳಿ ಅದನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ಕೂಡಾ ಎದ್ದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಅವರು ಇನ್ಸ್‌ಟಾಗ್ರಾಂನಲ್ಲಿ ದೋಸೆಯ ಚಿತ್ರವೊಂದನ್ನು ನೋಡಿ ‘ಟೆಂಪ್ಟ್‌’ ಆಗಿ ಪದ್ಮನಾಗ ನಗರದ ಬಳಿಯ ಹೊಟೆಲ್‌ಗೆ ಬಂದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

“ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ ದೋಸೆ. ನೀವು ಬನ್ನಿ. ಅದನ್ನು ನೀವು ತಿಂದಾಗಲೆ ಅದರ ಆಸ್ವಾದನೆ ಗೊತ್ತಾಗೋದು. ಬಹಳ ಚೆನ್ನಾಗಿದೆ, ದಯವಿಟ್ಟು ಬನ್ನಿ. ಅದಲ್ಲದೆ ಇವರ ಉಪ್ಪಿಟ್ಟ ಬಹಳ ಚೆನ್ನಾಗಿದೆ. ಮನೆಯಲ್ಲಿ ಮಾಡಿದ್ರೆ ಮುಖ ಸಿಂಡರಿಸಿಕೊಂಡು ತಿಂತಾ ಇರಲಿಲ್ಲ. ಆದರೆ ಇಲ್ಲಿ ಉಪ್ಪಿಟ್ಟು ಬಹಳ ಚೆನ್ನಾಗಿದೆ. ಅದನ್ನೂ ಕೂಡಾ ಟ್ರೈ ಮಾಡಿ. ಧನ್ಯವಾದ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಲಾವಣ್ಯ ಬಳ್ಳಾಲ್ ಅವರು, “ಈ ವಿಡಿಯೊ ಸೆಪ್ಟೆಂಬರ್‌ 5 ರಂದು ಮಾಡಿದ್ದು. ಬೆಂಗಳೂರು ಮುಳುಗುತ್ತಿರುವಾಗ ತೇಜಸ್ವಿ ಸೂರ್ಯ ಒಳ್ಳೆಯ ಬೆಳಗ್ಗಿನ ತಿಂಡಿಯನ್ನು ತಿಂದು ಎಂಜಾಯ್ ಮಾಡುತ್ತಿದ್ದರು. ನೆರೆ ಬಂದಿರುವ ಪ್ರದೇಶದಕ್ಕೆ ಅವರು ಒಂದು ಬಾರಿಯಾದರೂ ಭೇಟಿ ನೀಡಿದ್ದಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸಾಮಾಜಿಕ ಕಾರ್ಯಕರ್ತ ಚೇತನ್ ಕೃಷ್ಣ ಅವರು, “ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕು. ಬೆಂಗಳೂರಿನ ಅರ್ಧ ಭಾಗ ಜಲಾವೃತವಾದಾಗ ಈ ಚೈಲ್ಡ್‌‌ ಚಪಾತಿ ಏನೂ ಆಗಿಲ್ಲ ಎಂಬಂತೆ ದೋಸೆ ಸವಿಯುತ್ತಿದ್ದಾರೆ. ಎಂತಹ ಅಸೂಕ್ಷ್ಮಯುಳ್ಳ ಕಪಟಿ” ಎಂದು ಕಿಡಿ ಕಾರಿದ್ದಾರೆ.

ಗಣೇಶ್ ನಚಿಕೇತು ಅವರು, “ಇಡೀ ಬೆಂಗಳೂರು ನಗರ ಜಲಾವೃತವಾಗಿದೆ. ಜನರು ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬೇಜವಾಬ್ದಾರಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಯಾವುದೋ ಹೋಟೆಲ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ವೀಡಿಯೊ ಸೆಪ್ಟೆಂಬರ್ 5 ರದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಭೂಷಣ್‌ ನಾಗ್‌ ಅವರು, “ಸಭೆಯೊಂದರಲ್ಲಿ ಬಿಜೆಪಿಯ ಪದ್ಮನಾಭನಗರ ಶಾಸಕ ಅಶೋಕ ಮಲಗಿದ್ದರೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ಮಾರುತ್ತಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಆದರೆ ಈ ವ್ಯಕ್ತಿಗಳು ವಿಶ್ರಾಂತಿಯಲ್ಲಿದ್ದು, ಚಿಲ್ ಆಗಿದ್ದಾರೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಹೆದ್ದಾರಿ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಂಡ ತೇಜಸ್ವಿ ಸೂರ್ಯ: ಸೂರ್ಯನ ಕೆಳಗೂ ಕತ್ತಲೆ ಎಂದ ಅಖಿಲೇಶ್ ಯಾದವ್

ವೈಟ್‌ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಹೇಳ್ಲಾ ……ಎಂಎಲ್ಎ ….ಎಂಪಿ ಆಗೋವರೆಲ್ಲ ಸಂಸಾರಿಗಳಾಗಿರಬೇಕು…..ಯುವಕರಿಗೆ ಕೊಟ್ಟು ದೇಶ ಉದ್ದಾರ ಆಗುತ್ತೆ ಅನ್ನೋದು ಕೇವಲ ಕಲ್ಪನೆ……. ಅವರು ದೊಡ್ಡ ಭ್ರಮೆಯಲ್ಲಿಟ್ಟುಕೊಂಡು ಭಾಷಣ ಬಿಗಿದ್ದಾರೆ ಅಷ್ಟೇ…..ಸಾಮಾಜಿಕ ಜ್ಞಾನ ಇರುವುದಿಲ್ಲ… ಇನ್ನು ಮುಂದೆ ಚುನಾವಣೆಯಲ್ಲಿ ಮತ ಹಾಕುವರೇ ಯೋಚನೆ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...