Homeಕರ್ನಾಟಕಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

- Advertisement -
- Advertisement -

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಹೋಟೆಲ್‌ಗೆ ಭೇಟಿ ನೀಡಿ ಅಲ್ಲಿನ ತಿಂಡಿಗಳನ್ನು ಪ್ರಚಾರ ಮಾಡಿರುವ ವಿಡಿಯೊ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಬೆಂಗಳೂರಿನಲ್ಲಿ 51 ವರ್ಷಗಳ ಇತಿಹಾಸದಲ್ಲೆ ದಾಖಲೆಯ ಮಳೆ ಸುರಿದಿದೆ ಎಂದು ವರದಿಯಾಗಿದೆ. ಮಳೆಯ ಪರಿಣಾಮ ಬೆಂಗಳೂರಿನ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದು ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ನೆರೆಯಿಂದಾಗಿ ಒಬ್ಬ ಯುವತಿ ವಿದ್ಯುತ್‌ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ನೆರೆಯು ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯ ಫಲ ಎಂದು ದೇಶದಾದ್ಯಂತ ಆಕ್ರೋಶವೂ ಭುಗಿಲೆದ್ದಿದೆ. ಈ ನಡುವೆ ಕ್ಷೇತ್ರವೊಂದನ್ನು ಪ್ರತಿನಿಧಿಸುವ ಸಂಸದರೊಬ್ಬರು ಜನರು ಸಂಕಷ್ಟದಲ್ಲಿ ಇರುವಾಗ ಅದರ ಬಗ್ಗೆ ಮಾತನಾಡದೆ ಯಾವುದೊ ಹೋಟೆಲ್ ಒಂದಕ್ಕೆ ತೆರಳಿ ಅದನ್ನು ಪ್ರಚಾರ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ಕೂಡಾ ಎದ್ದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಅವರು ಇನ್ಸ್‌ಟಾಗ್ರಾಂನಲ್ಲಿ ದೋಸೆಯ ಚಿತ್ರವೊಂದನ್ನು ನೋಡಿ ‘ಟೆಂಪ್ಟ್‌’ ಆಗಿ ಪದ್ಮನಾಗ ನಗರದ ಬಳಿಯ ಹೊಟೆಲ್‌ಗೆ ಬಂದಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

“ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ ದೋಸೆ. ನೀವು ಬನ್ನಿ. ಅದನ್ನು ನೀವು ತಿಂದಾಗಲೆ ಅದರ ಆಸ್ವಾದನೆ ಗೊತ್ತಾಗೋದು. ಬಹಳ ಚೆನ್ನಾಗಿದೆ, ದಯವಿಟ್ಟು ಬನ್ನಿ. ಅದಲ್ಲದೆ ಇವರ ಉಪ್ಪಿಟ್ಟ ಬಹಳ ಚೆನ್ನಾಗಿದೆ. ಮನೆಯಲ್ಲಿ ಮಾಡಿದ್ರೆ ಮುಖ ಸಿಂಡರಿಸಿಕೊಂಡು ತಿಂತಾ ಇರಲಿಲ್ಲ. ಆದರೆ ಇಲ್ಲಿ ಉಪ್ಪಿಟ್ಟು ಬಹಳ ಚೆನ್ನಾಗಿದೆ. ಅದನ್ನೂ ಕೂಡಾ ಟ್ರೈ ಮಾಡಿ. ಧನ್ಯವಾದ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಲಾವಣ್ಯ ಬಳ್ಳಾಲ್ ಅವರು, “ಈ ವಿಡಿಯೊ ಸೆಪ್ಟೆಂಬರ್‌ 5 ರಂದು ಮಾಡಿದ್ದು. ಬೆಂಗಳೂರು ಮುಳುಗುತ್ತಿರುವಾಗ ತೇಜಸ್ವಿ ಸೂರ್ಯ ಒಳ್ಳೆಯ ಬೆಳಗ್ಗಿನ ತಿಂಡಿಯನ್ನು ತಿಂದು ಎಂಜಾಯ್ ಮಾಡುತ್ತಿದ್ದರು. ನೆರೆ ಬಂದಿರುವ ಪ್ರದೇಶದಕ್ಕೆ ಅವರು ಒಂದು ಬಾರಿಯಾದರೂ ಭೇಟಿ ನೀಡಿದ್ದಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಸಾಮಾಜಿಕ ಕಾರ್ಯಕರ್ತ ಚೇತನ್ ಕೃಷ್ಣ ಅವರು, “ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ನಾವು ಹೆಚ್ಚು ಜಾಗರೂಕರಾಗಿರಬೇಕು. ಬೆಂಗಳೂರಿನ ಅರ್ಧ ಭಾಗ ಜಲಾವೃತವಾದಾಗ ಈ ಚೈಲ್ಡ್‌‌ ಚಪಾತಿ ಏನೂ ಆಗಿಲ್ಲ ಎಂಬಂತೆ ದೋಸೆ ಸವಿಯುತ್ತಿದ್ದಾರೆ. ಎಂತಹ ಅಸೂಕ್ಷ್ಮಯುಳ್ಳ ಕಪಟಿ” ಎಂದು ಕಿಡಿ ಕಾರಿದ್ದಾರೆ.

ಗಣೇಶ್ ನಚಿಕೇತು ಅವರು, “ಇಡೀ ಬೆಂಗಳೂರು ನಗರ ಜಲಾವೃತವಾಗಿದೆ. ಜನರು ನಾನಾ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಬೇಜವಾಬ್ದಾರಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಯಾವುದೋ ಹೋಟೆಲ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ವೀಡಿಯೊ ಸೆಪ್ಟೆಂಬರ್ 5 ರದ್ದಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ಭೂಷಣ್‌ ನಾಗ್‌ ಅವರು, “ಸಭೆಯೊಂದರಲ್ಲಿ ಬಿಜೆಪಿಯ ಪದ್ಮನಾಭನಗರ ಶಾಸಕ ಅಶೋಕ ಮಲಗಿದ್ದರೆ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ಮಾರುತ್ತಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿದೆ ಆದರೆ ಈ ವ್ಯಕ್ತಿಗಳು ವಿಶ್ರಾಂತಿಯಲ್ಲಿದ್ದು, ಚಿಲ್ ಆಗಿದ್ದಾರೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಹೆದ್ದಾರಿ ಬಗ್ಗೆ ಸುಳ್ಳು ಮಾಹಿತಿ ಹಂಚಿಕೊಂಡ ತೇಜಸ್ವಿ ಸೂರ್ಯ: ಸೂರ್ಯನ ಕೆಳಗೂ ಕತ್ತಲೆ ಎಂದ ಅಖಿಲೇಶ್ ಯಾದವ್

ವೈಟ್‌ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಹೇಳ್ಲಾ ……ಎಂಎಲ್ಎ ….ಎಂಪಿ ಆಗೋವರೆಲ್ಲ ಸಂಸಾರಿಗಳಾಗಿರಬೇಕು…..ಯುವಕರಿಗೆ ಕೊಟ್ಟು ದೇಶ ಉದ್ದಾರ ಆಗುತ್ತೆ ಅನ್ನೋದು ಕೇವಲ ಕಲ್ಪನೆ……. ಅವರು ದೊಡ್ಡ ಭ್ರಮೆಯಲ್ಲಿಟ್ಟುಕೊಂಡು ಭಾಷಣ ಬಿಗಿದ್ದಾರೆ ಅಷ್ಟೇ…..ಸಾಮಾಜಿಕ ಜ್ಞಾನ ಇರುವುದಿಲ್ಲ… ಇನ್ನು ಮುಂದೆ ಚುನಾವಣೆಯಲ್ಲಿ ಮತ ಹಾಕುವರೇ ಯೋಚನೆ ಮಾಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...