Homeಮುಖಪುಟಬೆನ್ನು ನೋವು ಮತ್ತು ಕುತ್ತಿಗೆ ನೋವಿನ ಉಚಿತ ಚಿಕಿತ್ಸೆಗಾಗಿ ಸಂಸದನಾಗಿ ಮುಂದುವರೆಯುತ್ತೇನೆಂದ BJP ಸಂಸದ

ಬೆನ್ನು ನೋವು ಮತ್ತು ಕುತ್ತಿಗೆ ನೋವಿನ ಉಚಿತ ಚಿಕಿತ್ಸೆಗಾಗಿ ಸಂಸದನಾಗಿ ಮುಂದುವರೆಯುತ್ತೇನೆಂದ BJP ಸಂಸದ

ಮಂಗಳವಾರವಷ್ಟೇ ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿ.ಆರ್‌. ಪಾಟೀಲ್ ಅವರಿಗೆ ರಾಜಿನಾಮೆ ಪತ್ರ ಕಳುಹಿಸಿದ್ದ ವಾಸವ್, ಮುಂಬರುವ ಬಜೆಟ್ ಅಧಿವೇಶನದ ವೇಳೆ ತಮ್ಮ ಸಂಸದ ಸ್ಥಾನಕ್ಕೆ ಕೂಡಾ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.

- Advertisement -
- Advertisement -

ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು “ಪರಿಸರ ಸೂಕ್ಷ್ಮ ವಲಯ” ಎಂದು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ಮನ್ಸುಖ್ ವಾಸವ್, ಈ ಅಧಿಸೂಚನೆಯನ್ನು ವಿರೋಧಿಸಿ ಪಕ್ಷಕ್ಕೆ ನೀಡಿದ್ದಾರೆ ಎನ್ನಲಾಗಿದ್ದ ರಾಜೀನಾಮೆಯನ್ನು ಬುಧವಾರ ವಾಪಾಸ್ ಪಡೆದಿದ್ದಾರೆ.

ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ವಸಾವ್‌, “ನಾನು ಸಂಸದನಾಗಿ ಮುಂದುವರಿದರೆ ಮಾತ್ರ ನನ್ನ ಬೆನ್ನು ನೋವು ಮತ್ತು ಕುತ್ತಿಗೆ ನೋವಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಆ ಸೌಲಭ್ಯ ನನಗೆ ಸಿಗುವುದಿಲ್ಲ. ಪಕ್ಷದ ಮುಖಂಡರು ನನ್ನನ್ನು ವಿಶ್ರಾಂತಿ ಪಡೆಯಲು ಕೇಳಿಕೊಂಡಿದ್ದು, ಪಕ್ಷದ ಸ್ಥಳೀಯ ಕಾರ್ಯಕರ್ತರು ನನ್ನ ಪರವಾಗಿ ಕೆಲಸ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ರಾಜೀನಾಮೆ – ಕಾರಣವೇನು ಗೊತ್ತೇ?

“ಮುಖ್ಯಮಂತ್ರಿ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಬಿಜೆಪಿಯ ಹಿರಿಯ ನಾಯಕರು ಸಮಾಧಾನಪಡಿಸಿದರು. ಹಾಗಾಗಿ ರಾಜೀನಾಮೆ ಹಿಂಪಡೆದು, ಪಕ್ಷದಲ್ಲಿ ಮುಂದುವರಿಯಲಿದ್ದೇನೆ. ಅಲ್ಲದೆ ಸಂಸದನಾಗಿ ಸೇವೆ ಸಲ್ಲಿಸಲು ನಿರ್ಧರಿಸಿದ್ದೇನೆ” ಎಂದು ತಿಳಿಸಿದ್ದಾರೆ. ಮಂಗಳವಾರವಷ್ಟೇ ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿ.ಆರ್‌. ಪಾಟೀಲ್ ಅವರಿಗೆ ರಾಜಿನಾಮೆ ಪತ್ರ ಕಳುಹಿಸಿದ್ದ ವಾಸವ್, ಮುಂಬರುವ ಬಜೆಟ್ ಅಧಿವೇಶನದ ವೇಳೆ ತಮ್ಮ ಸಂಸದ ಸ್ಥಾನಕ್ಕೆ ಕೂಡಾ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.

ಸರ್ದಾರ್ ಪಟೇಲ್‌ರ ಏಕತಾ ಪ್ರತಿಮೆಯ ಸುತ್ತಲಿನ 121 ಗ್ರಾಮಗಳ ರೈತರು ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆಯನ್ನು ವಾಪಸ್ ಪಡೆಯಬೇಕೆಂದು ಆದಿವಾಸಿ ನಾಯಕರೂ ಆಗಿರುವ ಮನ್ಸುಖ್ ಪ್ರಧಾನಿಗೆ ಪತ್ರ ಬರೆದಿದ್ದರು. ಈಗಾಗಲೇ ಶೂಲ್ಪನೇಶ್ವರ್ ವನ್ಯಜೀವಿ ಧಾಮದ ಸುತ್ತಲಿನ ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ” ಎಂದು ಘೋಷಿಸುವ ಅಂತಿಮ ಅಧಿಸೂಚನೆಯ ಕುರಿತಂತೆ ನರ್ಮದಾ ಜಿಲ್ಲೆಯ ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅಧಿಸೂಚನೆಯ ನೆಪದಲ್ಲಿ ಅಧಿಕಾರಿಗಳು ಆದಿವಾಸಿಗಳ ಖಾಸಗಿ ಜಮೀನುಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಆರೋಪಗಳು ಕೇಳಿಬರುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...