Homeಮುಖಪುಟಮುಸ್ಲಿಮರನ್ನು ಸಂಪೂರ್ಣ ಬಹಿಷ್ಕರಿಸಿ: ಬಿಜೆಪಿ ಸಂಸದ ಪ್ರಚೋದನೆ

ಮುಸ್ಲಿಮರನ್ನು ಸಂಪೂರ್ಣ ಬಹಿಷ್ಕರಿಸಿ: ಬಿಜೆಪಿ ಸಂಸದ ಪ್ರಚೋದನೆ

- Advertisement -
- Advertisement -

“ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕು” ಎಂದು ಪಶ್ಚಿಮ ದೆಹಲಿ ಭಾರತೀಯ ಜನತಾ ಪಕ್ಷದ ಸಂಸದ ಪರ್ವೇಶ್ ವರ್ಮಾ ಅವರು ಭಾನುವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದೇ ತಿಂಗಳು ಮೂವರು ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಮನೀಶ್ ಎಂಬವರ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೇತೃತ್ವದಲ್ಲಿ ಬಲಪಂಥಿಯ ಸಂಘಟನೆಗಳು ‘ವಿರಾಟ್ ಹಿಂದೂ ಸಭಾ’ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಸಮಾರಂಭ ಉದ್ದೇಶಿಸಿ ಮಾತನಾಡಿದ ಬಿಜೆಪಿ ಪರ್ವೇಶ್‌ ವರ್ಮಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾಗಪುರದ ದಸರಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ “ಅಲ್ಪಸಂಖ್ಯಾತರಿಗೆ ಅಪಾಯವಿಲ್ಲ” ಎಂದು ಹೇಳಿಕೆ ಕೊಟ್ಟಿದ್ದರು. ಇದೀಗ ಬಿಜೆಪಿಯ ಸಂಸದರ ಮುಸ್ಲಿಂ ಸಮುದಾಯದ ಬಹಿಷ್ಕಾರದ ಕರೆ ಎಲ್ಲೆಡೆ ಟೀಕೆಗೆ ಗುರಿಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಸದರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರ್ಮಾ ಅವರಿಗಿಂತ ಮೊದಲು ಮಾತನಾಡಿದ ವಿಎಚ್‌ಪಿ ಅಂತರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್, “ಒಂದು ನಿರ್ದಿಷ್ಟ ಸಮುದಾಯದ ಜನರು ದೆಹಲಿಯನ್ನು ಮಿನಿ ಪಾಕಿಸ್ತಾನ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪರ್ವೇಶ್ ವರ್ಮಾ, “ಮುಸ್ಲಿಮರು ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ, ನಾವು ಅವರ ಅಂಗಡಿಗಳಿಂದ ತರಕಾರಿ ಖರೀದಿಸುವುದನ್ನು ನಿಲ್ಲಿಸಬೇಕು. ಮಾಂಸಾಹಾರ ಮಾರಾಟ ಮಾಡುತ್ತಿದ್ದಾರೆ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ಗೆ ಹೇಳಿ ಪರವಾನಗಿ ಇಲ್ಲದ ಅಂಗಡಿಗಳನ್ನು ಮುಚ್ಚಬೇಕು. ಅವರು ನಡೆಸುವ ರೆಸ್ಟೋರೆಂಟ್‌ಗಳನ್ನು ಬಹಿಷ್ಕರಿಸಬೇಕು” ಎಂದು ಪ್ರಚೋದಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, “ಅವರಿಗೆ ಪಾಠ ಕಲಿಸಲು ನೀವು ಬಯಸುವುದಾದರೆ ಅದಕ್ಕೆ ಸಂಪೂರ್ಣ ಬಹಿಷ್ಕಾರವೊಂದೇ ದಾರಿ” ಎಂದು ಕರೆ ಕೊಟ್ಟ ಪರ್ವೇಶ್ ವರ್ಮಾ, ತಮ್ಮ ಮಾತಿಗೆ ಒಪ್ಪುವುದಾದರೆ ಕೈ ಮೇಲೆತ್ತುವಂತೆ ಜನರನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿರಿ: ಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

“ನಾವು ಅವರನ್ನು ಸಂಪೂರ್ಣವಾಗಿ ಬಹಿಷ್ಕರಿಸುತ್ತೇವೆ ಎಂದು ನನ್ನೊಂದಿಗೆ ಹೇಳಿ. ನಾವು ಅವರಿಂದ ಏನನ್ನೂ ಖರೀದಿಸುವುದಿಲ್ಲ. ನಾವು ಅವರಿಗೆ ಯಾವುದೇ ವೇತನ ನೀಡುವುದಿಲ್ಲ” ಎಂದಿರುವ ವರ್ಮಾ ಪ್ರತಿಭಟನೆಯಲ್ಲಿ ಹಾಜರಿದ್ದ ಎಲ್ಲರೂ ಪ್ರತಿಜ್ಞೆ ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿ ಸಂಸದರ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದ ಅಸಾವುದ್ದಿನ್ ಓವೈಸಿ, “ಆರ್‌ಎಸ್‌ಎಸ್‌ನ ಮೋಹನ್ ಭಾಗವತ್, ಮುಸ್ಲಿಮರಲ್ಲಿ ಹುಸಿಭಯ ಹರಡಿಸಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ‍ರಾಷ್ಟ್ರ ರಾಜಧಾನಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರು ಮುಸ್ಲಿಮರನ್ನು ಬಹಿಷ್ಕರಿಸುವ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಾಸ್ತವ ಏನೆಂದರೆ ಬಿಜೆಪಿಯು ಮುಸ್ಲಿಮರ ವಿರುದ್ಧ ಸಮರ ಆರಂಭಿಸಿದೆ. ಈ ಕುರಿತು ದೆಹಲಿ ಮುಖ್ಯಮಂತ್ರಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಮೌನವಹಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...