Homeಮುಖಪುಟರೈತರ ಮೇಲೆ ಕಾರು ಹರಿಸುತ್ತಿರುವ ವೈರಲ್ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ರೈತರ ಮೇಲೆ ಕಾರು ಹರಿಸುತ್ತಿರುವ ವೈರಲ್ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆಯ ವಿಡಿಯೋವೊಂದು ಸೋಮವಾರ ರಾತ್ರಿಯಿಂದ ದೇಶಾದ್ಯಂತ ವೈರಲ್ ಆಗುತ್ತಿದೆ. ಅದೇ ವಿಡಿಯೋವನ್ನು ಉತ್ತರ ಪ್ರದೇಶದ ಫಿಲಿಬಿತ್ ಲೋಕಸಭಾ ಕ್ಷೇತ್ರದ ಸಂಸದ ವರುಣ್ ಗಾಂಧಿ ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಲಖಿಂಪುರ್ ಖೇರಿಯಲ್ಲಿ ಉದ್ದೇಶಪೂರ್ವಕವಾಗಿ ವಾಹನವನ್ನು ರೈತರ ಮೇಲೆ ಹರಿಸುವ ಈ ವಿಡಿಯೋ ಎಲ್ಲರ ಆತ್ಮವನ್ನೂ ಅಲ್ಲಾಡಿಸುತ್ತದೆ. ಪೊಲೀಸರು ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿ ಈ ವಾಹನಗಳ ಮಾಲೀಕರು, ಅದರಲ್ಲಿ ಕುಳಿತಿರುವ ಜನರು ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ತಕ್ಷಣ ಬಂಧಿಸಬೇಕು” ಎಂಂದು ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ಹರಿದ ಆ ಕಾರು ಕೇಂದ್ರ ಸಚಿವ ಅಜಯ್‌ ಮಿಶ್ರಾರವರಿಗೆ ಸೇರಿದ್ದು ಅದರಲ್ಲಿ ಅವರ ಮಗ ಆಶಿಶ್ ಮಿಶ್ರಾ ಇದ್ದು ಕಾರು ಚಲಾಯಿಸುತ್ತಿದ್ದರು ಎಂದು ರೈತರು ದೂರಿದ್ದಾರೆ.

ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ..

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

ನಿನ್ನೆ ರೈತರು ಆರೋಪಿಸಿದಂತೆ ಕಾರಿನ ಬಣ್ಣಕ್ಕೂ ಇಂದು ವೈರಲ್ ಆಗಿರುವ ಕಾರಿನ ಬಣ್ಣಕ್ಕೂ ಹೊಂದಾಣಿಕೆಯಾಗಿದೆ. ಅದೇ ರೀತಿ ಹಿಂದಿನಿಂದ ಬಂದು ಗುದ್ದಿದ್ದು ಸಹ ದಾಖಲಾಗಿದೆ. ವಿಡಿಯೋದಲ್ಲಿ ದಾಖಲಾಗಿರುವ ರೈತರೇ ಮೃತಪಟ್ಟಿರುವುದರಿಂದ ಈ ವಿಡಿಯೋಗೆ ಸಾಕಷ್ಟು ಮಾನ್ಯತೆ ಸಿಕ್ಕಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ “ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ನಿಮ್ಮ ಸರ್ಕಾರ ನನ್ನನ್ನು ಯಾವುದೇ ಎಫ್‌ಐಆರ್ ಅಥವಾ ಯಾವುದೇ ಆದೇಶವಿಲ್ಲದೆ ಕಳೆದ 28 ಗಂಟೆಗಳಿಂದ ಬಂಧನದಲ್ಲಿಟ್ಟಿದೆ. ಆದರೆ ಅನ್ನದಾತರ ಮೇಲೆ ಕಾರು ಹರಿಸಿದ ಈ ವ್ಯಕ್ತಿಯನ್ನುಇದುವರೆಗೂ ಬಂಧಿಸಿಲ್ಲ ಏಕೆ” ಎಂದು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಮೇಲೆ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕು ಮತ್ತು ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ವರುಣ್ ಗಾಂಧಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಸೋಮವಾರ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...