Homeಮುಖಪುಟರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ...

ರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಮೇಲೆ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕು ಮತ್ತು ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ವರುಣ್ ಗಾಂಧಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ಅಕ್ಟೋಬರ್‌ 3ರಂದು ನಡೆದ ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು ‘ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರನ್ನು ನಿರ್ದಯವಾಗಿ ಹೊಸಕಿಹಾಕುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಗೆ ನಾಗರಿಕರು ಮತ್ತು ದೇಶವು ಆಕ್ರೋಶ ವ್ಯಕ್ತಪಡಿಸಿದೆ. ಈ ಘಟನೆಯ ಒಂದು ದಿನ ಮೊದಲು ಅಹಿಂಸೆಯ ಆರಾಧಕ ಮಹಾತ್ಮಗಾಂಧಿ ಅವರ ಜಯಂತಿ ಆಚರಿಸಿದ್ದೇವೆ. ಮರುದಿನವೇ ಲಖಿಂಪುರ್ ಖೇರಿಯಲ್ಲಿ ಅನ್ನದಾತರ ಹತ್ಯೆ ನಡೆದಿರುವುದು ಅಕ್ಷಮ್ಯ” ಎಂದು ವರುಣ್‌ ಗಾಂಧಿ ಬರೆದಿದ್ದಾರೆ.

ಹೋರಾಟನಿರತ ರೈತರು ನಮ್ಮ ಸೋದರರು, ನಮ್ಮ ನಾಗರಿಕರು. ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಿದ್ದಾರೆ ಮತ್ತು ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳ ಆಧಾರದ ಮೇಲೆ ಪ್ರತಿಭಟನೆ ಮಾಡುತ್ತಿದ್ದಾರೆ. ಅಂತಹವರ ಜೊತೆ ನಾವು ತಾಳ್ಮೆಯಿಂದ ವರ್ತಿಸಬೇಕು. ನಾವು ಯಾವುದೇ ಸಂದರ್ಭದಲ್ಲಿ ನಮ್ಮ ರೈತರೊಂದಿಗೆ ಗಾಂಧಿವಾದ ಮತ್ತು ಪ್ರಜಾತಾಂತ್ರಿಕ ರೀತಿಯಲ್ಲೇ ಕಾನೂನಿನ ಚೌಕಟ್ಟಿನೊಳಗೆ ಸಂವೇದನೆಶೀಲತೆಯೊಂದಿಗೆ ವ್ಯವಹರಿಸಬೇಕು. ಈ ಘಟನೆಯಲ್ಲಿ ಹುತಾತ್ಮರಾಗಿರುವ ರೈತ ಸೋದರರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ ಮತ್ತು ಅವರ ಕುಟುಂಬದವರ ದುಃಖವನ್ನು ಹಂಚಿಕೊಳ್ಳೂತ್ತೇನೆ” ಎಂದಿದ್ದಾರೆ.

”ನಿಮ್ಮಲ್ಲಿ ನನ್ನ ಮನವಿ ಏನೆಂದರೆ, ಘಟನೆಗೆ ಸಂಬಂಧಿಸಿದ ಎಲ್ಲರನ್ನೂ ಐಪಿಸಿ 302ರ ಪ್ರಕಾರ ಪ್ರಕರಣ ದಾಖಲಿಸಬೇಕು, ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸಿಬಿಐ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ಸಂತ್ರಸ್ತ ರೈತ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಬೇಕು. ಜೊತೆಗೆ ಭವಿಷ್ಯದಲ್ಲಿ ರೈತರ ವಿಷಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸುತ್ತೀರೆಂದು ಭಾವಿಸುತ್ತೇನೆ” ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಸಾವು; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...